AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿನ ಅತಿ ಉದ್ದದ ರಸ್ತೆಗೆ ನಟ ವಿಷ್ಣುವರ್ಧನ್​ ಹೆಸರು! ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ

ಡಾ. ವಿಷ್ಣುವರ್ಧನ್ ಅವರ ಸಮಾಧಿ ನೆಲಸಮಗೊಳಿಸಿದ ಘಟನೆಯ ನಂತರ, ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರಿನ ಅತಿ ಉದ್ದದ ರಸ್ತೆಗೆ ಅವರ ಹೆಸರಿಡಲಾಗಿದೆ ಎಂದು ಹಂಚಿಕೊಂಡಿದ್ದಾರೆ. ಬನಶಂಕರಿಯಿಂದ ಕೆಂಗೇರಿಯವರೆಗಿನ 14.5 ಕಿ.ಮೀ ರಸ್ತೆಯ ಹೆಸರು ಡಾ. ವಿಷ್ಣುವರ್ಧನ್ ಎಂದು ಬಿಬಿಎಂಪಿ 2013ರಲ್ಲಿ ಹೆಸರು ಇಟ್ಟಿದೆ.

ಬೆಂಗಳೂರಿನಲ್ಲಿನ ಅತಿ ಉದ್ದದ ರಸ್ತೆಗೆ ನಟ ವಿಷ್ಣುವರ್ಧನ್​ ಹೆಸರು! ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ
ರಸ್ತೆಗೆ ವಿಷ್ಣುವರ್ಧನ್​ ಹೆಸರು
ವಿವೇಕ ಬಿರಾದಾರ
|

Updated on: Aug 16, 2025 | 3:48 PM

Share

ಬೆಂಗಳೂರು, ಆಗಸ್ಟ್​ 16: ಕೆಂಗೆರಿ ಬಳಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಾಹಸ ಸಿಂಹ ನಟ ಡಾ. ವಿಷ್ಣುವರ್ಧನ್ (Vishnuvardhan) ಅವರ ಸಮಾಧಿಯನ್ನು ನೆಲಸಮಗೊಳಿಸಲಾಗಿತ್ತು. ಕನ್ನಡ ಚಿತ್ರರಂಗದ ಮೇರು ನಟನ ಸಮಾಧಿ ನೆಲಸಮವಾಗಿರುವುದು ಚಿತ್ರರಂಗಕ್ಕೆ ಆಘಾತ ತಂದಿತ್ತು. ವಿಷ್ಣುವರ್ಧನ್ ಅಭಿಮಾನಿಗಳು ಸಹ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಕನ್ನಡ ಚಿತ್ರರಂಗದ ಅನೇಕ ನಟ, ನಟಿಯರು ಬೇಸರ ವ್ಯಪಡಿಸಿದ್ದರು. ಈ ವಿವಾದದ ನಡುವೆ ವಿಷ್ಣುವರ್ಧನ್​ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್​ವೊಂದು ಹಾಕಿಕೊಂಡಿದ್ದು, ಭಾರಿ ಚರ್ಚೆಯಾಗುತ್ತಿದೆ. ಅದು, ಬೆಂಗಳೂರಿನಲ್ಲಿನ (Bengaluru) ಅತಿ ಉದ್ದದ ರಸ್ತೆಗೆ ಡಾ. ವಿಷ್ಣುವರ್ಧನ್​ ಅವರ ಹೆಸರು ಇಡಲಾಗಿದೆ ಎಂದು ಫೋಸ್ಟ್​ ಮಾಡಿದ್ದಾರೆ.

“ಬೆಂಗಳೂರಿನ ಬನಶಂಕರಿಯಿಂದ ಕೆಂಗೇರಿ ತನಕ 14.5 ಕಿಮೀ ಉದ್ದದ ರಸ್ತೆಗೆ ವಿಷ್ಣುವರ್ಧನ್ ಹೆಸರಿದೆ. ಮಹಾತ್ಮಾ ಗಾಂಧಿ, ರಾಜ್ ಕುಮಾರ್, ವಾಟಾಳ್, ಕುವೆಂಪು, ಯಾರ ಹೆಸರಲ್ಲೂ ಬೆಂಗಳೂರಲ್ಲಿ ಇಷ್ಟುದ್ದ ರಸ್ತೆ ಇಲ್ಲ. ಪುನೀತ್ ರಾಜಕುಮಾರ್ ಅವರ ಹೆಸರಿನ ರಸ್ತೆ 12 ಕಿಮೀ ಇದೆ ಎಂದು ನವೀನ್​ ಸಾಗರ್​ ಎಂಬುವರು ಪೋಸ್ಟ್​​​ ಹಾಕಿದ್ದಾರೆ.

ಇದನ್ನೂ ನೋಡಿ: ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?

ಟ್ವಿಟರ್ ಪೋಸ್ಟ್​

ಇದು ನಿಜಾನಾ? ಇಲ್ಲಿದೆ ಅಸಲಿ ಸತ್ಯ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯು 2013ರಲ್ಲೇ ಬನಶಂಕರಿ ದೇವಸ್ಥಾನದಿಂದ ಕೆಂಗೇರಿವರೆಗಿನ 14 ಕಿ.ಮೀ ರಸ್ತೆಗೆ ಚಲನಚಿತ್ರ ನಟ ಡಾ. ವಿಷ್ಣುವರ್ಧನ್ ಅವರ ಹೆಸರಿಟ್ಟಿದೆ. ವಾಟಾಳ್ ನಾಗರಾಜ್ ರಸ್ತೆ 3 ಕಿ.ಮೀ ಮತ್ತು ಪದ್ಮಭೂಷಣ ಡಾ. ರಾಜ್‌ಕುಮಾರ್ ರಸ್ತೆ 6 ಕಿ.ಮೀ. ಇದೆ.

ಡಿಸೆಂಬರ್ 2009 ರಲ್ಲಿ ವಿಷ್ಣುವರ್ಧನ್ ನಿಧನರಾದರು. ಬಳ್ಳಾರಿ ಮಹಾನಗರ ಪಾಲಿಕೆ ಮೊದಲು ಅವರ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಘೋಷಿಸಿತು. ಬಿಬಿಎಂಪಿ ಕೂಡ ಅದೇ ಕ್ರಮವನ್ನು ಅನುಸರಿಸಿ, ರಸ್ತೆಗೆ ನಟನ ಹೆಸರು ಇಟ್ಟಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!