AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಪಿ ನಗರ – ಹೆಬ್ಬಾಳ ಮಧ್ಯೆ ಬೆಂಗಳೂರಿನ ಅತಿ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್: ಇಲ್ಲಿದೆ ವಿವರ

ಬೆಂಗಳೂರು ನಗರದ ಅತಿ ಉದ್ದದ ಡಬಲ್ ಡೆಕ್ಕರ್ ಮೇಲ್ಸೇತುವೆ ನಿರ್ಮಾಣವಾಗಲಿರುವ ಪ್ರದೇಶದ ಕೆಲವು ಸ್ಥಳಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಇತ್ತೀಚೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೆಪಿ ನಗರದಿಂದ ಹೆಬ್ಬಾಳ ವರೆಗೆ ಹೊರ ವರ್ತುಲ ರಸ್ತೆಯ ವ್ಯಾಪ್ತಿಯಲ್ಲಿ ಈ ಫ್ಲೈ ಓವರ್ ನಿರ್ಮಾಣವಾಗಲಿದ್ದು, ಆ ಕುರಿತ ವಿವರಗಳು ಇಲ್ಲಿವೆ.

ಜೆಪಿ ನಗರ - ಹೆಬ್ಬಾಳ ಮಧ್ಯೆ ಬೆಂಗಳೂರಿನ ಅತಿ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್: ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 08, 2025 | 8:41 AM

Share

ಬೆಂಗಳೂರು, ಫೆಬ್ರವರಿ 8: ಬೆಂಗಳೂರಿನಲ್ಲಿ ಜೆಪಿ ನಗರದಿಂದ ಹೆಬ್ಬಾಳ ವರೆಗೆ ಮತ್ತೊಂದು ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣವಾಗಲಿದ್ದು, ಇದು ಬೆಂಗಳೂರಿನ ಅತಿ ಉದ್ದದ ಡಬಲ್ ಡೆಕ್ಕರ್ ಮೇಲ್ಸೇತುವೆಯಾಗಿರಲಿದೆ. ಈ ಮೇಲ್ಸೇತುವೆ ಔಟರ್ ರಿಂಗ್ ರೋಡ್​ನಲ್ಲಿ ಹಾದುಹೋಗಲಿದ್ದು, 32.15 ಕಿ.ಮೀ ಉದ್ದವಿರಲಿದೆ. ರಾಗಿ ಗುಡ್ಡದಿಂದ ಸಿಲ್ಕ್ ಬೋರ್ಡ್ ವರೆಗೆ ಇರುವ ಡಬಲ್ ಡೆಕ್ಕರ್ ಫ್ಲೈ ಓವರ್ ಮಾದರಿಯಲ್ಲಿಯೇ ಇದು ಕೂಡ ಇರಲಿದ್ದು, ಮೆಟ್ರೋ ಲೈನ್ ಕೂಡ ಇರಲಿದೆ.

ಈ ಡಬಲ್ ಡೆಕ್ಕರ್ ಫ್ಲೈ ಓವರ್ ಯೋಜನೆಯ ಅಂದಾಜು ವೆಚ್ಚ 9800 ಕೋಟಿ ರೂಪಾಯಿ ಆಗಿದೆ. ಪ್ರಸ್ತಾವಿತ ಯೋಜನೆಗೆ ಸಂಬಂಧಿಸಿ ಪ್ರಗತಿಪರಿಶೀಲನೆಗೆ ಡಿಸಿಎಂ ಡಿಕೆ ಶಿವಕುಮಾರ್ ಇತ್ತೀಚೆಗೆ ಹೆಬ್ಬಾಳ, ಬಿಇಎಲ್ ರಸ್ತೆ, ಸುಮನಹಳ್ಳಿ ಮತ್ತು ಗೊರಗುಂಟೆಪಾಳ್ಯ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಸಂಚಾರದಟ್ಟಣೆ ಕಡಿಮೆ ಮಾಡುವುದು ಮತ್ತು ಸುಗಮ ಸಂಚಾರಕ್ಕಾಗಿ ಇಂತಹ ಡಬಲ್ ಡೆಕ್ಕರ್ ಫ್ಲೈ ಓವರ್ ಗಳನ್ನು ನಿರ್ಮಿಸಬೇಕಾದ ಅಗತ್ಯಗಳ ಬಗ್ಗೆ ಅವರು ಒತ್ತಿ ಹೇಳಿದ್ದಾರೆ.

40 ಕಿಲೋಮೀಟರ್‌ಗಳಿಗಿಂತ ಹೆಚ್ಚು ವಿಸ್ತಾರವಾಗಿರುವ ನಮ್ಮ ಮೆಟ್ರೋ ಹಂತ 3 ರ ಭಾಗವಾಗಿರುವ ಈ ಹೊಸ ಕಾರಿಡಾರ್ ಡಬಲ್ ಡೆಕ್ಕರ್ ಫ್ಲೈಓವರ್ ಒಳಗೊಂಡಿರುತ್ತದೆ. ಯೋಜನೆಯ ಕಾರ್ಯಸಾಧ್ಯತಾ ಅಧ್ಯಯನವು ಈಗಾಗಲೇ ಶೇಕಡಾ 90 ರಷ್ಟು ಪೂರ್ಣಗೊಂಡಿದೆ. ಆದರೂ ಎತ್ತರದ ರಸ್ತೆಗಳು ಮತ್ತು ಮೆಟ್ರೋ ಮಾರ್ಗವನ್ನು ಜತೆಯಾಗಿ ನಿರ್ಮಾಣ ಮಾಡಬೇಕಾದ ಅಗತ್ಯವಿರುವುದರಿಂದ ಕೆಲವು ಹೊಂದಾಣಿಕೆಗಳನ್ನು ಮಾಡಬೇಕಿದೆ. ಈ ಕಾರಣಕ್ಕೆ ತುಸು ವಿಳಂಬವಾಗುತ್ತಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರವು ಕಳೆದ ವರ್ಷದ ಆಗಸ್ಟ್‌ನಲ್ಲಿ ಯೋಜನೆಗೆ ಅನುಮೋದನೆ ನೀಡಿತ್ತು.

ಇದನ್ನೂ ಓದಿ: ನಮ್ಮ ಮೆಟ್ರೋ ಆರೆಂಜ್ ಲೈನ್: ಉದ್ದೇಶಿತ ಪೀಣ್ಯ ನಿಲ್ದಾಣ ಗೊರಗುಂಟೆಪಾಳ್ಯಕ್ಕೆ ಸ್ಥಳಾಂತರಕ್ಕೆ ಬಿಎಂಆರ್​ಸಿಎಲ್ ಚಿಂತನೆ

ನಗರದ ದೀರ್ಘಕಾಲೀನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆಯನ್ನು ರೂಪಿಸಲಾಗಿದೆ. ವೆಚ್ಚವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ನಮ್ಮ ಮೆಟ್ರೋ ನಡುವೆ ಸಮಾನವಾಗಿ ಹಂಚಿಕೊಳ್ಳಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ