AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ: ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ

ಬೆಂಗಳೂರಿನಲ್ಲಿ 73 ಕಿ.ಮೀ ಅತಿ ಉದ್ದದ ಮೆಟ್ರೋ ಮಾರ್ಗ ನಿರ್ಮಾಣಕ್ಕೆ BMRCL ಸಿದ್ಧತೆ ನಡೆಸಿದೆ. ಐಟಿಬಿಟಿ ಮತ್ತು ಕೈಗಾರಿಕಾ ಪ್ರದೇಶಗಳನ್ನು ಸಂಪರ್ಕಿಸುವ ಈ ಮಹತ್ವದ ಯೋಜನೆಯೂ ನಗರದ ಟ್ರಾಫಿಕ್ ಸಮಸ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಇದು ರಾಜಧಾನಿಯ ಅತಿ ದೊಡ್ಡ ಮೆಟ್ರೋ ಜಾಲವಾಗಲಿದೆ.

ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ: ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ
ಬಿಎಂಆರ್ಸಿಎಲ್‌Image Credit source: www.bmrc.co.in
Kiran Surya
| Edited By: |

Updated on:May 08, 2026 | 10:44 PM

Share

ಬೆಂಗಳೂರು, ಮೇ 08: ನಗರದಲ್ಲಿ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಮುಂದಾಗಿರುವ ಬಿಎಂಆರ್​ಸಿಎಲ್ (BMRCL), ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ‘ಪಿಂಕ್ ಲೈನ್’ ಮೆಟ್ರೋ (Pink Line Metro) ಮಾರ್ಗವನ್ನು ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ. ಈ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜೂನ್ ತಿಂಗಳಿನಲ್ಲಿ ಆರು ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಯೋಜಿಸಲಾಗಿದೆ. ಇದರ ಬೆನ್ನಲ್ಲೇ, ಈ ಮಾರ್ಗವನ್ನು ಮತ್ತಷ್ಟು ವಿಸ್ತರಿಸುವ ಮೂಲಕ ನಗರದ ಅತಿ ಉದ್ದದ ಮೆಟ್ರೋ ಕಾರಿಡಾರ್ ನಿರ್ಮಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲೇ ಅತಿ ಉದ್ದದ ಮೆಟ್ರೋ ಮಾರ್ಗ ಎಂಬ ಹೆಗ್ಗಳಿಕೆ
  • ಐಟಿಬಿಟಿ ಮತ್ತು ಕೈಗಾರಿಕಾ ಪ್ರದೇಶಗಳಿಗೆ ಸುಗಮ ಸಂಪರ್ಕ
  • ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಬಿಎಂಆರ್​ಸಿಎಲ್​ ಮಾಸ್ಟರ್ ಪ್ಲಾನ್

ಕಾಳೇನ ಅಗ್ರಹಾರ ಟು ನಾಗವಾರ ಪಿಂಕ್ ಲೈನ್ ಮೆಟ್ರೋ ಮಾರ್ಗ ಓಪನ್ ಮಾಡಲು ಕೇವಲ ಒಂದು ತಿಂಗಳು ಮಾತ್ರ ಬಾಕಿಯಿದೆ. ಈ ಹಿನ್ನೆಲೆ ಐಟಿಬಿಟಿ ಪಾರ್ಕ್​ಗಳು, ಇಂಡಸ್ಟ್ರಿಯಲ್ ಟೌನ್​ಗಳನ್ನು ಸಂಪರ್ಕಿಸುವಂತೆ ಮೆಟ್ರೋ ಮಾರ್ಗವನ್ನು ನಿರ್ಮಾಣ ಮಾಡಲು ಬಿಎಂಆರ್​ಸಿಎಲ್​​ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಪಿಂಕ್‌ ಲೈನ್ ಮೆಟ್ರೋ ಮಾರ್ಗದಲ್ಲಿ 100ರಷ್ಟು ಕಾಮಗಾರಿ ಮುಗಿದಿದೆ. ಆರು ಎಲಿವೇಟೆಡ್ ಮೆಟ್ರೋ ಸ್ಟೇಷನ್​​ಗಳನ್ನು ಜೂನ್​ನಲ್ಲಿ ಓಪನ್ ಮಾಡಲು ಪ್ಲಾನ್ ಕೂಡ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ: ಮೇ 10ರಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಇದೀಗ ಈ ಮಾರ್ಗವನ್ನು ಕಾಡುಗೋಡಿ ಟ್ರೀ ಪಾರ್ಕ್​​ವರೆಗೆ ವಿಸ್ತರಣೆ ಮಾಡಲು ಬಿಎಂಆರ್​​ಸಿಎಲ್​​ ಮುಂದಾಗಿದೆ. ಈ ಮಾರ್ಗ ಓಪನ್ ಆದರೆ ಬೆಂಗಳೂರಲ್ಲೇ ಅತಿ ಹೆಚ್ಚು ಉದ್ದದ ಮೆಟ್ರೋ ಮಾರ್ಗವಾಗಲಿದೆ. ಈ ಮಾರ್ಗವು ಕಾಳೇನ ಅಗ್ರಹಾರ (ಗೊಟ್ಟಿಗೆರೆ) ಜಿಗಣಿ, ಆನೇಕಲ್, ಅತ್ತಿಬೆಲೆ, ಸರ್ಜಾಪುರ, ವರ್ತೂರು, ಕಾಡುಗೋಡಿ ಟ್ರೀ ಪಾರ್ಕ್, ಚನ್ನಸಂದ್ರ ಹೋಫ್ ಫಾರ್ಮ್ (73 ಕಿ.ಮೀ) ಮಾರ್ಗದಲ್ಲಿ ಸಂಚಾರ ಮಾಡಲಿದೆ. ಈ ಮೆಟ್ರೋ ಮಾರ್ಗಕ್ಕಾಗಿ ಫಿಸಿಬಲಿಟಿ ಟೆಸ್ಟ್ ಮಾಡಿದ್ದು, ಅದರ ವರದಿ ಇದೀಗ ಬಿಎಂಆರ್​​ಸಿಎಲ್​ ಕೈಸೇರಿದೆ. ಆ ವರದಿಯನ್ನು ರಾಜ್ಯ ಸರ್ಕಾರಕ್ಕೂ ಸಲ್ಲಿಸಲಿದೆ.

ಇನ್ನು ಈ ಮಾರ್ಗದಲ್ಲಿ ಅಂದಾಜು 35 ಮೆಟ್ರೋ ಸ್ಟೇಷನ್​ಗಳನ್ನು ನಿರ್ಮಾಣ ಮಾಡಲು ಪ್ಲಾನ್ ಮಾಡಲಾಗುತ್ತಿದೆ. ಇತ್ತ ಅತ್ತಿಬೆಲೆ ಬಳಿ ಕೆಹೆಚ್​​ಬಿ 90 ಸಾವಿರ ಆಸನಗಳ ಸಾಮರ್ಥ್ಯದ ಕ್ರೀಡಾಂಗಣವನ್ನು ನಿರ್ಮಾಣ ಮಾಡಲು ಮುಂದಾಗಿದ್ದು, ಪಿಂಕ್‌ ಲೈನ್ ವಿಸ್ತರಿಸುವುದರಿಂದ ಪ್ರೇಕ್ಷಕರು ಬಂದು ಹೋಗಲು ಸಹಾಯ ಆಗಲಿವಾಗಲಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮೆಟ್ರೋ ಪ್ರಯಾಣಿಕರು ಈ ಭಾಗದಲ್ಲಿ ಮೆಟ್ರೋ ಓಪನ್ ಆದರೆ ರಾಜಧಾನಿಯಲ್ಲಿ ತುಂಬಾ ದೊಡ್ಡಮಟ್ಟದಲ್ಲಿ ಟ್ರಾಫಿಕ್ ಕಡಿಮೆ ಆಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಆರಂಭಕ್ಕೂ ಮುನ್ನವೇ ಸಂಘರ್ಷ: ಬೀಳಕಹಳ್ಳಿ ಹೆಸರಿಗಾಗಿ ಸ್ಥಳೀಯರ ಪಟ್ಟು

ಒಟ್ಟಾರೆಯಾಗಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಮಹತ್ವಾಕಾಂಕ್ಷಿ ಯೋಜನೆಗೆ ಹಸಿರು ನಿಶಾನೆ ತೋರಿದರೆ, ರಾಜಧಾನಿಯ ಜನರಿಗೆ ಸಂಚಾರದ ಸಂಕಷ್ಟದಿಂದ ದೊಡ್ಡ ಮಟ್ಟದ ವಿನಾಯಿತಿ ಸಿಗುವುದರಲ್ಲಿ ಯಾವುದೇ ಸಂಶಯವಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:38 pm, Fri, 8 May 26

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ