AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಟೋ ಆಸೆ ತೋರಿಸಿ ಪಟಾಕಿ ಹಚ್ಚಿದ ಡಬ್ಬದ ಮೇಲೆ ಕೂರಿಸಿ ಯುವಕನ ಪ್ರಾಣ ತೆಗೆದ ದುರುಳರು

ಪಟಾಕಿ ಜೊತೆ ಹುಡುಗಾಟ ಆಡಬೇಡಿ ಪೋಷಕರು ಪದೇ ಪದೇ ಹೇಳುತ್ತಿರುತ್ತಾರೆ. ಅದರೆ, ಯಾರು ಎಷ್ಟೇ ಹೇಳಿದರೂ, ಕೆಲವರು ಕಿವಿಗೆ ಹಾಕಿಕೊಳ್ಳದೆ ಜೀವಕ್ಕೆ ಕುತ್ತು ತಂದುಕೊಂಡಿರುವ ಹಲವು ಘಟನೆಗಳು ನಡೆದಿವೆ. ಅದೇ ರೀತಿಯಾಗಿ ಇಲ್ಲೊಂದು ಯುವಕರ ತಂಡ ಕೂಡ ದೀಪಾವಳಿ ಹಬ್ಬದ ದಿನ ಪಟಾಕಿ ಸಿಡಿಸುವ ವಿಚಾರಕ್ಕೆ ಚಾಲೆಂಜ್ ಮಾಡಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣರಾಗಿದೆ ಎಂಬ ಆರೋಪ ಕೇಳಿಬಂದಿದೆ.

Shivaprasad B
| Updated By: ವಿವೇಕ ಬಿರಾದಾರ|

Updated on:Nov 05, 2024 | 8:17 AM

Share

ಬೆಂಗಳೂರು, ನವೆಂಬರ್​ 05: ಪಟಾಕಿ (Fireworks) ಜೊತೆ ಹುಡುಗಾಟವಾಡಲು ಹೋಗಿ ಯುವಕ ಪ್ರಾಣ ಕಳೆದುಕೊಂಡಿರುವ ಘಟನೆ ಕೋಣನಕುಂಟೆ (Konankunte) ವ್ಯಾಪ್ತಿಯ ವಿವರ್ಸ್ ಕಾಲೋನಿಯಲ್ಲಿ ನಡೆದಿದೆ. ಶಬರೀಶ್​ (32) ಮೃತ ಯುವಕ. ಯುವಕರ ಹುಚ್ಚಾಟದ ದೃಶ್ಯ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಡಿಯೋದಲ್ಲಿನ ಐದಾರು ಮಂದಿ ಯುವಕರು ಶಬರೀಶ್​ಗೆ ಸವಾಲು ಹಾಕುತ್ತಾರೆ. ಪಟಾಕಿ ಅಂಟಿಸಿ, ಡಬ್ಬದಿಂದ ಮುಚ್ಚಿ, ಅದರ ಮೇಲೆ ಕೂರುತ್ತೀಯಾ ಅಂತ ಸವಾಲು ಹಾಕಿದ್ದಾರೆ. ಅದರಂತೆ ಡಬ್ಬದೊಳಗೆ ಪಟಾಕಿ ಇರಿಸಿ ಅದರ ಮೇಲೆ ಶಬರೀಶ್​ನನ್ನು ಕೂರಿಸಿದ್ದಾರೆ.‌ ನಂತರ ಪಟಾಕಿ ಹೊತ್ತಿಕೊಳ್ಳುತ್ತಿದ್ದಂತೆ ಯುವಕರೆಲ್ಲ ಓಡಿ ಹೋಗಿದ್ದಾರೆ. ಬಳಿಕ, ಪಟಾಕಿ ಸ್ಪೋಟಗೊಂಡು ಶಬರೀಶ್​ನ ಹಿಂಬದಿ ಮತ್ತು ಗುಪ್ತಾಂಗಗಳಿಗೆ ತೀವ್ರ ಗಾಯವಾಗಿದೆ. ಅಕ್ಟೋಬರ್ 31ರ ರಾತ್ರಿ ಘಟನೆ ನಡೆದಿದೆ.

ಕೂಡಲೆ ಶಬರೀಶ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಿಸದೆ ಎರಡು ದಿನಗಳ ಬಳಿಕ ಶಬರೀಶ್​ ಸುಟ್ಟಗಾಯಗಳ ವಿಭಾಗದಲ್ಲಿ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಡ್ರಮ್​ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು; ಶಾಕಿಂಗ್ ವಿಡಿಯೋ ವೈರಲ್

ಪಟಾಕಿ ಹಚ್ಚಿದ ಡಬ್ಬ ಮೇಲೆ ಕುಳಿತರೆ ಆಟೋ ಕೊಡಿಸುತ್ತೇವೆ ಅಂತ ಯುವಕರು ಚಾಲೆಂಜ್ ಹಾಕಿದ್ದರು. ಆಟೋ ಆಸೆಗಾಗಿ ಶಬರೀಶ್​ ಪಟಾಕಿ ಡಬ್ಬ ಮೇಲೆ ಕುಳಿತಿದ್ದನು ಎಂದು ಪೊಲೀಸರ ತನಿಖೆ ವೇಳೆ ತಿಳಿದು ಬಂದಿದೆ.

ಸದ್ಯ ಆರು ಜನರ ವಿರುದ್ದ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹುಡುಗಾಟಕ್ಕೆ ಜೀವ ತೆಗೆದ ಆರೋಪಿಗಳಾದ ನವೀನ್, ದಿನಕರ್, ಸತ್ಯವೇಲು, ಕಾರ್ತಿಕ್, ಸತೀಶ್, ಸಂತೋಷ್​ನನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Tue, 5 November 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!