AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳ ಫ್ಲೈ ಓವರ್‌ನ ಲೂಪ್ ರಾಂಪ್ ಪೂರ್ಣ: ಟ್ರಾಫಿಕ್ ಸಮಸ್ಯೆಗೆ ಮುಕ್ತಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಬ್ಬಾಳ ಫ್ಲೈ ಓವರ್ ಮೇಲೆಯೇ ಹೆಚ್ಚಿನ ಟ್ರಾಫಿಕ್ ಜಾಮ್ ಆಗುತ್ತಿದೆ. ಈ ಟ್ರಾಫಿಕ್ ಜಾಮ್ ಸಮಸ್ಯೆಗೆ ಪರಿಹಾರ ನೀಡಲು ಪ್ಲೈ ಓವರ್ ಲೂಪ್ ರಾಂಪ್ ನಿರ್ಮಾಣ ಮಾಡಲಾಗಿದೆ. ಈ ಲೂಪ್ ರಾಂಪ್ ನಿರ್ಮಾಣ ಕಾಮಗಾರಿ ಬಹುತೇಕ ಮುಗಿದಿದ್ದು, ಕೆಲವೇ ದಿನಗಳಲ್ಲಿ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಇದರಿಂದ ಕೊಂಚ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಯಾಗಲಿದೆ.

ಹೆಬ್ಬಾಳ ಫ್ಲೈ ಓವರ್‌ನ ಲೂಪ್ ರಾಂಪ್ ಪೂರ್ಣ: ಟ್ರಾಫಿಕ್ ಸಮಸ್ಯೆಗೆ ಮುಕ್ತಿ
Hebbal Flyover Ramp
ರಮೇಶ್ ಬಿ. ಜವಳಗೇರಾ
|

Updated on:Aug 05, 2025 | 3:34 PM

Share

ಬೆಂಗಳೂರು, (ಆಗಸ್ಟ್ 05) ನಗರದ ಹೆಬ್ಬಾಳ ಫ್ಲೈ ಓವರ್ ( Hebbal flyover)  ಮೇಲೆಯೇ ಹೆಚ್ಚಿನ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಇದನ್ನು ನಿವಾರಿಸಲು ಪ್ಲೈ ಓವರ್ ಲೂಪ್ ರಾಂಪ್ (Bengaluru’s Hebbal flyover ramp) ನಿರ್ಮಾಣ ಮಾಡಲಾಗಿದ್ದು, ಇದೇ ಆಗಸ್ಟ್ 15ರ ಬಳಿಕ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಬಗ್ಗೆ ಸ್ವತಃ ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ನಾಗವಾರ ಕಡೆಯಿಂದ ಬರುವ ವಾಹನಗಳು ಈ ಲೂಪ್ ರಾಂಪ್ ಮೇಲೆ ಹತ್ತಿ ಮೇಖ್ರಿ ಸರ್ಕಲ್, ವಿಂಡ್ಸರ್ ಮ್ಯಾನರ್, ವಿಧಾನಸೌಧದ ಕಡೆಗೆ ಸಂಚಾರ ಮಾಡಬಹುದು. ಹೆಬ್ಬಾಳ ಪ್ಲೈ ಓವರ್ ಮೇಲಿನ ಟ್ರಾಫಿಕ್ ಜಾಮ್ ಕಡಿಮೆ ಮಾಡಲು ಹೊಸದಾಗಿ ಈ ಲೂಪ್ ರಾಂಪ್ ನಿರ್ಮಾಣ ಮಾಡಲಾಗಿದೆ. ಲೂಪ್ ರಾಂಪ್ ಮೂಲಕ ಈ ಮೊದಲು ಇದ್ದ ಹೆಬ್ಬಾಳ ಫ್ಲೈ ಓವರ್‌ಗೆ ಮತ್ತೊಂದು ಹೊಸ ರಸ್ತೆ ಸೇರ್ಪಡೆಯಾಗಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗುವ ರಸ್ತೆಗಳ ಪೈಕಿ ಹೆಬ್ಬಾಳ ಪ್ಲೈ ಓವರ್ ಕೂಡ ಒಂದು.ಏರ್ ಪೋರ್ಟ್ ಗೆ ಹೋಗುವವರು, ಏರ್ ಪೋರ್ಟ್ ನಿಂದ ಬೆಂಗಳೂರು ಸಿಟಿಗೆ ಬರುವವರು ಹೆಬ್ಬಾಳ ಫ್ಲೈ ಓವರ್ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಳ್ಳುತ್ತಿದ್ದರು. ಇದನ್ನು ತಪ್ಪಿಸಲು ಹೊಸದಾಗಿ ಲೂಪ್ ರಾಂಪ್ ಅನ್ನು ನಿರ್ಮಾಣ ಮಾಡಲಾಗಿದೆ. ಈ ಲೂಪ್ ರಾಂಪ್ ಮೂಲಕ ಏರ್ ಪೋರ್ಟ್ ಕಡೆ ಸಂಚರಿಸುವ ವಾಹನಗಳು, ತುಮಕೂರು ರಸ್ತೆಯ ಕಡೆ ಸಂಚರಿಸುವ ವಾಹನಗಳಿಗೆ ಪ್ರತೇಕ ರಸ್ತೆಯ ವ್ಯವಸ್ಥೆಯನ್ನು ಮಾಡಲಾಗಿದೆ.

ಇದನ್ನೂ ಓದಿ: ಮೆಟ್ರೋ ಹಳದಿ ಮಾರ್ಗ: ಚಾಲಕರಹಿತ ರೈಲಿನಲ್ಲಿ ಸಂಚರಿಸಿ ಪರಿಶೀಲಿಸಿದ ಡಿಸಿಎಂ ಡಿಕೆ ಶಿವಕುಮಾರ್

ಈ ವರ್ಷದ ಏಪ್ರಿಲ್ ತಿಂಗಳಿಗೆ ಲೂಪ್ ರಾಂಪ್ ನಿರ್ಮಾಣ ಕಾಮಗಾರಿ ಮುಗಿಸುವ ಗುರಿ ಹೊಂದಲಾಗಿತ್ತು. ಆದ್ರೆ, ವಿಳಂಬವಾಗಿ ಕಾಮಗಾರಿ ಮುಗಿದಿದ್ದು, ಈಗ ಅಂತಿಮ ಟಚ್ ನೀಡಲಾಗುತ್ತಿದೆ. ಬಹುತೇಕ ಪೂರ್ಣಗೊಂಡಿದ್ದು, ಇದೇ ಆಗಸ್ಟ್ 15ರಂದು ಉದ್ಘಾಟನೆಯಾಗಲಿದೆ. ಹೆಬ್ಬಾಳ ಪ್ಲೈ ಓವರ್‌ಗೆ ಹೊಸದಾಗಿ ಲೂಪ್ ರಾಂಪ್ ನಿರ್ಮಾಣ ಮಾಡಿರುವುದರಿಂದ ಪೀಕ್ ಅವರ್ ಮತ್ತು ಹಬ್ಬದ ಸಂದರ್ಭಗಳಲ್ಲಿ ಏರ್ ಪೋರ್ಟ್ ಗೆ ಹೋಗುವವರು ಮತ್ತು ಬರುವವರಿಗೆ ಬೇಗನೇ ತಮ್ಮ ಸ್ಥಳ ತಲುಪಲು ಅನುಕೂಲವಾಗುತ್ತೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Tue, 5 August 25

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ