AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವರ್ಷದ ಹಿಂದೆ ಕಾಣೆಯಾಗಿದ್ದ ಬಾಲಕನನ್ನು ತಾಯಿ ಮಡಿಲಿಗೆ ಸೇರಿಸಿದ ಯುವಕರು

ಯುವಕರು ಬಾಲಕನಿಗೆ ಬೇಕರಿಯಲ್ಲಿ ಮಲಗಲು ಜಾಗ ಕೊಟ್ಟು ಕಟಿಂಗ್ ಮಾಡಿಸಿ ಊಟ, ಬಟ್ಟೆ ಕೊಟ್ಟು ಮಾನವೀಯತೆ ಮೆರೆದಿದ್ದಾರೆ. ಜೊತೆಗೆ ಬಾಲಕ ಹೇಳಿದ್ದ ತನ್ನ ಅಣ್ಣನ ಹೆಸರನ್ನ ಯುವಕರು ಫೇಸ್​ಬುಕ್​ನಲ್ಲಿ ಸರ್ಚ್ ಮಾಡಿದ್ದಾರೆ.

ಒಂದು ವರ್ಷದ ಹಿಂದೆ ಕಾಣೆಯಾಗಿದ್ದ ಬಾಲಕನನ್ನು ತಾಯಿ ಮಡಿಲಿಗೆ ಸೇರಿಸಿದ ಯುವಕರು
ಮಗನನ್ನು ನೋಡಿ ಕಣ್ಣೀರಾಕಿದ ತಾಯಿ
TV9 Web
| Edited By: |

Updated on:Jun 25, 2022 | 9:32 AM

Share

ಬೆಂಗಳೂರು: ಒಂದು ವರ್ಷದ ಹಿಂದೆ ಕಣ್ಣಾಮುಚ್ಚಾಲೆ ಆಡುವಾಗ ಗೂಡ್ಸ್ ಟ್ರೈನ್ ಹತ್ತಿ ನಾಪತ್ತೆಯಾಗಿದ್ದ ಬಾಲಕನನ್ನು (Boy) ಕುಟುಂಬಸ್ಥರಿಗೆ ಒಪ್ಪಿಸಿ ಯುವಕರು ಮಾನವೀಯತೆ (Humanity) ಮೆರೆದಿದ್ದಾರೆ. ಎರಡು ವಾರಗಳ ಹಿಂದೆ ನಗರದ ಬಿಟಿಎಂ ಲೇಔಟ್​ನಲ್ಲಿ ಉತ್ತರ ಭಾರತ ಮೂಲದ ಸುಹಾಸ್ ಎಂಬ ಬಾಲಕ ಹಸಿವಿನಿಂದ ಓಡಾಡುತ್ತಿದ್ದ. ಈ ವೇಳೆ ಬೇಕರಿ ಮಾಲೀಕ ರಾಜಣ್ಣ ಮತ್ತು ಯುವಕರಾದ ನಿತಿನ್ ಮತ್ತು ಶ್ರೀಧರ್ ಎಂಬುವವರು ಬಾಲಕನನ್ನು ಕರೆತಂದು ವಿಚಾರಣೆ ಮಾಡಿದ್ದಾರೆ. ಹಿಂದಿ ಭಾಷೆ ಮಾತನಾಡುತ್ತಿದ್ದ ಬಾಲಕ ಊರಿನ ಹೆಸರು ಮರೆತಿದ್ದ. ಯುವಕರು ಫೇಸ್​ಬುಕ್​ನಲ್ಲಿ ಕುಟುಂಬಸ್ಥರನ್ನು ಪತ್ತೆ ಹಚ್ಚಿ ಬಾಲಕನನ್ನು ಪೋಷಕರಿಗೆ ಒಪ್ಪಿಸಿದ್ದಾರೆ.

ಯುವಕರು ಬಾಲಕನಿಗೆ ಬೇಕರಿಯಲ್ಲಿ ಮಲಗಲು ಜಾಗ ಕೊಟ್ಟು ಕಟಿಂಗ್ ಮಾಡಿಸಿ ಊಟ, ಬಟ್ಟೆ ಕೊಟ್ಟು ಮಾನವೀಯತೆ ಮೆರೆದಿದ್ದರು. ಜೊತೆಗೆ ಬಾಲಕ ಹೇಳಿದ್ದ ತನ್ನ ಅಣ್ಣನ ಹೆಸರನ್ನ ಯುವಕರು ಫೇಸ್​ಬುಕ್​ನಲ್ಲಿ ಸರ್ಚ್ ಮಾಡಿದ್ದಾರೆ. ಈ ವೇಳೆ ಬಾಲಕ ಪಶ್ಚಿಮ ಬಂಗಾಳದ ಅಣ್ಣನ ಪೋಟೋವನ್ನ ಫೇಸ್​ಬುಕ್​ನಲ್ಲಿ ಗುರುತಿಸಿದ್ದ. ಕೂಡಲೇ ಮೆಸೇಂಜರ್ ಮೂಲಕ ಕುಟುಂಬಸ್ಥರನ್ನ ಸಂಪರ್ಕಿಸಿ ಕುಟುಂಬಸ್ಥರನ್ನು ಬೆಂಗಳೂರಿಗೆ ಕರೆಸಿದ್ದಾರೆ.

ಇದನ್ನೂ ಓದಿ: Rishabh Pant: ತಾನು ಔಟಾದಾಗ ಎದುರಾಳಿ ಆಟಗಾರರ ಜೊತೆ ಸಂಭ್ರಮಿಸಿದ ರಿಷಭ್ ಪಂತ್: ವೈರಲ್ ವಿಡಿಯೋ

ಇದನ್ನೂ ಓದಿ
Image
Rishabh Pant: ತಾನು ಔಟಾದಾಗ ಎದುರಾಳಿ ಆಟಗಾರರ ಜೊತೆ ಸಂಭ್ರಮಿಸಿದ ರಿಷಭ್ ಪಂತ್: ವೈರಲ್ ವಿಡಿಯೋ
Image
Monkeypox: ಮಂಕಿಪಾಕ್ಸ್​ ರೋಗದ ಲಕ್ಷಣಗಳೇನು? ಯಾವಾಗ ಚಿಕಿತ್ಸೆ ಪಡೆಯಬೇಕು?
Image
Rashmika Mandanna: ರಶ್ಮಿಕಾ ಮಾತ್ರವಲ್ಲ, ಅವರ ನಾಯಿ ಬಗ್ಗೆಯೂ ಗಾಸಿಪ್​; ಬಹಿರಂಗವಾಗಿಯೇ ಸ್ಪಷ್ಟನೆ ನೀಡಿದ ನಟಿ
Image
ಏಕಾಏಕಿ ಹಂಪ್ ಎಗರಿಸಿದ ಕೆಎಸ್​ಆರ್​ಟಿಸಿ ಬಸ್​ ಚಾಲಕ: ಕೆಳಗೆ ಬಿದ್ದು ಕಾಲು ಮುರಿದುಕೊಂಡ ಕಂಡಕ್ಟರ್

ನಿನ್ನೆ ಬಾಲಕನ ಪೋಷಕರು ಬೆಂಗಳೂರಿಗೆ ಆಗಮಿಸಿದ್ದರು. ತಾಯಿಯನ್ನು ನೋಡುತ್ತಿದ್ದಂತೆ ಬಾಲಕ ಸುಹಾಸ್ ಕಣ್ಣೀರು ಹಾಕಿದ್ದಾನೆ. ಈ ವೇಳೆ ಕುಟುಂಬಸ್ಥರು ಮಗ ಒಂದು ವರ್ಷದ ಹಿಂದೆಯೇ ನಾಪತ್ತೆಯಾಗಿದ್ದಾಗಿ ಮಾಹಿತಿ ನೀಡಿದ್ದಾರೆ. ಸದ್ಯ ಮಗನನ್ನ ಪೋಷಕರು ನಿನ್ನೆಯೇ ಹುಟ್ಟೂರಿಗೆ ಕರೆದುಕೊಂಡು ಹೋಗಿದ್ದಾರೆ. ದಿಕ್ಕು ತೋಚದೆ ಊರೂರು ಅಲೆಯುತ್ತಿದ್ದ ಬಾಲಕ ಸುಹಾಸ್ ನಗರಕ್ಕೆ ಬಂದು ಯುವಕರ ಸಹಾಯದಿಂದ ಕೊನೆಗೂ ತಾಯಿಯ ಮಡಿಲು ಸೇರಿದ್ದಾನೆ.

ಇದನ್ನೂ ಓದಿ: Rishabh Pant: ತಾನು ಔಟಾದಾಗ ಎದುರಾಳಿ ಆಟಗಾರರ ಜೊತೆ ಸಂಭ್ರಮಿಸಿದ ರಿಷಭ್ ಪಂತ್: ವೈರಲ್ ವಿಡಿಯೋ

Published On - 9:22 am, Sat, 25 June 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್