AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಫುಟ್​ಪಾತ್​ಗಳು ಹಾಳಾಗಲು ಇಲಿ, ಹೆಗ್ಗಣಗಳೇ ಕಾರಣವಂತೆ!

ಕೋಟ್ಯಂತರ ಹಣ ಖರ್ಚು ಮಾಡಿ ನಿರ್ಮಿಸಿದ ಫುಟ್​ ಪಾತ್ ಕೆಲವೇ ದಿನಗಳಲ್ಲಿ ಹಾಳಾಗಿದ್ದು, ಬಿಬಿಎಂಪಿಯು ಎಲ್ಲಾ ಆರೋಪವನ್ನು ಇಲಿ, ಹೆಗ್ಗಣಗಳ ಹೆಗಲೇರಿಸಿದೆ.

ಬೆಂಗಳೂರಿನ ಫುಟ್​ಪಾತ್​ಗಳು ಹಾಳಾಗಲು ಇಲಿ, ಹೆಗ್ಗಣಗಳೇ ಕಾರಣವಂತೆ!
Rats
TV9 Web
| Edited By: |

Updated on: Jul 14, 2022 | 3:14 PM

Share

ಕೋಟ್ಯಂತರ ಹಣ ಖರ್ಚು ಮಾಡಿ ನಿರ್ಮಿಸಿದ ಫುಟ್​ ಪಾತ್ ಕೆಲವೇ ದಿನಗಳಲ್ಲಿ ಹಾಳಾಗಿದ್ದು, ಬಿಬಿಎಂಪಿಯು ಎಲ್ಲಾ ಆರೋಪವನ್ನು ಇಲಿ, ಹೆಗ್ಗಣಗಳ ಹೆಗಲೇರಿಸಿದೆ. ಹೌದು, ಕೋಟಿ ಗಟ್ಟಲೆ ಹಣ ಖರ್ಚು ಮಾಡಿ, ಸ್ವಲ್ಪವೇ ಸ್ವಲ್ಪ ದಿನಗಳಲ್ಲೇ ಫುಟ್​ ಪಾತ್ ಕಿತ್ತು ಬರುತ್ತಿದೆ. ಆದರೆ ಬಿಬಿಎಂಪಿ ಎಂಜಿನಿಯರ್ ಮಾತ್ರ ಇದು ನಮ್ಮ ತಪ್ಪಲ್ಲ ಇಲಿ ಹಾಗೂ ಹೆಗ್ಗಣಗಳ ತಪ್ಪು ಎಂದು ಜಾರಿಕೊಂಡಿದ್ದಾರೆ.

ಸ್ಮಾರ್ಟ್ ಸಿಟಿ ಟೆಂಡರ್ ಶ್ಯೂರ್ ಯೋಜನೆಯಲ್ಲಿ ಬಿಬಿಬಿಎಂಪಿಯು ಸಾವಿರಾರು ಕೋಡಿ ವ್ಯಯಿಸಿ ರಸ್ತೆ ಹಾಗೂ ಫುಟ್​ಪಾತ್​ಗಳ ನಿರ್ಮಾಣ ಮಾಡಿತ್ತು. ಇದೀಗ ಈ ಫುಟ್​ಪಾತ್​ಗಳು ಹಾಳಾಗಿದ್ದು ಇಲಿ ಮತ್ತು ಹೆಗ್ಗಣಗಳಿಂದ ಎಂದು ಬಿಬಿಎಂಪಿ ಹೇಳುತ್ತಿದೆ.

ಸ್ಮಾರ್ಟ್ ಸಿಟಿ, ವೈಟ್ ಟಾಪಿಂಗ್, ಟೆಂಡರ್ ಶ್ಯೂರ್ ಯೋಜನೆಯಡಿ ಫುಟ್ ಪಾತ್ ನಿರ್ಮಾಣ ಮಾಡಲಾಗಿತ್ತು. ದೇಶದ ಪ್ರಧಾನಿ ಬರುವ ಸಂದರ್ಭದಲ್ಲೂ ನಕಲಿ ಕಾಮಗಾರಿ ನಡೆಸಿ ದುಡ್ಡು ದೋಚಿದ್ದಾರೆ ಎನ್ನುವ ಆರೋಪವನ್ನು ಬಿಬಿಎಂಪಿ ಎದುರಿಸಿತ್ತು.

ಈ ನಡುವೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಸಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲೂ ಕಳಪೆ ಆರೋಪ ಕೇಳಿ ಬಂದಿದ್ದು, ಸಾಕ್ಷಿ ಅನ್ನುವಂತೆ ಕಾಮಗಾರಿ ಮುಗಿದ ಕೆಲವೇ ದಿನಗಳಲ್ಲಿ ಫುಟ್ ಪಾತ್ ಸ್ಲಾಬ್ ಗಳು ಕಿತ್ತು ಬರಲಾರಂಭಿಸಿದ್ದಾರೆ. ಮುಖ್ಯವಾಗಿ ನೃಪತುಂಗ ರಸ್ತೆಯಲ್ಲಿರುವ ಫುಟ್ ಪಾತ್ ಸ್ಥಿತಿ ಇಡೀ ನಗರದ ಕಾಮಗಾರಿಗೆ ಹಿಡಿದ ಕೈಗನ್ನಡಿಯಂತಿದೆ.

ಬಿಬಿಎಂಪಿ ಚೀಫ್ ಇಂಜಿನಿಯರ್ ಲೋಕೇಶ್ ಅವರೇ ಫುಟ್ ಪಾತ್ ಹಾಳಾಗಲು ಹೆಗ್ಗಣ ಕಾರಣ ಎಂದು ಹೇಳಿದ್ದಾರೆ.

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ