AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಯಶವಂತಪುರದಲ್ಲಿ ಕಾರು ಅಪಘಾತ ಪ್ರಕರಣ; ಓರ್ವ ಸಾವು, ಕಾರಿನಲ್ಲಿ ಮದ್ಯ ಬಾಟಲಿ ಪತ್ತೆ

ಯಶವಂತಪುರ ಸರ್ಕಲ್​ನಲ್ಲಿ ಕಾರು ಬೈಕ್​ಗೆ ಡಿಕ್ಕಿ ಹೊಡೆದು ಡಿವೈಡರ್​ಗೆ ಡಿಕ್ಕಿಯಾಗಿ ಮೇಲ್ಸೇತುವೆಯಿಂದ ಬಿದ್ದು ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಗಾಯಗೊಂಡಿದ್ದ ಐವರ ಪೈಕಿ ಕಾರಿನಲ್ಲಿದ್ದ ಓರ್ವ ಯುವಕ ಮೃತಪಟ್ಟಿದ್ದಾನೆ. ಉಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ಅಷ್ಟೇ ಅಲ್ಲದೆ ಅಪಘಾತ ಸಂಭವಿಸಿದ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿವೆ.

ಬೆಂಗಳೂರಿನ ಯಶವಂತಪುರದಲ್ಲಿ ಕಾರು ಅಪಘಾತ ಪ್ರಕರಣ; ಓರ್ವ ಸಾವು, ಕಾರಿನಲ್ಲಿ ಮದ್ಯ ಬಾಟಲಿ ಪತ್ತೆ
ಕಾರು ಅಪಘಾತ
Follow us
Shivaprasad
| Updated By: ಆಯೇಷಾ ಬಾನು

Updated on: Sep 03, 2024 | 10:32 AM

ಬೆಂಗಳೂರು, ಸೆ.03: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆ ಸುಮಾರು 3.45ರಲ್ಲಿ ಭೀಕರ ಅಪಘಾತ (Accident) ಸಂಭವಿಸಿದೆ. ಯಶವಂತಪುರ ಸರ್ಕಲ್​ನಲ್ಲಿ ಕಾರು ಬೈಕ್​ಗೆ ಡಿಕ್ಕಿ ಹೊಡೆದು ಡಿವೈಡರ್​ಗೆ ಡಿಕ್ಕಿಯಾಗಿ ಮೇಲ್ಸೇತುವೆಯಿಂದ ಬಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಶಬರೀಶ್​(29) ಮೃತ ದುರ್ದೈವಿ.

ಮೃತ ಶಬರೀಶ್​​ ತಮಿಳುನಾಡಿನ ಸೇಲಂ ಮೂಲದ ನಿವಾಸಿ. ಈತ ವೀಸಾ ಪಡೆಯಲು ನಿನ್ನೆ ಸ್ನೇಹಿತ ಮಿಥುನ್​​ ಜೊತೆ ಬೆಂಗಳೂರಿಗೆ ಬಂದಿದ್ದ. ಇದೇ ವೇಳೆ ಬೆಂಗಳೂರಲ್ಲಿ ವಾಸವಿದ್ದ ಶಂಕರ್ ಮತ್ತು ಆತನ ಸೋದರಿ ಅನುಶ್ರೀ ಇಬ್ಬರನ್ನೂ ಭೇಟಿ ಮಾಡಿದ್ದ. ನಾಲ್ವರು ಸ್ನೇಹಿತರು ಸೇರಿಕೊಂಡು ಊಟಕ್ಕೆಂದು ಕಾರಿನಲ್ಲಿ ತುಮಕೂರು ರಸ್ತೆ ಕಡೆ ಬರುತ್ತಿದ್ದ ವೇಳೆ ಯಶವಂತಪುರ ಸರ್ಕಲ್​ ಫ್ಲೈಓವರ್​​ ಮೇಲೆ ಕಾರು ಅಪಘಾತವಾಗಿದೆ.

ಉಳಿದ ಶಂಕರ್ ರಾಮ್ (29), ಅನುಶ್ರೀ(23), ಮಿಥುನ್ (28) ಹಾಗೂ ಬೈಕ್ ನಲ್ಲಿದ್ದ ವ್ಯಕ್ತಿ ಮಂಜುನಾಥ್ (38)ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಯಶವಂತಪುರ ಸರ್ಕಲ್ ನಲ್ಲಿ ಬೆಳಗ್ಗೆ 3.45ರ ಸುಮಾರಿಗೆ ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತಿದ್ದ ವೊಕ್ಸ್ ವಾಗೇನ್ ವೆಂಟೋ ಕಾರು ಅಪಘಾತವಾಗಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದೆ.

ಇದನ್ನೂ ಓದಿ: ಬೆಂಗಳೂರು: ಬೈಕ್​ಗೆ ಗುದ್ದಿ ಫ್ಲೈಓವರ್​ನಿಂದ ಕೆಳಗೆ ಬಿದ್ದ ಕಾರು, ಐವರಿಗೆ ಗಂಭೀರ ಗಾಯ

ಕುಡಿದ ಮತ್ತಿನಲ್ಲಿ ಜಾಲಿ ರೈಡ್ ಬಂದು ಅಪಘಾತ?

ಇನ್ನು ಪ್ರತ್ಯಕ್ಷದರ್ಶಿ ಪಾಲ್ ಹೇಳಿದಂತೆ, ಸದಾಶಿನಗರ ಕಡೆಯಿಂದ ಕಾರು ಬಂದಿತ್ತು. ಕಾರಿನಲ್ಲಿದ್ದವರು ಕುಡಿದಿದ್ರು, ಒಬ್ಬ ಹುಡುಗಿ, ಮೂವರು ಯುವಕರು ಇದ್ರು. ನಾವೇ ಆಸ್ಪತ್ರೆಗೆ ಸಾಗಿಸಿದ್ವಿ. ಮೇಲೆ ಬೈಕ್‌ನಲ್ಲಿ ಒಬ್ಬರೇ ಇದ್ರು, ಮೇಲೆ ಬಿದ್ದಿದ್ರು ಎಂದು ಪ್ರತ್ಯಕ್ಷದರ್ಶಿ ಪಾಲ್ ತಿಳಿಸಿದ್ದಾರೆ.

ಮತ್ತೊಂದೆಡೆ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದ್ದು ಕುಡಿದು ವಾಹನ ಚಾಲನೆ ಮಾಡುತ್ತಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಕಾರು ಚಾಲಕ ಮದ್ಯ ಸೇವಿಸಿ ಅತಿಯಾದ ಸ್ಪೀಡ್​ನಲ್ಲಿ ಕಾರು ಚಾಲನೆ ಮಾಡಿಕೊಂಡು ಹೋಗ್ತಿದ್ದ. ತುಮಕೂರು ರಸ್ತೆ ಕಡೆ ಫ್ಲೈ ಓವರ್ ಮೂಲಕ ಹೋಗ್ತಿದ್ರು. ಈ ವೇಳೆ ಡಿವೈಡರ್ ದಾಟಿ ತುಮಕೂರು ರಸ್ತೆ ಕಡೆಯಿಂದ ಬರ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಈ ಪರಿಣಾಮ ಫ್ಲೈ ಓವರ್ ನ ಕೆಳಗೆ ಬಿದ್ದಿದ್ದಾರೆ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಐವರಿಗೆ ಗಾಯಗಳಾಗಿದ್ದವು. ಈ ಪೈಕಿ ಓರ್ವ ಮೃತಪಟ್ಟಿದ್ದು ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಯಶವಂತಪುರ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು