AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್​ನಲ್ಲಿ ಪರಿಚಯವಾದ ಮಹಿಳೆ ಜತೆ ಸಲುಗೆ, ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್​ಮೇಲ್: ಲಕ್ಷಾಂತರ ರೂ. ವಂಚನೆ

ಅವರಿಬ್ಬರು ಫೇಸ್​ಬುಕ್​ನಲ್ಲಿ ಪರಿಚಯವಾಗಿದ್ದ ಫ್ರೆಂಡ್ಸ್. ಹಾಯ್, ಬಾಯ್ ಎಂದು ಶುರುವಾದ ಸ್ನೇಹ ನಂತರ ಇಬ್ಬರ ನಡುವೆ ಆತ್ಮೀಯತೆ, ಸಲುಗೆ ಬೆಳೆಯುವಂತೆ ಮಾಡಿತ್ತು. ಈ ವೇಳೆ ಜೊತೆಯಲ್ಲೇ ತೆಗೆದುಕೊಂಡಿದ್ದ ಖಾಸಗಿ ಫೋಟೊ, ವಿಡಿಯೋಗಳೇ ಯುವತಿಗೆ ಮುಳುವಾಗಿದೆ. ಲಕ್ಷಾಂತರ ರೂ. ಹಣ ಪೀಕಿಸಿದ್ದ ಆಸಾಮಿ ಖಾಸಗಿ ಫೋಟೊ, ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡತೊಡಗಿದ್ದ. ಆಮೇಲೇನಾಯ್ತು? ಮುಂದೆ ಓದಿ.

ಫೇಸ್​ಬುಕ್​ನಲ್ಲಿ ಪರಿಚಯವಾದ ಮಹಿಳೆ ಜತೆ ಸಲುಗೆ, ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್​ಮೇಲ್: ಲಕ್ಷಾಂತರ ರೂ. ವಂಚನೆ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Oct 01, 2025 | 8:15 AM

Share

ಬೆಂಗಳೂರು, ಅಕ್ಟೋಬರ್ 1: ಸಾಮಾಜಿಕ ಮಾಧ್ಯಮಗಳಲ್ಲಿ (Social Media) ಫ್ರೆಂಡ್ ರಿಕ್ವೆಸ್ಟ್ ಬಂದಾಕ್ಷಣ ಹಿಂದೆ ಮುಂದೆ ನೋಡದೆ ಪರಿಚಯ ಮಾಡಿಕೊಳ್ಳುವುದು ಸಾಮಾನ್ಯವಾಗಿಬಿಟ್ಟಿದೆ. ಒಂದೊಳ್ಳೆ ಫೋಟೊ ಹಾಕಿ ಹಾಯ್ ಅಂದಕೂಡಲೇ ಸ್ನೇಹ ಮಾಡಿಕೊಂಡು ಸಲುಗೆ ಬೆಳೆಸುತ್ತಾರೆ. ಹೀಗೆ ಫೇಸ್​ಬುಕ್​​ನಲ್ಲಿ (Facebook) ಯುವಕನ ಪರಿಚಯ ಮಾಡಿಕೊಂಡ ಮಹಿಳೆಯೊಬ್ಬರು ಆತನ ಸ್ನೇಹ ಸಂಪಾದಿಸಿ ಇದ್ದ ಹಣವನ್ನೆಲ್ಲಾ (Fraud Case) ಕಳೆದುಕೊಂಡು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಬೆಂಗಳೂರಿನ ನಗರದ ಸುಂಕದಕಟ್ಟೆ ಮೂಲದ 32 ವರ್ಷ ವಯಸ್ಸಿನ ಮಹಿಳೆಯೊಬ್ಬರು ಸ್ವರೂಪ್ ಎಂಬ ಯುವಕನನ್ನು ಫೇಸ್​ಬುಕ್​​ನಲ್ಲಿ ಪರಿಚಯ ಮಾಡಿಕೊಂಡಿದ್ದರು. ನಂತರ ಇಬ್ಬರೂ ಸ್ನೇಹಿತರಾಗಿದ್ದು, ಅದೇ ಸ್ನೇಹ ಇಬ್ಬರ ನಡುವೆ ಆತ್ಮೀಯ ಸಲುಗೆ ಬೆಳೆಯುವಂತೆ ಮಾಡಿತ್ತು. ಈ ವೇಳೆ ಮಹಿಳೆಯ ಒಂದಷ್ಟು ಫೋಟೊ ತೆಗೆದುಕೊಂಡಿದ್ದ ಸ್ವರೂಪ್, ಅದನ್ನು ಇಟ್ಟುಕೊಂಡು ಬ್ಲಾಕ್​ಮೇಲ್ ಮಾಡಲು ಮುಂದಾಗಿದ್ದನಂತೆ. ಕೇಳಿದಷ್ಟು ಹಣ ನೀಡಬೇಕು ಇಲ್ಲದಿದ್ದರೆ ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಸುಮಾರು 8 ಲಕ್ಷ ರೂಪಾಯಿಗೂ ಅಧಿಕ ಹಣ ಪಡೆದಿದ್ದಾನೆ‌. ಹೀಗೆ ಫೋಟೊ ವೀಡಿಯೋ ಇದೆ ಎಂದು ಬ್ಲಾಕ್​ಮೇಲ್ ಮಾಡಿದ ಸ್ವರೂಪ್ ಮಹಿಳೆಯಿಂದ ಲಕ್ಷ ಲಕ್ಷ ರೂ. ಹಣ ಪಡೆದಿದ್ದ. ಮಹಿಳೆ ಹಣ ವಾಪಸ್ ಕೇಳಿದ್ದಕ್ಕೆ ತನ್ನ ಸ್ನೇಹಿತ ಶೂಟ್ ಗಿರಿ ಎಂಬುವನ ಮೂಲಕ ಬೆದರಿಕೆ ಹಾಕಿಸಿದ್ದ. ಮಹಿಳೆ ಭೇಟಿ ಮಾಡಿದ ಶೂಟ್ ಗಿರಿ, ಸ್ವರೂಪ್ ನಮ್ಮ ಹುಡುಗ. ಅವನು ಕೊಟ್ಟಷ್ಟು ಹಣ ತಗೊಳ್ಳಬೇಕು ಎಂದು ಸೆಟಲ್​ಮೆಂಟ್ ಮಾಡಲು ಹೋಗಿದ್ದ. ಸ್ನೇಹಿತನ ಬೆದರಿಕೆಯಿಂದ ಆತಂಕಕ್ಕೊಳಗಾದ ಮಹಿಳೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಹುಡುಗಿಯರನ್ನ ಚುಡಾಯಿಸಿದ ಆರೋಪ: ಕುಟುಂಬಗಳ ನಡುವೆ ಮಾರಾಮಾರಿ

ಸದ್ಯ ಕಾಮಾಕ್ಷಿಪಾಳ್ಯ ಪೊಲೀಸರು ಶೂಟ್ ಗಿರಿ ಹಾಗೂ ಸ್ವರೂಪ್ ವಿರುದ್ದ ಎಫ್ಐಆರ್ ದಾಖಲು ಮಾಡಿಕೊಂಡಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಫೇಸ್​​ಬುಕ್ ಸ್ನೇಹಿತ ಎಂದು ಹಣ ಕೊಟ್ಟ ತಪ್ಪಿಗೆ ಮಹಿಳೆ ಪಾಡುಪಡುವಂತಾಗಿದೆ. ಹಣ ಪೀಕಿಸಿದ್ದಷ್ಟೇ ಅಲ್ಲದೆ, ಆರೋಪಿಯು ಮಹಿಳೆಗೆ ಜೀವ ಬೆದರಿಕೆ ಸಹ ಹಾಕಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ