AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳ ಫ್ಲೈ ಓವರ್‌ನ ಲೂಪ್ ರಾಂಪ್ ಪೂರ್ಣ: ಟ್ರಾಫಿಕ್ ಸಮಸ್ಯೆಗೆ ಮುಕ್ತಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಬ್ಬಾಳ ಫ್ಲೈ ಓವರ್ ಮೇಲೆಯೇ ಹೆಚ್ಚಿನ ಟ್ರಾಫಿಕ್ ಜಾಮ್ ಆಗುತ್ತಿದೆ. ಈ ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರ ನೀಡಲು ಪ್ಲೈ ಓವರ್ ಲೂಪ್ ರಾಂಪ್ ನಿರ್ಮಾಣ ಮಾಡಲಾಗಿದೆ. ಈ ಲೂಪ್ ರಾಂಪ್ ನಿರ್ಮಾಣ ಕಾಮಗಾರಿ ಬಹುತೇಕ ಮುಗಿದಿದ್ದು, ಕೆಲವೇ ದಿನಗಳಲ್ಲಿ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಇದರಿಂದ ಕೊಂಚ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಯಾಗಲಿದೆ.

ಹೆಬ್ಬಾಳ ಫ್ಲೈ ಓವರ್‌ನ ಲೂಪ್ ರಾಂಪ್ ಪೂರ್ಣ: ಟ್ರಾಫಿಕ್ ಸಮಸ್ಯೆಗೆ ಮುಕ್ತಿ
Hebbal Flyover Ramp
ರಮೇಶ್ ಬಿ. ಜವಳಗೇರಾ
|

Updated on:Aug 05, 2025 | 3:34 PM

Share

ಬೆಂಗಳೂರು, (ಆಗಸ್ಟ್ 05) ನಗರದ ಹೆಬ್ಬಾಳ ಫ್ಲೈ ಓವರ್ ( Hebbal flyover)  ಮೇಲೆಯೇ ಹೆಚ್ಚಿನ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಇದನ್ನು ನಿವಾರಿಸಲು ಪ್ಲೈ ಓವರ್ ಲೂಪ್ ರಾಂಪ್ (Bengaluru’s Hebbal flyover ramp) ನಿರ್ಮಾಣ ಮಾಡಲಾಗಿದ್ದು, ಇದೇ ಆಗಸ್ಟ್ 15ರ ಬಳಿಕ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಬಗ್ಗೆ ಸ್ವತಃ ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನಾಗವಾರ ಕಡೆಯಿಂದ ಬರುವ ವಾಹನಗಳು ಈ ಲೂಪ್ ರಾಂಪ್ ಮೇಲೆ ಹತ್ತಿ ಮೇಖ್ರಿ ಸರ್ಕಲ್, ವಿಂಡ್ಸರ್ ಮ್ಯಾನರ್, ವಿಧಾನಸೌಧದ ಕಡೆಗೆ ಸಂಚಾರ ಮಾಡಬಹುದು. ಹೆಬ್ಬಾಳ ಪ್ಲೈ ಓವರ್ ಮೇಲಿನ ಟ್ರಾಫಿಕ್ ಜಾಮ್ ಕಡಿಮೆ ಮಾಡಲು ಹೊಸದಾಗಿ ಈ ಲೂಪ್ ರಾಂಪ್ ನಿರ್ಮಾಣ ಮಾಡಲಾಗಿದೆ. ಲೂಪ್ ರಾಂಪ್ ಮೂಲಕ ಈ ಮೊದಲು ಇದ್ದ ಹೆಬ್ಬಾಳ ಫ್ಲೈ ಓವರ್‌ಗೆ ಮತ್ತೊಂದು ಹೊಸ ರಸ್ತೆ ಸೇರ್ಪಡೆಯಾಗಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗುವ ರಸ್ತೆಗಳ ಪೈಕಿ ಹೆಬ್ಬಾಳ ಪ್ಲೈ ಓವರ್ ಕೂಡ ಒಂದು.ಏರ್ ಪೋರ್ಟ್ ಗೆ ಹೋಗುವವರು, ಏರ್ ಪೋರ್ಟ್ ನಿಂದ ಬೆಂಗಳೂರು ಸಿಟಿಗೆ ಬರುವವರು ಹೆಬ್ಬಾಳ ಫ್ಲೈ ಓವರ್ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಳ್ಳುತ್ತಿದ್ದರು. ಇದನ್ನು ತಪ್ಪಿಸಲು ಹೊಸದಾಗಿ ಲೂಪ್ ರಾಂಪ್ ಅನ್ನು ನಿರ್ಮಾಣ ಮಾಡಲಾಗಿದೆ. ಈ ಲೂಪ್ ರಾಂಪ್ ಮೂಲಕ ಏರ್ ಪೋರ್ಟ್ ಕಡೆ ಸಂಚರಿಸುವ ವಾಹನಗಳು, ತುಮಕೂರು ರಸ್ತೆಯ ಕಡೆ ಸಂಚರಿಸುವ ವಾಹನಗಳಿಗೆ ಪ್ರತೇಕ ರಸ್ತೆಯ ವ್ಯವಸ್ಥೆಯನ್ನು ಮಾಡಲಾಗಿದೆ.

ಇದನ್ನೂ ಓದಿ: ಮೆಟ್ರೋ ಹಳದಿ ಮಾರ್ಗ: ಚಾಲಕರಹಿತ ರೈಲಿನಲ್ಲಿ ಸಂಚರಿಸಿ ಪರಿಶೀಲಿಸಿದ ಡಿಸಿಎಂ ಡಿಕೆ ಶಿವಕುಮಾರ್

ಈ ವರ್ಷದ ಏಪ್ರಿಲ್ ತಿಂಗಳಿಗೆ ಲೂಪ್ ರಾಂಪ್ ನಿರ್ಮಾಣ ಕಾಮಗಾರಿ ಮುಗಿಸುವ ಗುರಿ ಹೊಂದಲಾಗಿತ್ತು. ಆದ್ರೆ, ವಿಳಂಬವಾಗಿ ಕಾಮಗಾರಿ ಮುಗಿದಿದ್ದು, ಈಗ ಅಂತಿಮ ಟಚ್ ನೀಡಲಾಗುತ್ತಿದೆ. ಬಹುತೇಕ ಪೂರ್ಣಗೊಂಡಿದ್ದು, ಇದೇ ಆಗಸ್ಟ್ 15ರಂದು ಉದ್ಘಾಟನೆಯಾಗಲಿದೆ. ಹೆಬ್ಬಾಳ ಪ್ಲೈ ಓವರ್‌ಗೆ ಹೊಸದಾಗಿ ಲೂಪ್ ರಾಂಪ್ ನಿರ್ಮಾಣ ಮಾಡಿರುವುದರಿಂದ ಪೀಕ್ ಅವರ್ ಮತ್ತು ಹಬ್ಬದ ಸಂದರ್ಭಗಳಲ್ಲಿ ಏರ್ ಪೋರ್ಟ್ ಗೆ ಹೋಗುವವರು ಮತ್ತು ಬರುವವರಿಗೆ ಬೇಗನೇ ತಮ್ಮ ಸ್ಥಳ ತಲುಪಲು ಅನುಕೂಲವಾಗುತ್ತೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Tue, 5 August 25

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು