AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್ ಹರಿದು ಮಹಿಳೆ ಸಾವು

ಬೆಂಗಳೂರಿನ ನಾಯಂಡನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನ ಬಾಗಿಲು ಹಠಾತ್ತಾಗಿ ತೆರೆದ ಕಾರಣ ಬೈಕ್​ನಿಂದ ಕೆಳಗೆ ಬಿದ್ದ ಮಹಿಳೆಯ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ಕಾಮಾಕ್ಷಿಪಾಳ್ಯದ 42 ವರ್ಷದ ಸರೋಜಾ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬ್ಯಾಟರಾಯನಪುರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಎಂಟಿಸಿ ಬಸ್ ಹರಿದು ಮಹಿಳೆ ಸಾವು
ಬಿಎಂಟಿಸಿ ಬಸ್​
Jagadisha B
| Edited By: ವಿವೇಕ ಬಿರಾದಾರ|

Updated on: Feb 02, 2025 | 7:40 AM

Share

ಬೆಂಗಳೂರು, ಫೆಬ್ರವರಿ 02: ಬೈಕ್​​ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆ ಬಿಎಂಟಿಸಿ (BMTC) ಹರಿದ ಘಟನೆ ಬೆಂಗಳೂರಿನ ನಾಯಂಡನಹಳ್ಳಿ ಬಳಿ ನಡೆದಿದೆ. ಕಾಮಾಕ್ಷಿಪಾಳ್ಯದ ನಿವಾಸಿ ಸರೋಜಾ (42) ಮೃತ ದುರ್ದೈವಿ. ಜ್ಞಾನಭಾರತಿಯಲ್ಲಿ ಮದುವೆ ಮುಗಿಸಿಕೊಂಡು ರಾತ್ರಿ 9.30 ರ ಸುಮಾರಿಗೆ ಹೋಂಡಾ ಆ್ಯಕ್ಟಿವಾದಲ್ಲಿ ಸೋದರನ ಜೊತೆ ಬೈಕ್​ನಲ್ಲಿ ಸರೋಜ ಮನೆಗೆ ಹೊರಟಿದ್ದರು.

ದಾರಿಯಲ್ಲಿ ಮುಂದೆ ನಿಂತಿದ್ದ ಕಾರಿನ ಡೋರ್ ಏಕಾಏಕಿ ತೆರೆದಿದೆ. ಇದರಿಂದ, ಡೋರ್​​ಗೆ ಟಚ್ ಆಗಿ ಬೈಕ್​ನ ಹಿಂಬದಿ ಕುಳತಿದ್ದ ಸರೋಜಾ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬರುತ್ತಿದ್ದ ಬಿಎಂಟಿಸಿ ಬಸ್ ಸರೋಜಾ ಮೇಲೆ ಹರಿದಿದೆ. ಸರೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

2024ರಲ್ಲಿ ಒಂದೇ ತಿಂಗಳಲ್ಲಿ 4 ಸಾವು

ಅಕ್ಟೋಬರ್ 09 : ಬಿಎಂಟಿಸಿಗೆ ಮೂರು ವರ್ಷದ ಮಗು ಬಲಿ

ಅಕ್ಟೋಬರ್ 14 : ಬಸ್​ ಡಿಕ್ಕಿಯಾಗಿ ಇಂಜಿನಿಯರಿಂಗ್​ ವಿದ್ಯಾರ್ಥಿ ಸಾವು

ಅಕ್ಟೋಬರ್ 22 : ಬೈಕ್​ಗೆ ಬಸ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ಅಕ್ಟೋಬರ್ 29 : ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಬೈಕ್​ ಸವಾರ ಬಲಿ

ಡಿಸೆಂಬರ್ 28 : ಬಿಎಂಟಿಸಿ ಬಸ್​ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವು

ಇದನ್ನೂ ಓದಿ: ಬಿಎಂಟಿಸಿ ಬಸ್​ ಚಾಲಕನ ಸಡನ್ ಬ್ರೇಕ್​​ಗೆ ಆಯತಪ್ಪಿ ಬಿದ್ದ ಮಹಿಳಾ ಕಂಡಕ್ಟರ್

ಮನೆ ಮುಂದೆ ನಿಲ್ಲಿಸಿದ್ದ ಬೈಕ್​ ಕಳ್ಳತನ

ಬೆಂಗಳೂರಿನ ಸಾರಕ್ಕಿಯ 3ನೇ ಮುಖ್ಯರಸ್ತೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ ಕಳ್ಳತನವಾಗಿದೆ. ಶನಿವಾರ ನಸುಕಿನ ಜಾವ 3.40ರ ಸುಮಾರಿಗೆ ರಘು ಎಂಬುವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಕಳ್ಳ ಬೈಕ್​ ಕದಿಯುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್​ ಮಾಲೀಕ ರಘುರಿಂದ ಜೆ.ಪಿ.ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!