AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿ ಬದಿ ವ್ಯಾಪಾರಿಗಳಿಗೆ ಇ-ವಾಹನ ವಿತರಿಸಲು ಬಿಬಿಎಂಪಿ ಪ್ಲಾನ್, ಆದ್ರೆ ಆರಂಭದಲ್ಲೇ ಅಪಸ್ವರ 

ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (ಬಿಬಿಎಂಪಿ) 10,000 ಬೀದಿ ವ್ಯಾಪಾರಿಗಳಿಗೆ 40 ಕೋಟಿ ರೂಪಾಯಿ ವೆಚ್ಚದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ವಿತರಿಸಲು ಯೋಜಿಸಿದೆ. ಆದರೆ, ಈ ಯೋಜನೆಗೆ ವ್ಯಾಪಾರಿಗಳಿಂದ ಆಕ್ಷೇಪ ವ್ಯಕ್ತವಾಗಿದೆ. ಅವರು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಕಿರುಕುಳದಿಂದ ಮುಕ್ತಿ ನೀಡುವಂತೆ ಆಗ್ರಹಿಸಿದ್ದಾರೆ. ವಾಹನಗಳ ಜೊತೆಗೆ ಇತರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಬೀದಿ ಬದಿ ವ್ಯಾಪಾರಿಗಳಿಗೆ ಇ-ವಾಹನ ವಿತರಿಸಲು ಬಿಬಿಎಂಪಿ ಪ್ಲಾನ್, ಆದ್ರೆ ಆರಂಭದಲ್ಲೇ ಅಪಸ್ವರ 
ಬಿಬಿಎಂಪಿ, ಬೀದಿ ಬದಿ ವ್ಯಾಪಾರಿ
ಶಾಂತಮೂರ್ತಿ
| Edited By: |

Updated on: Jan 28, 2025 | 8:12 AM

Share

ಬೆಂಗಳೂರು, ಜನವರಿ 28: ಇತ್ತೀಚೆಗಷ್ಟೇ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ನಗರದ ಬೀದಿಬದಿ ವ್ಯಾಪಾರಿಗಳ ಸರ್ವೆ ಮಾಡಿತ್ತು. ಇದೀಗ ಬೀದಿ ಬದಿ ವ್ಯಾಪಾರಿಗಳಿಗೆ (Street Vendor) ಎಲೆಕ್ಟ್ರಿಕ್ ವಾಹನಗಳನ್ನ ನೀಡಲು ಸಜ್ಜಾಗಿದೆ. ಬಿಬಿಎಂಪಿ ವ್ಯಾಪ್ತಿಯ 10 ಸಾವಿರ ಬೀದಿಬದಿ ವ್ಯಾಪಾರಿಗಳಿಗೆ ಇ-ಸಂತೆ ಹೆಸರಲ್ಲಿ ಬರೋಬ್ಬರಿ 40 ಕೋಟಿ ರೂಪಾಯಿ ವೆಚ್ಚದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನ ವಿತರಿಸಲು ಸಜ್ಜಾಗಿದೆ.

ಆದರೆ, ಪಾಲಿಕೆಯ ಈ ಪ್ಲಾನ್​ಗೆ ಸ್ವತಃ ಬೀದಿ ಬದಿ ವ್ಯಾಪಾರಿಗಳೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋಟಿ ಕೋಟಿ ಹಣ ಖರ್ಚು ಮಾಡಿ ವಾಹನಗಳನ್ನು ನೀಡುತ್ತಿರುವುದಕ್ಕೆ ಖುಷಿ ಇದೆ. ಹಾಗೇ ಇತರೆ ಸಮಸ್ಯೆಗಳನ್ನೂ ಬಗೆಹರಿಸಿ ಎಂದು ಆಗ್ರಹಿಸುತ್ತಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ, ಕೆ.ಆರ್. ಮಾರುಕಟ್ಟೆ ಸೇರಿದಂತೆ ಹಲವು ಏರಿಯಾಗಳಲ್ಲಿ ಬೀದಿಬದಿ ವ್ಯಾಪಾರಿಗಳು ಬದುಕು ಕಟ್ಟಿಕೊಂಡಿದ್ದಾರೆ. ಫುಟ್​ಪಾತ್​ಗಳ ಮೇಲೆ, ತಳ್ಳುವಗಾಡಿಗಳಲ್ಲಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ಇದೀಗ ಪಾಲಿಕೆ ಹೈಟೆಕ್ ಸೌಕರ್ಯ ನೀಡಲು ಹೊರಟಿದೆ. ಸದ್ಯ ಬೀದಿ ಬದಿ ವ್ಯಾಪಾರಿಗಳ ಸರ್ವೆ ನಡೆಸಿರುವ ಪಾಲಿಕೆ, ಈಗ ಆಯ್ದ ಬೀದಿ ಬದಿ ವ್ಯಾಪಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ನೀಡಲು ತಯಾರಿ ನಡೆಸಿದೆ.

ಈ ಪ್ಲಾನ್​ಗೆ ಬಿಬಿಎಂಪಿಯ ಬರೋಬ್ಬರಿ 40 ಕೋಟಿ ರೂಪಾಯಿ ಮೀಸಲಿಟ್ಟಿದೆ. ರಾಜಧಾನಿಯ ಎಲ್ಲ ವಲಯಗಳಿಂದ ಆಯ್ದ ಬೀದಿಬದಿ ವ್ಯಾಪಾರಿಗಳಿಗೆ ಎಲೆಕ್ಟ್ರಾನಿಕ್ ವಾಹನಗಳನ್ನು ವಿತರಿಸಲು ಬಿಬಿಎಂಪಿ ತಯಾರಿ ನಡೆಸಿದೆ. ಆದ್ರೆ ಇತ್ತ ಪಾಲಿಕೆಯ ಈ ಪ್ರಯೋಗಕ್ಕೆ ಬೀದಿ ಬದಿ ವ್ಯಾಪಾರಿಗಳಿಂದ ಆರಂಭದಲ್ಲೇ ಅಪಸ್ವರ ಕೇಳಿಬಂದಿದೆ.

ಇದನ್ನೂ ಓದಿ: ಸಾಕುಪ್ರಾಣಿಗಳಿಗೆ ರಕ್ಷಣಾ ಕೇಂದ್ರ ತೆರೆಯಲು ಮುಂದಾದ ಬಿಬಿಎಂಪಿ: ಸ್ಥಳೀಯ ಸಂಸ್ಥೆಯ ಪ್ರಯೋಗ ದೇಶದಲ್ಲೇ ಮೊದಲು

ಇದಕ್ಕೆ, ಕೋಟಿ ಕೋಟಿ ಖರ್ಚು ಮಾಡುವ ಬದಲು ಬೀದಿ ಬದಿ ವ್ಯಾಪಾರಿಗಳಿಗೆ ಸಿಗಬೇಕಾದ ಮೂಲಭೂತ ಸೌಲಭ್ಯ ನೀಡಿ, ಜೊತೆಗೆ ಯಾವುದೇ ಕಿರುಕುಳ ಕೊಡದಂತೆ ವ್ಯಾಪಾರ ಮಾಡಲು ಅವಕಾಶ ನೀಡಿ ಅಂತ ಬೀದಿಬದಿ ವ್ಯಾಪಾರಿಗಳು ಆಗ್ರಹಿಸಿದ್ದಾರೆ.

ಸದ್ಯ ಬೆಂಗಳೂರಿನಲ್ಲಿ ಈಗಾಗಲೇ ಹಲವೆಡೆ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡುವುದರ ಜೊತೆಗೆ ಫುಟ್​ಪಾತ್​ಗಳಲ್ಲಿ ವ್ಯಾಪಾರಕ್ಕೂ ಕೊಕ್ ನೀಡಲಾಗಿದೆ. ಇನ್ನು, ಎಲೆಕ್ಟ್ರಿಕ್ ವಾಹನಗಳು ಎಲ್ಲರಿಗೂ ಸಿಗುವಂತಾಗಬೇಕು ಎಂದು ಬೀದಿ ಬದಿ ವ್ಯಾಪಾರಿಗಳು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ