AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bannerghatta Biological Park: ಬೆಂಗಳೂರು ಬನ್ನೇರುಘಟ್ಟ ಜೈವಿಕ ಉದ್ಯಾನ ಫೆಬ್ರವರಿ 9 ರಂದು ಬಂದ್

ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನ(Bannerghatta Biological Park)ವನ್ನು ಫೆಬ್ರವರಿ 9 ರಂದು ಒಂದು ದಿನಗಳ ಕಾಲ ಮುಚ್ಚಲಾಗುತ್ತಿದೆ. ಜಿ 20 ರಾಷ್ಟ್ರಗಳ ಪ್ರತಿನಿಧಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಒಂದು ದಿನ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

Bannerghatta Biological Park: ಬೆಂಗಳೂರು ಬನ್ನೇರುಘಟ್ಟ ಜೈವಿಕ ಉದ್ಯಾನ ಫೆಬ್ರವರಿ 9 ರಂದು ಬಂದ್
ಬನ್ನೇರುಘಟ್ಟ ಜೈವಿಕ ಉದ್ಯಾನ
ನಯನಾ ರಾಜೀವ್
|

Updated on: Feb 08, 2023 | 10:27 AM

Share

ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನ(Bannerghatta Biological Park)ವನ್ನು ಫೆಬ್ರವರಿ 9 ರಂದು ಒಂದು ದಿನಗಳ ಕಾಲ ಮುಚ್ಚಲಾಗುತ್ತಿದೆ. ಜಿ 20 ರಾಷ್ಟ್ರಗಳ ಪ್ರತಿನಿಧಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಒಂದು ದಿನ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಬೆಂಗಳೂರಿನಲ್ಲಿ ಫೆಬ್ರವರಿ 9 ರಿಂದ 11 ದಿನಗಳ ಕಾಲ ಸಭೆ ನಡೆಯಲಿದೆ. ಸಭೆಯ ಭಾಗವಾಗಿ ಜಿ 20 ಸದಸ್ಯರು ಬೆಂಗಳೂರಿನ ವಿವಿಧ ಭಾಗಗಳಿಗೆ ಭೇಟಿ ನೀಡಲಿದ್ದಾರೆ. ಪ್ರೋಟೋಕಾಲ್ ಪ್ರಕಾರ ಬಿಬಿಪಿ, ಬಟರ್​ಫ್ಲೈ ಪಾರ್ಕ್​ ಹಾಗೂ ಸಫಾರಿ ಪ್ರದೇಶವನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ.

ಭಾರತ ಇಂಧನ ಸಪ್ತಾಹ, ಜಿ 20 ಸಭೆ ಹಾಗೂ ಏರ್ ಶೋ ಪರಿಣಾಮ ಹೊರ ರಾಜ್ಯ ಹಾಗೂ ವಿದೇಶದ ಪ್ರತಿನಿಧಿಗಳ ವಾಸ್ತವ್ಯಕ್ಕೆ ನಗರದ ಹೋಟೆಲ್​ಗಳಲ್ಲಿನ ಅಂದಾಜು 50 ಸಾವಿರ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ.

ಮತ್ತಷ್ಟು ಓದಿ: Aero India 2023: ಬೆಂಗಳೂರು ಏರ್​ ಶೋ ವೇಳೆ ವಿಮಾನ ಹಾರಾಟ ಸ್ಥಗಿತ, ವೇಳಾಪಟ್ಟಿಯಲ್ಲಿ ಬದಲಾವಣೆ

ಭಾರತದ ಇಂಧನ ಸಪ್ತಾಹ ಇಂದು ಕೊನೆಗೊಳ್ಳಲಿದೆ, ಫೆ. 13 ರಿಂದ 17ರವರೆಗೆ ಏರೋ ಇಂಡಿಯಾ ನಡೆಯಲಿದೆ. ನಗರದಲ್ಲಿನ ಪಂಚತಾರಾ ಕೊಠಡಿಗಳನ್ನು ಪೂರ್ಣ ಪ್ರಮಾಣದಲ್ಲಿ ಕಾಯ್ದಿರಿಸಲಾಗಿದೆ. ತ್ರಿ ಸ್ಟಾರ್ ಹೋಟೆಲ್​ಗಳಲ್ಲಿ ಕೆಲವು ಕೊಠಡಿಗಳು ಮಾತ್ರ ಲಭ್ಯವಿದ್ದು, ಅವುಗಳ ದರವೂ ಹೆಚ್ಚಳವಾಗಿದೆ.

ಪ್ರತಿ ವರ್ಷ ಏರ್​ ಶೋ ಸೇರಿದಂತೆ ಇತರೆ ಚಟುವಟಿಕೆಯಿಂದ ಕೊಠಡಿಗಳ ಕಾಯ್ದಿರಿಸುವಿಕೆ ಪ್ರಮಾಣ ಹೆಚ್ಚಿರುತ್ತಿತ್ತು. ಆದರೆ, ಈ ವರ್ಷ ಮೂರು ಪ್ರಮುಖ ಕಾರ್ಯಕ್ರಮಗಳು ಆಸುಪಾಸಿನಲ್ಲೇ ನಡೆಯುತ್ತಿರುವ ಪರಿಣಾಮ ಕೊಠಡಿಗಳ ಕಾಯ್ದಿರಿಸುವಿಕೆ ಹೆಚ್ಚಾಗಿದೆ ಎಂದು ಹೇಳಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್