AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bannerghatta Biological Park: ಬೆಂಗಳೂರು ಬನ್ನೇರುಘಟ್ಟ ಜೈವಿಕ ಉದ್ಯಾನ ಫೆಬ್ರವರಿ 9 ರಂದು ಬಂದ್

ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನ(Bannerghatta Biological Park)ವನ್ನು ಫೆಬ್ರವರಿ 9 ರಂದು ಒಂದು ದಿನಗಳ ಕಾಲ ಮುಚ್ಚಲಾಗುತ್ತಿದೆ. ಜಿ 20 ರಾಷ್ಟ್ರಗಳ ಪ್ರತಿನಿಧಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಒಂದು ದಿನ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

Bannerghatta Biological Park: ಬೆಂಗಳೂರು ಬನ್ನೇರುಘಟ್ಟ ಜೈವಿಕ ಉದ್ಯಾನ ಫೆಬ್ರವರಿ 9 ರಂದು ಬಂದ್
ಬನ್ನೇರುಘಟ್ಟ ಜೈವಿಕ ಉದ್ಯಾನ
ನಯನಾ ರಾಜೀವ್
|

Updated on: Feb 08, 2023 | 10:27 AM

Share

ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನ(Bannerghatta Biological Park)ವನ್ನು ಫೆಬ್ರವರಿ 9 ರಂದು ಒಂದು ದಿನಗಳ ಕಾಲ ಮುಚ್ಚಲಾಗುತ್ತಿದೆ. ಜಿ 20 ರಾಷ್ಟ್ರಗಳ ಪ್ರತಿನಿಧಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಒಂದು ದಿನ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಬೆಂಗಳೂರಿನಲ್ಲಿ ಫೆಬ್ರವರಿ 9 ರಿಂದ 11 ದಿನಗಳ ಕಾಲ ಸಭೆ ನಡೆಯಲಿದೆ. ಸಭೆಯ ಭಾಗವಾಗಿ ಜಿ 20 ಸದಸ್ಯರು ಬೆಂಗಳೂರಿನ ವಿವಿಧ ಭಾಗಗಳಿಗೆ ಭೇಟಿ ನೀಡಲಿದ್ದಾರೆ. ಪ್ರೋಟೋಕಾಲ್ ಪ್ರಕಾರ ಬಿಬಿಪಿ, ಬಟರ್​ಫ್ಲೈ ಪಾರ್ಕ್​ ಹಾಗೂ ಸಫಾರಿ ಪ್ರದೇಶವನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ.

ಭಾರತ ಇಂಧನ ಸಪ್ತಾಹ, ಜಿ 20 ಸಭೆ ಹಾಗೂ ಏರ್ ಶೋ ಪರಿಣಾಮ ಹೊರ ರಾಜ್ಯ ಹಾಗೂ ವಿದೇಶದ ಪ್ರತಿನಿಧಿಗಳ ವಾಸ್ತವ್ಯಕ್ಕೆ ನಗರದ ಹೋಟೆಲ್​ಗಳಲ್ಲಿನ ಅಂದಾಜು 50 ಸಾವಿರ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ.

ಮತ್ತಷ್ಟು ಓದಿ: Aero India 2023: ಬೆಂಗಳೂರು ಏರ್​ ಶೋ ವೇಳೆ ವಿಮಾನ ಹಾರಾಟ ಸ್ಥಗಿತ, ವೇಳಾಪಟ್ಟಿಯಲ್ಲಿ ಬದಲಾವಣೆ

ಭಾರತದ ಇಂಧನ ಸಪ್ತಾಹ ಇಂದು ಕೊನೆಗೊಳ್ಳಲಿದೆ, ಫೆ. 13 ರಿಂದ 17ರವರೆಗೆ ಏರೋ ಇಂಡಿಯಾ ನಡೆಯಲಿದೆ. ನಗರದಲ್ಲಿನ ಪಂಚತಾರಾ ಕೊಠಡಿಗಳನ್ನು ಪೂರ್ಣ ಪ್ರಮಾಣದಲ್ಲಿ ಕಾಯ್ದಿರಿಸಲಾಗಿದೆ. ತ್ರಿ ಸ್ಟಾರ್ ಹೋಟೆಲ್​ಗಳಲ್ಲಿ ಕೆಲವು ಕೊಠಡಿಗಳು ಮಾತ್ರ ಲಭ್ಯವಿದ್ದು, ಅವುಗಳ ದರವೂ ಹೆಚ್ಚಳವಾಗಿದೆ.

ಪ್ರತಿ ವರ್ಷ ಏರ್​ ಶೋ ಸೇರಿದಂತೆ ಇತರೆ ಚಟುವಟಿಕೆಯಿಂದ ಕೊಠಡಿಗಳ ಕಾಯ್ದಿರಿಸುವಿಕೆ ಪ್ರಮಾಣ ಹೆಚ್ಚಿರುತ್ತಿತ್ತು. ಆದರೆ, ಈ ವರ್ಷ ಮೂರು ಪ್ರಮುಖ ಕಾರ್ಯಕ್ರಮಗಳು ಆಸುಪಾಸಿನಲ್ಲೇ ನಡೆಯುತ್ತಿರುವ ಪರಿಣಾಮ ಕೊಠಡಿಗಳ ಕಾಯ್ದಿರಿಸುವಿಕೆ ಹೆಚ್ಚಾಗಿದೆ ಎಂದು ಹೇಳಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ