AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್​ಪಾತ್ ಮೇಲೆಯೇ ಟ್ರಾನ್ಸ್​ಫಾರ್ಮರ್​​ಗಳ ಸ್ಥಾಪನೆ; ಜನರ ಜೀವದ ಜೊತೆ ಆಟ ಆಡುತ್ತಿದೆಯಾ ಬೆಸ್ಕಾಂ?

ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಬೆಸ್ಕಾಂ ಸ್ಥಾಪಿಸಿರುವ ಟ್ರಾನ್ಸ್‌ಫಾರ್ಮರ್‌ಗಳು ಸುರಕ್ಷತೆ ಇಲ್ಲದೆ ಜನರ ಜೀವಕ್ಕೆ ಮಾರಕವಾಗಿವೆ. ರಾಜಾಜಿನಗರ, ಮಲ್ಲೇಶ್ವರದಂತಹ ಪ್ರದೇಶಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ವಿದ್ಯುತ್ ಅವಘಡಗಳ ಭೀತಿ ಹೆಚ್ಚಿದೆ. ಬೆಸ್ಕಾಂನ ಮುಂಜಾಗ್ರತಾ ಕ್ರಮಗಳ ನಿರ್ಲಕ್ಷ್ಯ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಡೆಡ್ಲಿ ಟ್ರಾನ್ಸ್​ಫಾರ್ಮರ್​ಗಳ ಚಿತ್ರಣ ಟಿವಿ9 ಕನ್ನಡ ನಡೆಸಿರುವ ರಿಯಾಲಿಟಿ ಚೆಕ್ನಲ್ಲಿ ಬಯಲಾಗಿದೆ.

ಫುಟ್​ಪಾತ್ ಮೇಲೆಯೇ ಟ್ರಾನ್ಸ್​ಫಾರ್ಮರ್​​ಗಳ ಸ್ಥಾಪನೆ; ಜನರ ಜೀವದ ಜೊತೆ ಆಟ ಆಡುತ್ತಿದೆಯಾ ಬೆಸ್ಕಾಂ?
ಜನರ ಜೀವಕ್ಕೆ ಮಾರಕವಾದ ಬೆಸ್ಕಾಂ ಟ್ರಾನ್ಸ್​ಫಾರ್ಮರ್​​ಗಳು
ಭಾವನಾ ಹೆಗಡೆ
|

Updated on: Dec 06, 2025 | 10:20 AM

Share

ಬೆಂಗಳೂರು, ಡಿಸೆಂಬರ್ 06: ಬೆಂಗಳೂರಿನ (Bengaluru) ಸಾರ್ವಜನಿಕ ಸ್ಥಳಗಳೇ ಜನಸಾಮಾನ್ಯರಿಗೆ ಮಾರಕವಾಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತವಾಗಿದ್ದು, ಸಮರ್ಪಕ ವಿದ್ಯುತ್ ಪೂರೈಕೆ ಉದ್ದೇಶದಿಂದ ಬೆಸ್ಕಾಂ (BESCOM) ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಿರುವ ಟ್ರಾನ್ಸ್​ಫಾರ್ಮರ್​ ಸುತ್ತಮುತ್ತ ಸುರಕ್ಷತೆಯೇ ಇಲ್ಲದಂತಾಗಿದೆ. ಈ ಡೆಡ್ಲಿ ಟ್ರಾನ್ಸ್​ಫಾರ್ಮರ್​ ಗಳ ಚಿತ್ರಣ ಟಿವಿ9 ಕನ್ನಡ ನಡೆಸಿರುವ ರಿಯಾಲಿಟಿ ಚೆಕ್​ನಲ್ಲಿ ಬಯಲಾಗಿದೆ.

ಕನಿಷ್ಠ ಮುಂಜಾಗ್ರತಾ ಕ್ರಮ ಕೈಗೊಳ್ಳದ ಬೆಸ್ಕಾಂ ವಿರುದ್ಧ ಆಕ್ರೋಶ

ಬೆಸ್ಕಾಂ ರಸ್ತೆ ಹಾಗೂ ಫುಟ್ಪಾತ್ಗಳ ಆಸುಪಾಸು ಸ್ಥಾಪಿಸಿರುವ ಟ್ರಾನ್ಸ್​ಫಾರ್ಮರ್​ ಜನರ ಜೀವ ತೆಗೆಯುವ ರೀತಿಯಲ್ಲಿ ಗೋಚರವಾಗುತ್ತಿದ್ದು, ಟ್ರಾನ್ಸ್​ಫಾರ್ಮರ್​ಗಳ ಸುತ್ತಮುತ್ತ ಕನಿಷ್ಠ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ಹೆಚ್ಚಾಗಿದೆ. ಬೆಂಗಳೂರಿನ ಹಲವಾರು ಕಡೆಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಟ್ರಾನ್ಸ್​ಫಾರ್ಮರ್​​ಗಳ ಸ್ಥಾಪನೆ ಮಾಡಲಾಗಿದೆ. ರಾಜಾಜಿನಗರ ಸಮೀಪದ ಶ್ರೀ ರಾಂಪುರದಲ್ಲಿ ಮಧ್ಯ ರಸ್ತೆಯಲ್ಲಿ ಜನರ ಓಡಾಟಕ್ಕೆ ಅಡ್ಡಿಯಾಗುವ ಹಾಗೆ ಟ್ರಾನ್ಸ್​ಫಾರ್ಮರ್​ ಸ್ಥಾಪಿಸಲಾಗಿದೆ. ನಿತ್ಯ ಇಲ್ಲಿ ನೂರಾರು ಮಂದಿ ಓಡಾಟ ಮಾಡುತ್ತಿದ್ದು, ವಿದ್ಯುತ್ ಅವಘಡಗಳು ಸಂಭವಿಸಿದರೆ ಯಾರು ಹೊಣೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಜನರ ಸುರಕ್ಷತೆ ಮರೆತ ಬೆಸ್ಕಾಂ

ಮಲ್ಲೇಶ್ವರ ಬಳಿಯ ರೈಲ್ವೆ ಪ್ಯಾರಲಲ್ ರಸ್ತೆಯಲ್ಲೂ ಪರಿಸ್ಥಿತಿ ಭಿನ್ನವಾಗೇನೂ ಇಲ್ಲ. ಫುಟ್ಪಾತ್ ಮೇಲೆಯೇ ಸ್ಥಾಪನೆ ಆಗಿರುವ ಟ್ರಾನ್ಸ್​ಫಾರ್ಮರ್​​ಗಳ ಹೈ ಟೆನ್ಶನ್ ತಂತಿಗಳೇ ಹೊರಬಂದರೂ ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪ್ರಾಣ ಉಳಿಸಿಕೊಳ್ಳಲು ವಿಧಿ ಇಲ್ಲದೆ ಫುಟ್ಪಾತ್ ಬಿಟ್ಟು ರಸ್ತೆ ಮೇಲೆ ನಡೆಯುವ ಪರಿಸ್ಥಿತಿ ಎದುರಾಗಿದೆ. ಸಮರ್ಪಕ ವಿದ್ಯುತ್ ಪೂರೈಕೆ ನೆಪದಲ್ಲಿ ಸಿಕ್ಕ ಸಿಕ್ಕ ಸಾರ್ವಜನಿಕ ಸ್ಥಳಗಳಲ್ಲಿ ಟ್ರಾನ್ಸ್​ಫಾರ್ಮರ್​ ನಿರ್ಮಾಣ ಮಾಡುವ ಬೆಸ್ಕಾಂ, ಅಗತ್ಯ ಭದ್ರತಾ ಮಾರ್ಗಸೂಚಿಯನ್ನು ಮರೆತಂತಿದೆ. ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾರ್ವಜನಿಕರ ಹಿತದೃಷ್ಟಿಯನ್ನೂ ಕಾಪಾಡಬೇಕಿದೆ.

ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ