AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್

ಬೆಂಗಳೂರಿನಲ್ಲಿ ಪಾರ್ಸೆಲ್ ನೀಡಲು ಬಂದ ಡೆಲಿವರಿ ಏಜೆಂಟ್ ಒಬ್ಬ, ಶೌಚಾಲಯ ಬಳಸುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಸಂತ್ರಸ್ತೆ ಈ ಬಗ್ಗೆ ವೀಡಿಯೋ ಹಂಚಿಕೊಂಡಿದ್ದು, ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಸಾಕಷ್ಟು ಪ್ರಶ್ನೆ ಮೂಡಿಸಿದೆ. ಮಹಿಳೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್! ವೀಡಿಯೋ ವೈರಲ್
ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿದ ಡೆಲಿವರಿ ಬಾಯ್!
ಭಾವನಾ ಹೆಗಡೆ
|

Updated on:Jul 13, 2026 | 6:23 AM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಮಹಿಳೆಯ ಮನೆಗೆ ಬಲವಂತವಾಗಿ ನುಗ್ಗಿ ಕಿರುಕುಳ ನೀಡಿದ್ದಾನೆ.
  • ಅಪರಿಚಿತ ಡೆಲಿವರಿ ಏಜೆಂಟ್ ಶೌಚಾಲಯ ಬಳಸುವ ನೆಪದಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ.
  • ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ತನಿಖೆ ಆರಂಭಿಸಿ ಕ್ರಮಕ್ಕೆ ಮುಂದಾಗಿದ್ದಾರೆ.

ಬೆಂಗಳೂರು, ಜುಲೈ 12: ನಗರದಲ್ಲಿ ಮಹಿಳೆಯರ ಸುರಕ್ಷತೆಯನ್ನು ಮತ್ತೊಮ್ಮೆ ಪ್ರಶ್ನಿಸುವಂತಹ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪಾರ್ಸೆಲ್ ನೀಡಲು ಬಂದ ಇ-ಕಾಮರ್ಸ್ ಸಂಸ್ಥೆಯೊಂದರ ಡೆಲಿವರಿ ಏಜೆಂಟ್, ಶೌಚಾಲಯ ಬಳಸುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ಸಾಮಾಜಿಕ ಜಾಲತಾಣದ ಮೂಲಕ ತಮಗಾದ ಭೀಕರ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಹಿನ್ನೆಲೆ ಫ್ಲಿಪ್‌ಕಾರ್ಟ್ ಡೆಲಿವರಿ ಬಾಯ್ ವಿಜಯ್ ಮಲ್ಲಿಕಾರ್ಜುನ್ ಕಾಮತ್‌ನನ್ನು ಮಾರತಹಳ್ಳಿ ಪೊಲೀಸರು ತಕ್ಷಣವೇ ಬಂಧಿಸಿದ್ದಾರೆ.

ಬಲವಂತವಾಗಿ ಮನೆಗೆ ನುಗ್ಗಿದ ಡೆಲಿವರಿ ಏಜೆಂಟ್

ಸಂತ್ರಸ್ತ ಮಹಿಳೆಯ ಹೇಳುವಂತೆ ಪಾರ್ಸೆಲ್ ತಲುಪಿಸಲು ಬಂದ ಡೆಲಿವರಿ ಬಾಯ್ ತುರ್ತಾಗಿ ಶೌಚಾಲಯ ಬಳಸಬೇಕೆಂದು ಅನುಮತಿ ಕೇಳಿದ್ದಾನೆ. ಅಪರಿಚಿತರನ್ನು ಮನೆಗೆ ಬಿಟ್ಟುಕೊಳ್ಳಲು ಸಾಧ್ಯವಿಲ್ಲ ಎಂದು ಮಹಿಳೆ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ತುರ್ತು ಪರಿಸ್ಥಿತಿ ಇದ್ದರೆ ಪಕ್ಕದ ಮನೆಯ ಪುರುಷರ ಸಹಾಯ ಕೇಳುವಂತೆ ಮಹಿಳೆ ಸಲಹೆ ನೀಡಿದ್ದಾರೆ. ಆದರೆ, ಮಹಿಳೆಯ ಮಾತನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ ಆತ, ಬಲವಂತವಾಗಿ ತನ್ನ ಪಾದರಕ್ಷೆಗಳನ್ನು ಬಿಚ್ಚಿ ಅನುಮತಿಯಿಲ್ಲದೆ ಫ್ಲಾಟ್‌ ಒಳಗೆ ನುಗ್ಗಿದ್ದಾನೆ.

ಶೌಚಾಲಯದಿಂದ ಹೊರಬಂದು ಅಸಭ್ಯ ವರ್ತನೆ

ಮಹಿಳೆ ವಿರೋಧಿಸಿದರೂ ಶೌಚಾಲಯಕ್ಕೆ ಹೋದ ಆತ, ಅಲ್ಲಿಂದ ಹೊರಬಂದ ಬಳಿಕ ಮಹಿಳೆಯ ಎದುರು ಅತ್ಯಂತ ಅಸಭ್ಯವಾಗಿ ನಡೆದುಕೊಂಡಿದ್ದಾನೆ ಹಾಗೂ ವಿಕೃತವಾಗಿ ವರ್ತಿಸಿದ್ದಾನೆ. ಈ ವರ್ತನೆಯಿಂದ ಮಹಿಳೆ ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಮಹಿಳೆಯೊಬ್ಬಳು ಬೇಡ ಎಂದ ಮೇಲೆ ಅಲ್ಲಿಗೆ ಆ ಚರ್ಚೆ ಮುಗಿಯಬೇಕಿತ್ತು. ಆದರೆ ಆತ ತನ್ನ ಮಿತಿಗಳನ್ನು ಮೀರಿ ಮನೆಗೆ ನುಗ್ಗಿ ಸುರಕ್ಷತೆಗೆ ಧಕ್ಕೆ ತಂದಿದ್ದಾನೆ ಎಂದು ಮಹಿಳೆ ಅಳಲು ತೋಡಿಕೊಂಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದು ಎಂಬ ಭಯದಿಂದ ಮಹಿಳೆ ತಕ್ಷಣವೇ ತನ್ನ ಮೊಬೈಲ್ ಕ್ಯಾಮೆರಾವನ್ನು ಆನ್ ಮಾಡಿ, ಮುಖ್ಯ ಬಾಗಿಲನ್ನು ತೆರೆದು ಸಹಾಯಕ್ಕಾಗಿ ಓಡಲು ಸಿದ್ಧವಾಗಿ ನಿಂತಿದ್ದರು.

ಪೊಲೀಸರ ಮತ್ತು ಇ-ಕಾಮರ್ಸ್ ಸಂಸ್ಥೆಯ ಪ್ರತಿಕ್ರಿಯೆ

ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಬೆಂಗಳೂರು ನಗರ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಮಹಿಳೆಯಿಂದ ಅಗತ್ಯ ವಿವರಗಳನ್ನು ಪಡೆದುಕೊಂಡು, ಆರೋಪಿ ಡೆಲಿವರಿ ಏಜೆಂಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಇತ್ತ ಇ-ಕಾಮರ್ಸ್ ಸಂಸ್ಥೆಯಾದ ಫ್ಲಿಪ್‌ಕಾರ್ಟ್ ಕೂಡ ಈ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದು, ನಮ್ಮ ಸಿಬ್ಬಂದಿಯ ಇಂತಹ ನಡವಳಿಕೆಯನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಈ ಬಗ್ಗೆ ಆಂತರಿಕ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದೆ. ಈ ಘಟನೆಯು ಸ್ವಂತ ಮನೆಯಲ್ಲೇ ಮಹಿಳೆಯರ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ಮೂಡಿಸಿದೆ.

ಫ್ಲಿಪ್ ಕಾರ್ಟ್ ವಕ್ತಾರರಿಂದ ಅಧಿಕೃತ ಹೇಳಿಕೆ

ಈ ಘಟನೆಯಿಂದ ನಮಗೆ ತೀವ್ರ ಆಘಾತವಾಗಿದ್ದು, ಬಾಧಿತ ಗ್ರಾಹಕರಿಗೆ ನಾವು ಸಂಪೂರ್ಣ ಬೆಂಬಲವನ್ನು ನೀಡುತ್ತಿದ್ದೇವೆ. ಗ್ರಾಹಕರ ಸುರಕ್ಷತೆಯ ವಿಷಯದಲ್ಲಿ ನಾವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಆ ಕಾರಣದಿಂದ ಈ ವಿಷಯ ನಮ್ಮ ಗಮನಕ್ಕೆ ಬಂದ ತಕ್ಷಣ, ಘಟನೆಯಲ್ಲಿ ಭಾಗಿಯಾದ ಡೆಲಿವರಿ ಪಾರ್ಟ್ ನರ್ ಅವರ ಸೇವೆಯನ್ನು ರದ್ದುಗೊಳಿಸಿದ್ದೇವೆ. ಈ ಕುರಿತು ಈಗಾಗಲೇ ಎಫ್ಐಆರ್ ದಾಖಲಾಗಿದ್ದು, ತನಿಖಾಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸಲು ನಾವು ಬದ್ಧರಾಗಿದ್ದೇವೆ.

ನಮ್ಮ ಎಲ್ಲಾ ಡೆಲಿವರಿ ಪಾರ್ಟ್ ನರ್ ಗಳನ್ನು ಕರ್ತವ್ಯಕ್ಕೆ ಸೇರಿಸಿಕೊಳ್ಳುವ ಮುನ್ನ ಕಡ್ಡಾಯವಾಗಿ ಹಿನ್ನೆಲೆ ಪರಿಶೀಲನೆ ಮತ್ತು ತರಬೇತಿಗೆ ಒಳಪಡಿಸಲಾಗುತ್ತದೆ. ಈ ರೀತಿಯ ಘಟನೆಗಳು ಅತ್ಯಂತ ಅಪರೂಪವಾಗಿದ್ದರೂ ಇಂತಹ ಯಾವುದೇ ಘಟನೆಯನ್ನೂ ನಾವು ಎಂದಿಗೂ ಸಹಿಸುವುದಿಲ್ಲ. ನಮ್ಮ ಗ್ರಾಹಕರ ಸುರಕ್ಷತಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಕೈಗೊಳ್ಳಬೇಕಾದ ಹೆಚ್ಚುವರಿ ಕ್ರಮಗಳ ಕುರಿತು ನಾವು ಈ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದೇವೆ ಎಂದು ಫ್ಲಿಪ್ ಕಾರ್ಟ್ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:42 am, Sun, 12 July 26

Follow Us
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ