AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್ ಹರಿದು ಮಹಿಳೆ ಸಾವು

ಬೆಂಗಳೂರಿನ ನಾಯಂಡನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನ ಬಾಗಿಲು ಹಠಾತ್ತಾಗಿ ತೆರೆದ ಕಾರಣ ಬೈಕ್​ನಿಂದ ಕೆಳಗೆ ಬಿದ್ದ ಮಹಿಳೆಯ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ಕಾಮಾಕ್ಷಿಪಾಳ್ಯದ 42 ವರ್ಷದ ಸರೋಜಾ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬ್ಯಾಟರಾಯನಪುರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಎಂಟಿಸಿ ಬಸ್ ಹರಿದು ಮಹಿಳೆ ಸಾವು
ಬಿಎಂಟಿಸಿ ಬಸ್​
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Feb 02, 2025 | 7:40 AM

Share

ಬೆಂಗಳೂರು, ಫೆಬ್ರವರಿ 02: ಬೈಕ್​​ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆ ಬಿಎಂಟಿಸಿ (BMTC) ಹರಿದ ಘಟನೆ ಬೆಂಗಳೂರಿನ ನಾಯಂಡನಹಳ್ಳಿ ಬಳಿ ನಡೆದಿದೆ. ಕಾಮಾಕ್ಷಿಪಾಳ್ಯದ ನಿವಾಸಿ ಸರೋಜಾ (42) ಮೃತ ದುರ್ದೈವಿ. ಜ್ಞಾನಭಾರತಿಯಲ್ಲಿ ಮದುವೆ ಮುಗಿಸಿಕೊಂಡು ರಾತ್ರಿ 9.30 ರ ಸುಮಾರಿಗೆ ಹೋಂಡಾ ಆ್ಯಕ್ಟಿವಾದಲ್ಲಿ ಸೋದರನ ಜೊತೆ ಬೈಕ್​ನಲ್ಲಿ ಸರೋಜ ಮನೆಗೆ ಹೊರಟಿದ್ದರು.

ದಾರಿಯಲ್ಲಿ ಮುಂದೆ ನಿಂತಿದ್ದ ಕಾರಿನ ಡೋರ್ ಏಕಾಏಕಿ ತೆರೆದಿದೆ. ಇದರಿಂದ, ಡೋರ್​​ಗೆ ಟಚ್ ಆಗಿ ಬೈಕ್​ನ ಹಿಂಬದಿ ಕುಳತಿದ್ದ ಸರೋಜಾ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬರುತ್ತಿದ್ದ ಬಿಎಂಟಿಸಿ ಬಸ್ ಸರೋಜಾ ಮೇಲೆ ಹರಿದಿದೆ. ಸರೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

2024ರಲ್ಲಿ ಒಂದೇ ತಿಂಗಳಲ್ಲಿ 4 ಸಾವು

ಅಕ್ಟೋಬರ್ 09 : ಬಿಎಂಟಿಸಿಗೆ ಮೂರು ವರ್ಷದ ಮಗು ಬಲಿ

ಅಕ್ಟೋಬರ್ 14 : ಬಸ್​ ಡಿಕ್ಕಿಯಾಗಿ ಇಂಜಿನಿಯರಿಂಗ್​ ವಿದ್ಯಾರ್ಥಿ ಸಾವು

ಅಕ್ಟೋಬರ್ 22 : ಬೈಕ್​ಗೆ ಬಸ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ಅಕ್ಟೋಬರ್ 29 : ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಬೈಕ್​ ಸವಾರ ಬಲಿ

ಡಿಸೆಂಬರ್ 28 : ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವು

ಇದನ್ನೂ ಓದಿ: ಬಿಎಂಟಿಸಿ ಬಸ್​ ಚಾಲಕನ ಸಡನ್ ಬ್ರೇಕ್​​ಗೆ ಆಯತಪ್ಪಿ ಬಿದ್ದ ಮಹಿಳಾ ಕಂಡಕ್ಟರ್

ಮನೆ ಮುಂದೆ ನಿಲ್ಲಿಸಿದ್ದ ಬೈಕ್​ ಕಳ್ಳತನ

ಬೆಂಗಳೂರಿನ ಸಾರಕ್ಕಿಯ 3ನೇ ಮುಖ್ಯರಸ್ತೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ ಕಳ್ಳತನವಾಗಿದೆ. ಶನಿವಾರ ನಸುಕಿನ ಜಾವ 3.40ರ ಸುಮಾರಿಗೆ ರಘು ಎಂಬುವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಕಳ್ಳ ಬೈಕ್​ ಕದಿಯುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್​ ಮಾಲೀಕ ರಘುರಿಂದ ಜೆ.ಪಿ.ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ