AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ; ಆಕಸ್ಮಿಕವೋ ಅಥವಾ ಕೊಲೆಯೋ? ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರ ಆರೋಪ!

ಬೆಂಗಳೂರಿನ ಗೌಡಹಳ್ಳಿಯಲ್ಲಿ ವಾಷಿಂಗ್ ಮೆಷಿನ್ ವಿದ್ಯುತ್ ಆಘಾತದಿಂದ ಮಹಿಳೆಯೊಬ್ಬರ ಸಾವು ಕೊಲೆಯೋ ಆಕಸ್ಮಿಕವೋ ಎಂಬ ಅನುಮಾನ ಮೂಡಿಸಿದೆ. ಪೋಷಕರು ಅಳಿಯನ ಮೇಲೆ ಕೊಲೆ ಸಂಚಿನ ಆರೋಪ ಮಾಡಿದ್ದಾರೆ. ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಈ ಅನುಮಾನ ಹೆಚ್ಚಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ; ಆಕಸ್ಮಿಕವೋ ಅಥವಾ ಕೊಲೆಯೋ? ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರ ಆರೋಪ!
ವಾಷಿಂಗ್ ಮೆಷಿನ್ ಶಾಕ್‌ಗೆ ಸುಜಾತ ಬಲಿ
ಅಕ್ಷಯ್​ ಪಲ್ಲಮಜಲು​​
|

Updated on: Apr 27, 2026 | 6:12 PM

Share

ಬೆಂಗಳೂರು, ಏ.27: ರಾಜ್ಯ ರಾಜಧಾನಿಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆದಿದೆ. ಇದು ಕೊಲೆಯೋ ಅಥವಾ ಆಕಸ್ಮಿಕವೋ ಎಂಬ ಅನುಮಾನಗಳು ಉಂಟಾಗಿದೆ. ಇದೀಗ ಈ ಸಾವಿನ ಸುತ್ತ ಹಲವು ಊಹಪೋಹಗಳು ಉಂಟಾಗಿದೆ. ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ನಡೆದಿದೆ. ಆದರೆ, ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರು ಗಂಭೀರ ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತ ಮಹಿಳೆಯನ್ನು ಸುಜಾತ (30) ಎಂದು ಗುರುತಿಸಲಾಗಿದೆ. ತುಮಕೂರಿನ ಹೆಗ್ಗೆರೆ ನಿವಾಸಿಗಳಾದ ಪಾಂಡುರಂಗಯ್ಯ ಮತ್ತು ಭಾಗ್ಯಮ್ಮ ದಂಪತಿಯ ನಾಲ್ಕನೇ ಮಗಳಾದ ಸುಜಾತ, 10 ವರ್ಷಗಳ ಹಿಂದೆ ರಿಯಲ್ ಎಸ್ಟೇಟ್ ಉದ್ಯಮಿ ಚೇತನ್ ಎಂಬುವವರನ್ನು ವಿವಾಹವಾಗಿದ್ದರು. ಇಂದು ಬೆಳಗ್ಗೆ 7:30ರ ಸುಮಾರಿಗೆ ವಾಷಿಂಗ್ ಮೆಷಿನ್ ಹಾಕಲು ಹೋದಾಗ ಕರೆಂಟ್ ಶಾಕ್ ತಗುಲಿ ಸುಜಾತ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಗಲಾಟೆ, ಬೆಂಗಳೂರಲ್ಲಿ ಬೆದರಿಕೆ: ಪಾರ್ಕ್​​ನಲ್ಲೇ ವ್ಯಕ್ತಿ ಆತ್ಮಹತ್ಯೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​

ಪೋಷಕರ ಅನುಮಾನಕ್ಕೆ ಕಾರಣವೇನು?

ಸುಜಾತ ಅವರ ಸಾವು ಕೇವಲ ಆಕಸ್ಮಿಕವಲ್ಲ, ಇದರ ಹಿಂದೆ ಅವರ ಪತಿ ಚೇತನ್ ಸಂಚು ಇರಬಹುದು ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಅದಕ್ಕೆ ಕೆಲವೊಂದು ಕಾರಣಗಳನ್ನು ನೀಡಿದ್ದಾರೆ. ಮೊದಲಾಗಿ ಮದುವೆಯಾದಾಗಿನಿಂದಲೂ ದಂಪತಿಗಳ ನಡುವೆ ಜಗಳ ನಡೆಯುತ್ತಿತ್ತು. ಗಂಡನ ಕಿರುಕುಳ ತಾಳಲಾರದೆ ಸುಜಾತ ಒಂದು ತಿಂಗಳ ಹಿಂದೆ ತವರು ಮನೆಗೆ ಹೋಗಿದ್ದರು ಎಂದು ಹೇಳಲಾಗಿದೆ. ಚೇತನ್ ಮತ್ತು ಆತನ ತಾಯಿ ಸುಜಾತಳ ಮನವೊಲಿಸಿ ಕೇವಲ ಒಂದು ವಾರದ ಹಿಂದಷ್ಟೇ ಗೌಡಹಳ್ಳಿಗೆ ಕರೆಕೊಂಡು ಬಂದಿದ್ದರು. ಮನೆಗೆ ಬಂದ ಎಂಟೇ ದಿನದಲ್ಲಿ ಸುಜಾತ ಶವವಾಗಿರುವುದು ಪೋಷಕರಲ್ಲಿ ಭಾರಿ ಅನುಮಾನ ಮೂಡಿಸಿದೆ ಎಂದು ಆರೋಪಿಸಿದ್ದಾರೆ.

ಘಟನೆ ನಡೆದ ತಕ್ಷಣ ಸುಜಾತ ಅವರನ್ನು ವಿಪಿ ಮಾಗ್ನಸ್ ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ. ಸದ್ಯ ಮೃತದೇಹವನ್ನು ಹೆಚ್ಚಿನ ತನಿಖೆ ಮತ್ತು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಇದು ಆಕಸ್ಮಿಕವೋ ಅಥವಾ ವ್ಯವಸ್ಥಿತ ಕೊಲೆಯೋ ಎಂಬುದು ತಿಳಿದುಬರಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100 ರೂ ಕೇಳಿದ ವೈಭವ್, 200 ರೂ ನೀಡಿದ ಫ್ಯಾನ್
100 ರೂ ಕೇಳಿದ ವೈಭವ್, 200 ರೂ ನೀಡಿದ ಫ್ಯಾನ್
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಕ್ಷಿತಾ-ಧ್ರುವಂತ್ ಮಧ್ಯೆ ಎಷ್ಟು ಒಳ್ಳೆಯ ಬಾಂಧವ್ಯ ಇದೆ ನೋಡಿ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ