AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯದಲ್ಲಿ ಹೂಡಿ ಮೇಲ್ಸೇತುವೆ: ಫ್ಲೈಓವರ್​ನಲ್ಲಿ ಘನ ವಾಹನ ಸಂಚಾರ ನಿರ್ಬಂಧ ಸಾಧ್ಯತೆ

ಬೆಂಗಳೂರಿನ ಪೀಣ್ಯ ಫ್ಲೈಓವರ್​ನಲ್ಲಿ ಅಂತೂ ಇಂತೂ ದುರಸ್ತಿ ಕಾಮಗಾರಿಯ ನಂತರ ಘನ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಇದೀಗ ಬೆಂಗಳೂರಿನ ಮತ್ತೊಂದು ಮೇಲ್ಸೇತುವೆ ಅಪಾಯದಲ್ಲಿದೆ. ಹೂಡಿ ರೈಲ್ವೇ ಫ್ಲೈಓವರ್​ನಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸುವ ಸಾಧ್ಯತೆ ಇದೆ.

ಅಪಾಯದಲ್ಲಿ ಹೂಡಿ ಮೇಲ್ಸೇತುವೆ: ಫ್ಲೈಓವರ್​ನಲ್ಲಿ ಘನ ವಾಹನ ಸಂಚಾರ ನಿರ್ಬಂಧ ಸಾಧ್ಯತೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Sep 30, 2024 | 11:08 AM

Share

ಬೆಂಗಳೂರು, ಸೆಪ್ಟೆಂಬರ್ 30: ಬೆಂಗಳೂರಿನ ಹೂಡಿಯಲ್ಲಿ ರೈಲ್ವೇ ಹಳಿಗೆ ಅಡ್ಡಲಾಗಿ ನಿರ್ಮಿಸಿರುವ ದಶಕದಷ್ಟು ಹಳೆಯದಾದ ಮೇಲ್ಸೇತುವೆಯನ್ನು ತುರ್ತಾಗಿ ದುರಸ್ತಿ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಫ್ಲೈಓವರ್​​ನ ನಾಲ್ಕು ಬೇರಿಂಗ್‌ಗಳು ವಿಫಲವಾಗಿದ್ದು, ವಾಹನ ಬಳಕೆದಾರರಿಗೆ ಅಪಾಯ ತಂದೊಡ್ಡಿದೆ ಎಂದು ವರದಿಯಾಗಿದೆ.

ಮೇಲ್ಸೇತುವೆಯನ್ನು ತಕ್ಷಣ ದುರಸ್ತಿ ಮಾಡುವಂತೆ ನೈಋತ್ಯ ರೈಲ್ವೆಗೆ (ಎಸ್‌ಡಬ್ಲ್ಯೂಆರ್) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮನವಿ ಮಾಡಿದೆ. ಅದರಂತೆ, ಇಂದು (ಸೋಮವಾರ) ಫ್ಲೈಓವರ್​​ನ ತಪಾಸಣೆ ನಡೆಯಲಿದೆ. ಬಳಿಕ ಘನ ವಾಹನಗಳನ್ನು ನಿಷೇಧಿಸುವ ಬಗ್ಗೆ ಸಂಚಾರ ಪೊಲೀಸರು ನಿರ್ಧರಿಸುವ ಸಾಧ್ಯತೆಯಿದೆ.

ಐಟಿಪಿಎಲ್ ರಸ್ತೆಯನ್ನು ಅಯ್ಯಪ್ಪನಗರ ಮತ್ತು ವಸತಿ ಕಾಲೋನಿಗಳಿಗೆ ಸಂಪರ್ಕಿಸುವ ಮೇಲ್ಸೇತುವೆಯ ಬೇರಿಂಗ್‌ಗಳ ವೈಫಲ್ಯಗಳ ಬಗ್ಗೆ ಸ್ಥಳೀಯ ನಿವಾಸಿಗಳು ಗಮನ ಸೆಳೆದಿದ್ದರು. ಅದರಂತೆ ಬಿಬಿಎಂಪಿ ಎಂಜಿನಿಯರ್‌ಗಳು ಮತ್ತು ರೈಲ್ವೆ ಅಧಿಕಾರಿಗಳು ಮೇಲ್ಸೇತುವೆಯನ್ನು ಪರಿಶೀಲಿಸಿ ತಾತ್ಕಾಲಿಕ ಪರಿಹಾರವನ್ನು ಒದಗಿಸಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಸಮಸ್ಯೆ ಗಂಭೀರವಾಗಿದೆ ಎಂದು ಮಹದೇವಪುರ ಟಾಸ್ಪ್​ಫೋರ್ಸ್​ ಸದಸ್ಯ ಕ್ಲೆಮೆಂಟ್ ಜಯಕುಮಾರ್ ತಿಳಿಸಿರುವುದಾಗಿಯೂ ವರದಿ ಉಲ್ಲೇಖಿಸಿದೆ. ನಾಲ್ಕು ಬೇರಿಂಗ್‌ಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಘನ ವಾಹನಗಳ ಸಂಚಾರ ಸ್ಥಗಿತಕ್ಕೆ ಶಿಫಾರಸು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಸಿಗರೇಟ್, ಬೀಡಿ ತುಂಡುಗಳಿಗೆ ಪ್ರತ್ಯೇಕ ಡಸ್ಟ್ ಬಿನ್ ಅಳವಡಿಕೆಗೆ ಮುಂದಾದ ಬಿಬಿಎಂಪಿ

ರೈಲ್ವೆ ಮೇಲ್ಸೇತುವೆಯನ್ನು 2014 ರಲ್ಲಿ ನೈಋತ್ಯ ರೈಲ್ವೆ ನಿರ್ಮಿಸಿತ್ತು. ದುರಸ್ತಿ ಕಾರ್ಯಕ್ಕೆ ಭಾಗಶಃ ಧನಸಹಾಯ ನೀಡುವುದಾಗಿ ನೈಋತ್ಯ ರೈಲ್ವೆ ಭರವಸೆ ನೀಡಿದೆ ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಉದಯ್ ಚೌಗುಲೆ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್