AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಗಮನಿಸಿ: ಪೂರ್ವ, ದಕ್ಷಿಣ ವಲಯಗಳ ಈ ಭಾಗಗಳಲ್ಲಿ ನಾಳೆ ನೀರು ಸರಬರಾಜು ವ್ಯತ್ಯಯ

ಕಾವೇರಿ 5ನೇ ಹಂತದ ಯೋಜನೆಯಡಿ EMF ಮೀಟರ್‌ಗಳ ಅಳವಡಿಕೆ ಕಾಮಗಾರಿಯಿಂದ ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ವಲಯಗಳಲ್ಲಿ ಫೆಬ್ರವರಿ 26 ರಂದು 24 ಗಂಟೆಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬೆಳಿಗ್ಗೆ 6 ರಿಂದ ಪಂಪಿಂಗ್ ಸ್ಥಗಿತಗೊಳ್ಳಲಿದ್ದು, ನಿವಾಸಿಗಳು ಸಹಕರಿಸುವಂತೆ ಜಲಮಂಡಳಿ ಮನವಿ ಮಾಡಿದೆ. ಮರುಪ್ರಾರಂಭದ ನಂತರವೂ ನೀರು ಮನೆಗಳಿಗೆ ತಲುಪಲು 3-6 ಗಂಟೆಗಳು ಬೇಕಾಗಬಹುದು. ಹೀಗಾಗಿ ಉಂಟಾಗಲಿರುವ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸೋದಾಗಿಯೂ ತಿಳಿಸಿದೆ.

ಬೆಂಗಳೂರಿಗರೇ ಗಮನಿಸಿ: ಪೂರ್ವ, ದಕ್ಷಿಣ ವಲಯಗಳ ಈ ಭಾಗಗಳಲ್ಲಿ ನಾಳೆ ನೀರು ಸರಬರಾಜು ವ್ಯತ್ಯಯ
ಸಾಂದರ್ಭಿಕ ಚಿತ್ರImage Credit source: Google
ಪ್ರಸನ್ನ ಹೆಗಡೆ
|

Updated on: Feb 25, 2026 | 3:58 PM

Share

ಬೆಂಗಳೂರು, ಫೆಬ್ರವರಿ 25: ಕಾವೇರಿ 5ನೇ ಹಂತದ ಯೋಜನೆಯಡಿ ಹೊಸ EMF ಮೀಟರ್‌ಗಳನ್ನು ಅಳವಡಿಸುವ ಕಾಮಗಾರಿಯ ಹಿನ್ನೆಲೆ ಫೆಪ್ರವರಿ 26ರ ಗುರುವಾರ (ನಾಳೆ) ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ವಲಯಗಳಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕಾಮಗಾರಿ ಹಿನ್ನೆಲೆ ಪಂಪಿಂಗ್​​ ಕಾರ್ಯ ನಡೆಯದ ಕಾರಣ ಈ ಭಾಗದ ನಿವಾಸಿಗಳು 24 ಗಂಟೆಗಳ ನೀರು ಪೂರೈಕೆ ವ್ಯತ್ಯಯಕ್ಕೆ ಸಿದ್ಧರಾಗಬೇಕಾಗಿದೆ. ಈ ಕಾರ್ಯದಲ್ಲಿ ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಸಾರ್ವಜನಿಕರನ್ನು ಆಗ್ರಹಿಸಿದ್ದು, ಅನಾನುಕೂಲತೆಗಾಗಿ ವಿಷಾದವನ್ನೂ ವ್ಯಕ್ತಪಡಿಸಿದ್ದಾರೆ.

ಎಲ್ಲೆಲ್ಲಿ ನೀರು ಸರಬರಾಜಲ್ಲಿ ವ್ಯತ್ಯಯ?

ಪೂರ್ವ ಬೆಂಗಳೂರು (ಮಹದೇವಪುರ ವಲಯ ಹಾಗೂ ಸುತ್ತಮುತ್ತ):

  • ವೈಟ್‌ಫೀಲ್ಡ್
  • ಕಡುಗೋಡಿ
  • ಹೂಡಿ
  • ಗರುಡಾಚಾರ್​​ಪಾಳ್ಯ
  • ದೊಡ್ಡನೆಕ್ಕುಂದಿ
  • ಮುನ್ನೇಕೊಳಲ (ಮಾರತಹಳ್ಳಿ ಪ್ರದೇಶ)
  • ನಲ್ಲೂರುಹಳ್ಳಿ
  • ಸಿದ್ದಾಪುರ
  • ನಾಗೊಂಡನಹಳ್ಳಿ
  • ರಾಮಗೊಂದನಹಳ್ಳಿ
  • ಚನ್ನಸಂದ್ರ

ದಕ್ಷಿಣ ಬೆಂಗಳೂರು:

  • ಬನಶಂಕರಿ (ವಿವಿಧ ಹಂತಗಳು)
  • ಕುಮಾರಸ್ವಾಮಿ ಲೇಔಟ್
  • ಪೂರ್ಣಪ್ರಜ್ಞ ಲೇಔಟ್
  • ಅಂಜನಾಪುರ
  • ಗೊಟ್ಟಿಗೆರೆ
  • ಬೇಗೂರು
  • ಕಲ್ಲಹಳ್ಳಿ
  • ಕುಡ್ಲು
  • ಕೊಡಿಚಿಕ್ಕನಹಳ್ಳಿ

ಮಾಹಿತಿ ಪ್ರಕಾರ ಗುರುವಾರ ಬೆಳಿಗ್ಗೆ 6 ಗಂಟೆಗೆ ಪಂಪ್​​ ಕಾರ್ಯ ಸ್ಥಗಿತವಾಗಲಿದ್ದು, ಶುಕ್ರವಾರ ಬೆಳಗ್ಗೆ 6 ಗಂಟೆಗೆ ಮರುಪ್ರಾರಂಭ ನಡೆಯಲಿದೆ. ಆ ಬಳಿಕ ಮನೆಗಳಿಗೆ ನೀರು ತಲುಪಲು ಹಾಗೂ ಒತ್ತಡ ಸಾಮಾನ್ಯಗೊಳ್ಳಲು ಇನ್ನೂ 3–6 ಗಂಟೆಗಳು ಹಿಡಿಯಬಹುದು ಎಂದು ಅಂದಾಜಿಸಲಾಗಿದೆ. ಹೀಗಾಗಿ ಅಗತ್ಯ ನೀರನ್ನು ಸಂಗ್ರಹಿಸಿ ಇಟ್ಟುಕೊಳ್ಳುವಂತೆ ಮತ್ತು ಅನಗತ್ಯವಾಗಿ ನೀರಿನ ಬಳಕೆಯನ್ನು ಮಾಡದಂತೆ ಸೂಚಿಸಲಾಗಿದೆ. ಮುಂಬರುವ ಬೇಸಿಗೆಯಲ್ಲಿ ನೀರಿನ ಅಭಾವವನ್ನು ಸಮರ್ಥವಾಗಿ ಎದುರಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸಮಗ್ರ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪಾರಂಪರಿಕ ನೀರು ಪೂರೈಕೆ ವ್ಯವಸ್ಥೆಯಿಂದ ಹೊರಬಂದು, ತಂತ್ರಜ್ಞಾನ ಆಧಾರಿತ ಹಾಗೂ ನಾಗರಿಕ ಸ್ನೇಹಿ ಹೆಜ್ಜೆ ಇಟ್ಟಿದೆ ಎಂದೂ ಜಲಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?