AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜೊತೆಗೂಡಿ ಪತಿಯ ಕೊಲೆ; ಆರು ತಿಂಗಳ ನಂತರ ತಾಯಿಯ ಕ್ರೂರತೆ ಬಗ್ಗೆ ಬಾಯಿಬಿಟ್ಟ ಮಕ್ಕಳು

ಮಲಗಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಘಟನೆ ನಡೆದ ಆರು ತಿಂಗಳ ನಂತರ ತಂದೆಯ ಹತ್ಯೆಯನ್ನು ಕಣ್ಣಾರೆ ಕಂಡಿದ್ದ ಮಕ್ಕಳು, ತಾಯಿಯ ಕ್ರೂರತೆಯನ್ನು ಬಾಯಿಬಿಟ್ಟಿದ್ದಾರೆ.

ಪ್ರಿಯಕರನ ಜೊತೆಗೂಡಿ ಪತಿಯ ಕೊಲೆ; ಆರು ತಿಂಗಳ ನಂತರ ತಾಯಿಯ ಕ್ರೂರತೆ ಬಗ್ಗೆ ಬಾಯಿಬಿಟ್ಟ ಮಕ್ಕಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 07, 2023 | 2:43 PM

Share

ಬೆಂಗಳೂರು: ಮದ್ಯ ಸೇವನೆ ಮಾಡಿ ಬಂದು ಮಲಗಿದ್ದ ವ್ಯಕ್ತಿಯ ಕೊಲೆ (Murder) ಪ್ರಕರಣದ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ತನ್ನ ತಂದೆಯ ಹತ್ಯೆಯನ್ನು ಕಣ್ಣಾರೆ ಕಂಡಿದ್ದ ಮಕ್ಕಳು, ಘಟನೆ ನಡೆದ ಆರು ತಿಂಗಳ ನಂತರ ತನ್ನ ತಾಯಿಯ ಕ್ರೂರತೆ ಬಗ್ಗೆ ಬಾಯಿಬಿಟ್ಟಿದ್ದಾರೆ. ಕುಡಿದು ಬಂದು ಮಲಗಿದ್ದ ತಂದೆಯನ್ನು ತಾಯಿ ಅನಿತಾ (31) ಹಾಗೂ ವ್ಯಕ್ತಿಯೊಬ್ಬರ ಜೊತೆ ಸೇರಿಸಿಕೊಂಡು ಉಸಿರುಗಟ್ಟಿಸಿ ಕೊಲೆ (Wife Kills Husband) ಮಾಡಿರುವುದಾಗಿ ಮಕ್ಕಳು ಬಾಯಿಬಿಟ್ಟಿದ್ದಾರೆ.

ನಗರದ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಸಂಜಯ್ ಗಾಂಧಿನಗರದ ಸ್ಲಂನಲ್ಲಿ ಆರು‌ ತಿಂಗಳ ಹಿಂದೆ ಆಂಜನೇಯ (35) ಎಂಬ ವ್ಯಕ್ತಿಯ ಕೊಲೆ ನಡೆದಿತ್ತು. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದರು. ಮಕ್ಕಳಿಗೆ ತಂದೆ ಸರಿಯಿಲ್ಲ ಯಾರಿಗೂ ಹೇಳಬೇಡಿ ಎಂದು, ಹಾರ್ಟ್ ಅಟ್ಯಾಕ್ ಆಗಿದೆ ಅಂತ ಸಂಬಂಧಿಕರಿಗೆ ಆಂಜನೇಯನ ಪತ್ನಿ ಕಟ್ಟುಕತೆ ಹೇಳಿದ್ದಳು.

ಇದನ್ನೂ ಓದಿ: ದೇವನಹಳ್ಳಿ: ಪ್ರೀತ್ಸೆ ಪ್ರೀತ್ಸೆ ಅಂತಿದ್ದ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

ಅನಿತಾಳ ಮರಳು ಮಾತುಗಳನ್ನ ನಂಬಿದ ಕುಟುಂಬಸ್ಥರು ಆಂಜನೇಯ ಅವರ ಅಂತ್ಯಕ್ರಿಯೆ ಮಾಡಿದ್ದರು. ಆದರೆ ಇತ್ತೀಚೆಗೆ ಮಕ್ಕಳನ್ನ ಬಿಟ್ಟು ಪ್ರಿಯಕರ ರಾಕೇಶ್ ಜೊತೆ ಅನಿತಾ ಹೋಗಿದ್ದಾಳೆ. ಈ ವೇಳೆ ಮಕ್ಕಳು ತಂದೆಯ ಕೊಲೆ ಹಾಗೂ ತಾಯಿಯ ಕ್ರೂರತೆ ಬಗ್ಗೆ ಅಜ್ಜಿಯ ಬಳಿ ಹೇಳಿಕೊಂಡಿದ್ದಾರೆ. ಕೂಡಲೇ ಮೃತನ ತಾಯಿ (ಮಕ್ಕಳ ಅಜ್ಜಿ) ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆರೋಪಿಗಳಾದ ಅನಿತಾ ಮತ್ತು ಈಕೆಯ ಪ್ರಿಯಕರ ರಾಕೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ