AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಸ್ತೂಲ್ ಮಿಸ್ ಫೈರ್: ಪ್ರಿಯಕರನ ಗನ್​​ನಿಂದ ಪ್ರೇಯಸಿಯ ಹೊಟ್ಟೆಗೆ ಹೊಕ್ಕಿದ ಬುಲೆಟ್

ಮಿಸ್ ಫೈರಿಂಗ್ ಘಟನೆಯಲ್ಲಿ ಬೆಂಗಳೂರಿನ ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಯುವತಿ, ಪ್ರಿಯಕರನ ಗನ್ ಪರಿಶೀಲಿಸುವಾಗ ಮಿಸ್​​ ಫೈರಿಂಗ್​ ಆಗಿದೆ. ಗುಂಡು ತಗುಲಿದ ಪರಿಣಾಮ ಯುವತಿಯ ಒಂದು ಕಿಡ್ನಿಯನ್ನು ತೆಗೆಯಲಾಗಿದೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಿಸ್ತೂಲ್ ಮಿಸ್ ಫೈರ್: ಪ್ರಿಯಕರನ ಗನ್​​ನಿಂದ ಪ್ರೇಯಸಿಯ ಹೊಟ್ಟೆಗೆ ಹೊಕ್ಕಿದ ಬುಲೆಟ್
ಬಂದೂಕು (ಸಾಂದರ್ಭಿಕ ಚಿತ್ರ)
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 30, 2025 | 3:37 PM

Share

ಬೆಂಗಳೂರು, ಜುಲೈ 30: ಮಿಸ್​ ಫೈರಿಂಗ್ (Miss Firing)​​​ ಆಗಿ ಓರ್ವ ಯುವತಿಯ ಹೊಟ್ಟೆಗೆ ಗುಂಡು ತಗುಲಿದೆ. ಬೆಂಗಳೂರಿನ (Bengaluru) ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೆಚೆಲ್ ಮಿಸ್ ಫೈರಿಂಗ್​ನಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿ. ಪ್ರಿಯಕರ ನಿಖಿಲ್​​​​ಗೆ ಸೇರಿದ ಗನ್ ರೆಚೆಲ್​ ಪರಿಶೀಲನೆ ಮಾಡುವಾಗ ಮಿಸ್ ಫೈರಿಂಗ್​​ ಆಗಿದೆ. ಗಾಯಾಳು ರೆಚೆಲ್​ ಮತ್ತು ನಿಖಿಲ್​ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಮದುವೆಗೆ ಎರಡೂ ಕುಟುಂಬಗಳು ಸಿದ್ಧತೆ ನಡೆಸಿದ್ದವು. ನಿಖಲ್​ ಅವರ ಬಳಿ ಲೈಸೆನ್ಸ್ಡ್​​ ಗನ್​ ಇದೆ.

ಜು.28ರಂದು ನಿಖಿಲ್​​​​​ ಟೆರೆಸ್​ ಮೇಲೆ ಗನ್ ಪರಿಶೀಲನೆ ಮಾಡುತ್ತಿದ್ದರು. ಈ ವೇಳೆ ರೆಚೆಲ್​ ಕೂಡ ಜೊತೆಯಲ್ಲಿದ್ದರು. ರೆಚೆಲ್​ ಪ್ರಿಯಕರ ನಿಖಿಲ್​ನಿಂದ ಗನ್​ ಪಡೆದು ಪರಿಶೀಲನೆ ನಡೆಸುತ್ತಿದ್ದಾಗ, ಮಿಸ್​ ಫೈರ್​ ಆಗಿ ಹೊಟ್ಟೆಗೆ ಗುಂಡು ತಗುಲಿದೆ. ಕೂಡಲೇ ರೆಚೆಲ್​ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಕೊಡಗಿನಲ್ಲಿ ಬಂದೂಕು ಸೌಲಭ್ಯ ದುರುಪಯೋಗ: ಲೈಸೆನ್ಸ್​​ಗಾಗಿ ನಕಲಿ ದಾಖಲೆ ಸೃಷ್ಟಿ

ಗುಂಡು ತಗುಲಿದ ಪರಿಣಾಮ ರೆಚೆಲ್​ ಅವರ ಒಂದು ಕಿಡ್ನಿಗೆ ಹಾನಿಯಾಗಿದೆ. ಹೀಗಾಗಿ, ವೈದ್ಯರು ರೆಚೆಲ್​ ಅವರ ಒಂದು‌ ಕಿಡ್ನಿಯನ್ನು ಹೊರ ತೆಗೆದಿದ್ದಾರೆ. ರೆಚೆಲ್​ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಹೆಣ್ಣೂರು ಪೊಲೀಸ್​​ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Wed, 30 July 25

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್