AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಡ್ಯಾನ್ಸ್ ಕಾರ್ಯಕ್ರಮದ ಹೆಸರಲ್ಲಿ ವಂಚನೆ: ಸಾವಿರಾರು ರೂ ಪಡೆದು ಅವಕಾಶ ನೀಡಿದ ಮಹಿಳೆ

ಬೆಂಗಳೂರಿನಲ್ಲಿ ನಡೆದ ಬೃಹತ್ ತಾಂಡವ ನೃತ್ಯ ಕಾರ್ಯಕ್ರಮದಲ್ಲಿ ಓರ್ವ ಮಹಿಳೆ ಸಾವಿರಾರು ರೂ. ಹಣ ಪಡೆದು ಮಕ್ಕಳಿಗೆ ವೇದಿಕೆಯಲ್ಲಿ ನೃತ್ಯ ಮಾಡಲು ಅವಕಾಶ ನೀಡದೆ ವಂಚಿಸಿರುವಂತಹ ಘಟನೆ ನಡೆದಿದೆ. ತಡರಾತ್ರಿ ಟೌನ್​ಹಾಲ್ ಮುಂದೆ ಹೈಡ್ರಾಮಾವೇ ನಡೆದು ಹೋಗಿದೆ. ನೃತ್ಯ ಪ್ರದರ್ಶನಕ್ಕೆ ಅವಕಾಶ ನೀಡದಿದ್ದಕ್ಕೆ ಪೋಷಕರು ಗರಂ ಆಗಿದ್ದರು.

ಬೆಂಗಳೂರಲ್ಲಿ ಡ್ಯಾನ್ಸ್ ಕಾರ್ಯಕ್ರಮದ ಹೆಸರಲ್ಲಿ ವಂಚನೆ: ಸಾವಿರಾರು ರೂ ಪಡೆದು ಅವಕಾಶ ನೀಡಿದ ಮಹಿಳೆ
ಡ್ಯಾನ್ಸ್ ಕಾರ್ಯಕ್ರಮದ ಹೆಸರಲ್ಲಿ ವಂಚನೆ
ಗಂಗಾಧರ​ ಬ. ಸಾಬೋಜಿ
|

Updated on: Jun 23, 2025 | 7:45 AM

Share

ಬೆಂಗಳೂರು, ಜೂನ್​ 23: ತಮ್ಮ ಮಕ್ಕಳು ದೊಡ್ಡ ಸ್ಟೇಜ್ ಮೇಲೆ ಕಾಣಿಸಿಕೊಳ್ಳಬೇಕು ಅನ್ನೋದು ಎಲ್ಲಾ ಪೋಷಕರ ಆಸೆಯಾಗಿರುತ್ತೆ. ಆದರೆ ಪೋಷಕರ ಕನಸುಗಳೆ ಹಣ ಮಾಡುವವರಿಗೆ ಬಂಡವಾಳವಾಗಿದೆ. ವೇದಿಕೆ ಮೇಲೆ ಡ್ಯಾನ್ಸ್ (Dance) ಮಾಡಲು ಅವಕಾಶ ಕೊಡುವುದಾಗಿ ಸಾವಿರಾರು ರೂ ಹಣ ಪಡೆದ ಓರ್ವ ಮಹಿಳೆ (woman), ಅವಕಾಶ ಕೊಡದೆ ಯಾಮಾರಿಸಿರುವಂತಹ ಘಟನೆ ನಡೆದಿದೆ. ತಡರಾತ್ರಿ ಬೆಂಗಳೂರಿನ ಟೌನ್​ಹಾಲ್ ಮುಂದೆ ಹೈಡ್ರಾಮಾವೇ ನಡೆಯಿತು.

ಅಷ್ಟಕ್ಕೂ ಇಲ್ಲಿ ಆಗಿದ್ದಿಷ್ಟೇ, ಹೀನಾ ಜೈನ್ ಎಂಬ ಮಹಿಳೆ ನಿತ್ಯಾಂಗನ ಅಕಾಡೆಮಿ ಹೆಸರಿನಲ್ಲಿ ಡ್ಯಾನ್ಸ್ ಈವೆಂಟ್‌ ನಡೆಸುತ್ತಿದ್ದಾರೆ. ಈ ಬಾರಿ ಬಿಗ್ಗೆಸ್ಟ್ ತಾಂಡವ ನೃತ್ಯ ಹೆಸರಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಟೌನ್ ಹಾಲ್‌ನಲ್ಲಿ ಭಾನುವಾರ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ನಟಿ ಜಯಪ್ರದಾರನ್ನ ಕರೆಸಲಾಗಿತ್ತು. ನೀವು ಜಯಪ್ರದಾ ಎದುರಲ್ಲಿ ಡ್ಯಾನ್ಸ್ ಮಾಡುತ್ತೀರಿ, ಅವರಿಂದ ಅವಾರ್ಡ್ ಕೊಡಿಸುತ್ತೇವೆ ಅಂತಾ ಸಾಮಾಜಿಕ ಜಾಲತಾಣದಲ್ಲಿ ಜಾಹಿರಾತು ಕೊಟ್ಟಿದ್ದರು.

ಇದನ್ನೂ ಓದಿ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮತ್ತಿಬ್ಬರು ಸಾವು: ಒಂದೇ ತಿಂಗಳಲ್ಲಿ 12 ಜನ ಬಲಿ

ಇದನ್ನೂ ಓದಿ
Image
ಕರ್ನಾಟಕದಲ್ಲಿ ಜೂನ್ 26ರಿಂದ ಹೆಚ್ಚಲಿದೆ ಮುಂಗಾರು ಅಬ್ಬರ
Image
ಹಾಸನ: ಹೃದಯಾಘಾತದಿಂದ ಮತ್ತಿಬ್ಬರು ಸಾವು, ಒಂದೇ ತಿಂಗಳಲ್ಲಿ 12 ಜನ ಬಲಿ
Image
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
Image
ಬೆಂಗಳೂರಿನಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ

ಇದನ್ನ ನಂಬಿದ ಡ್ಯಾನ್ಸ್‌ ಅಕಾಡೆಮಿಯವರು 50ರಿಂದ 60 ಸಾವಿರ ರೂ ಹಣ ಕೊಟ್ಟು ರಿಜಿಸ್ಟರ್ ಮಾಡಿಸಿಕೊಂಡಿದ್ದರು. ಆದರೆ ಭಾನುವಾರ (ಜೂನ್​ 22) ಬೆಳಗ್ಗೆ 6 ಗಂಟೆಗೆ ಡ್ಯಾನ್ಸ್ ಮಾಡಲು ಬಂದ ಮಕ್ಕಳು ರಾತ್ರಿ ಹನ್ನೆರಡು ಗಂಟೆ ಆದರೂ ಕುಳಿತಲ್ಲೆ ಕುಳಿತಿದ್ದರು. ಡ್ಯಾನ್ಸ್ ಮಾಡಿಸುವುದು ಬಿಡಿ, ಊಟವನ್ನೂ ಕೊಟ್ಟಿಲ್ವಂತೆ. ಹಾಗೇ ಕಾರ್ಯಕ್ರಮವನ್ನೂ ಮುಗಿಸಿಬಿಟ್ಟಿದ್ದರು. ಇದ್ರಿಂದ ರೊಚ್ಚಿಗೆದ್ದ ಪೋಷಕರು ಮತ್ತು ಡ್ಯಾನ್ಸ್‌ ಟೀಚರ್ಸ್‌ ಕಾರ್ಯಕ್ರಮ ಆಯೋಜಕಿ ಹೀನಾ ಜೈನ್‌ಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಣ ಖಾಲಿಯಾಗಿದೆ ಎಂಬ ಹೀನಾ ಜೈನ್

ಜಯಪ್ರದಾ ಎದುರು ಡ್ಯಾನ್ಸ್ ಮಾಡಬೇಕು ಅಂತ ಮಕ್ಕಳು ತಾಂಡವ ನೃತ್ಯದ ವೇಶ ತೊಟ್ಟು ರಾತ್ರಿ 12 ರ ವರೆಗೂ ಕಾದು ಸುಸ್ತಾಗಿದ್ದರು. ಪೋಷಕರ ತರಾಟೆ ಬಳಿಕ ಮಾತನಾಡಿದ ಹೀನಾ ಜೈನ್, ಸಮಯದ ಅಭಾವದ ಸಬೂಬು ನೀಡಿದ್ದಾರೆ. ಅಷ್ಟೇ ಅಲ್ಲ, ಹಣ ಖಾಲಿಯಾಗಿದೆ. ಒಂದು ತಿಂಗಳು ಸಮಯ ಕೊಡಿ, ವಾಪಸ್ ಕೊಡುತ್ತೇನೆ ಅಂತಾ ಪೋಷಕರಿಗೆ ಮನವೊಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್

ಪೋಷಕರು ಮತ್ತು‌ ಮಕ್ಕಳ ಕನಸನ್ನ ಈಕೆ ಬ್ಯುಸಿನೆಸ್‌ ಮಾಡಿಕೊಂಡರೆ, ಹಣ ಕೊಟ್ಟೊರು ನಿರಾಸೆಯಿಂದ ಮನೆ‌ ಕಡೆ ಸಾಗಿದ್ದಾರೆ. ಹಣ ವಾಪಸ್ ಕೊಡದಿದ್ದರೆ ಪೊಲೀಸರಿಗೆ ದೂರು ನೀಡುವುದಾಗಿ ಎಚ್ಚರಿಸಿದ್ದಾರೆ. ಏನೇ ಆಗಲಿ, ನಮ್ಮ ಕನಸು ಈಡೇರಿಲ್ಲ. ಮಕ್ಕಳಾದರೂ ಸಾಧನೆ ಮಾಡಲಿ ಅಂತಾ ಎಷ್ಟು ಖರ್ಚಾದರೂ ಮಾಡಲು ತಯಾರಾಗುವ ಪೋಷಕರನ್ನೇ ಹೀಗೆ ಸಂಕಷ್ಟಕ್ಕೆ ಸಿಲುಕಿಸುವುದು ಎಷ್ಟು ಸರಿ.

ವರದಿ: ವಿಕಾಸ್, ಟಿವಿ9, ಬೆಂಗಳೂರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು