AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಸ್ತೂಲ್ ಮಿಸ್ ಫೈರ್: ಪ್ರಿಯಕರನ ಗನ್​​ನಿಂದ ಪ್ರೇಯಸಿಯ ಹೊಟ್ಟೆಗೆ ಹೊಕ್ಕಿದ ಬುಲೆಟ್

ಮಿಸ್ ಫೈರಿಂಗ್ ಘಟನೆಯಲ್ಲಿ ಬೆಂಗಳೂರಿನ ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಯುವತಿ, ಪ್ರಿಯಕರನ ಗನ್ ಪರಿಶೀಲಿಸುವಾಗ ಮಿಸ್​​ ಫೈರಿಂಗ್​ ಆಗಿದೆ. ಗುಂಡು ತಗುಲಿದ ಪರಿಣಾಮ ಯುವತಿಯ ಒಂದು ಕಿಡ್ನಿಯನ್ನು ತೆಗೆಯಲಾಗಿದೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಿಸ್ತೂಲ್ ಮಿಸ್ ಫೈರ್: ಪ್ರಿಯಕರನ ಗನ್​​ನಿಂದ ಪ್ರೇಯಸಿಯ ಹೊಟ್ಟೆಗೆ ಹೊಕ್ಕಿದ ಬುಲೆಟ್
ಬಂದೂಕು (ಸಾಂದರ್ಭಿಕ ಚಿತ್ರ)
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ವಿವೇಕ ಬಿರಾದಾರ|

Updated on:Jul 30, 2025 | 3:37 PM

Share

ಬೆಂಗಳೂರು, ಜುಲೈ 30: ಮಿಸ್​ ಫೈರಿಂಗ್ (Miss Firing)​​​ ಆಗಿ ಓರ್ವ ಯುವತಿಯ ಹೊಟ್ಟೆಗೆ ಗುಂಡು ತಗುಲಿದೆ. ಬೆಂಗಳೂರಿನ (Bengaluru) ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೆಚೆಲ್ ಮಿಸ್ ಫೈರಿಂಗ್​ನಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿ. ಪ್ರಿಯಕರ ನಿಖಿಲ್​​​​ಗೆ ಸೇರಿದ ಗನ್ ರೆಚೆಲ್​ ಪರಿಶೀಲನೆ ಮಾಡುವಾಗ ಮಿಸ್ ಫೈರಿಂಗ್​​ ಆಗಿದೆ. ಗಾಯಾಳು ರೆಚೆಲ್​ ಮತ್ತು ನಿಖಿಲ್​ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಮದುವೆಗೆ ಎರಡೂ ಕುಟುಂಬಗಳು ಸಿದ್ಧತೆ ನಡೆಸಿದ್ದವು. ನಿಖಲ್​ ಅವರ ಬಳಿ ಲೈಸೆನ್ಸ್ಡ್​​ ಗನ್​ ಇದೆ.

ಜು.28ರಂದು ನಿಖಿಲ್​​​​​ ಟೆರೆಸ್​ ಮೇಲೆ ಗನ್ ಪರಿಶೀಲನೆ ಮಾಡುತ್ತಿದ್ದರು. ಈ ವೇಳೆ ರೆಚೆಲ್​ ಕೂಡ ಜೊತೆಯಲ್ಲಿದ್ದರು. ರೆಚೆಲ್​ ಪ್ರಿಯಕರ ನಿಖಿಲ್​ನಿಂದ ಗನ್​ ಪಡೆದು ಪರಿಶೀಲನೆ ನಡೆಸುತ್ತಿದ್ದಾಗ, ಮಿಸ್​ ಫೈರ್​ ಆಗಿ ಹೊಟ್ಟೆಗೆ ಗುಂಡು ತಗುಲಿದೆ. ಕೂಡಲೇ ರೆಚೆಲ್​ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಕೊಡಗಿನಲ್ಲಿ ಬಂದೂಕು ಸೌಲಭ್ಯ ದುರುಪಯೋಗ: ಲೈಸೆನ್ಸ್​​ಗಾಗಿ ನಕಲಿ ದಾಖಲೆ ಸೃಷ್ಟಿ

ಗುಂಡು ತಗುಲಿದ ಪರಿಣಾಮ ರೆಚೆಲ್​ ಅವರ ಒಂದು ಕಿಡ್ನಿಗೆ ಹಾನಿಯಾಗಿದೆ. ಹೀಗಾಗಿ, ವೈದ್ಯರು ರೆಚೆಲ್​ ಅವರ ಒಂದು‌ ಕಿಡ್ನಿಯನ್ನು ಹೊರ ತೆಗೆದಿದ್ದಾರೆ. ರೆಚೆಲ್​ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಹೆಣ್ಣೂರು ಪೊಲೀಸ್​​ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Wed, 30 July 25

Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!