AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ: ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ

ಬೆಂಗಳೂರಿನಲ್ಲಿ 73 ಕಿ.ಮೀ ಅತಿ ಉದ್ದದ ಮೆಟ್ರೋ ಮಾರ್ಗ ನಿರ್ಮಾಣಕ್ಕೆ BMRCL ಸಿದ್ಧತೆ ನಡೆಸಿದೆ. ಐಟಿಬಿಟಿ ಮತ್ತು ಕೈಗಾರಿಕಾ ಪ್ರದೇಶಗಳನ್ನು ಸಂಪರ್ಕಿಸುವ ಈ ಮಹತ್ವದ ಯೋಜನೆಯೂ ನಗರದ ಟ್ರಾಫಿಕ್ ಸಮಸ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಇದು ರಾಜಧಾನಿಯ ಅತಿ ದೊಡ್ಡ ಮೆಟ್ರೋ ಜಾಲವಾಗಲಿದೆ.

ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ: ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ
ಬಿಎಂಆರ್ಸಿಎಲ್‌Image Credit source: www.bmrc.co.in
ಕಿರಣ್​ ಸೂರ್ಯ
| Edited By: |

Updated on:May 08, 2026 | 10:44 PM

Share

ಬೆಂಗಳೂರು, ಮೇ 08: ನಗರದಲ್ಲಿ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಮುಂದಾಗಿರುವ ಬಿಎಂಆರ್​ಸಿಎಲ್ (BMRCL), ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ‘ಪಿಂಕ್ ಲೈನ್’ ಮೆಟ್ರೋ (Pink Line Metro) ಮಾರ್ಗವನ್ನು ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ. ಈ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜೂನ್ ತಿಂಗಳಿನಲ್ಲಿ ಆರು ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಯೋಜಿಸಲಾಗಿದೆ. ಇದರ ಬೆನ್ನಲ್ಲೇ, ಈ ಮಾರ್ಗವನ್ನು ಮತ್ತಷ್ಟು ವಿಸ್ತರಿಸುವ ಮೂಲಕ ನಗರದ ಅತಿ ಉದ್ದದ ಮೆಟ್ರೋ ಕಾರಿಡಾರ್ ನಿರ್ಮಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲೇ ಅತಿ ಉದ್ದದ ಮೆಟ್ರೋ ಮಾರ್ಗ ಎಂಬ ಹೆಗ್ಗಳಿಕೆ
  • ಐಟಿಬಿಟಿ ಮತ್ತು ಕೈಗಾರಿಕಾ ಪ್ರದೇಶಗಳಿಗೆ ಸುಗಮ ಸಂಪರ್ಕ
  • ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಬಿಎಂಆರ್​ಸಿಎಲ್​ ಮಾಸ್ಟರ್ ಪ್ಲಾನ್

ಕಾಳೇನ ಅಗ್ರಹಾರ ಟು ನಾಗವಾರ ಪಿಂಕ್ ಲೈನ್ ಮೆಟ್ರೋ ಮಾರ್ಗ ಓಪನ್ ಮಾಡಲು ಕೇವಲ ಒಂದು ತಿಂಗಳು ಮಾತ್ರ ಬಾಕಿಯಿದೆ. ಈ ಹಿನ್ನೆಲೆ ಐಟಿಬಿಟಿ ಪಾರ್ಕ್​ಗಳು, ಇಂಡಸ್ಟ್ರಿಯಲ್ ಟೌನ್​ಗಳನ್ನು ಸಂಪರ್ಕಿಸುವಂತೆ ಮೆಟ್ರೋ ಮಾರ್ಗವನ್ನು ನಿರ್ಮಾಣ ಮಾಡಲು ಬಿಎಂಆರ್​ಸಿಎಲ್​​ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಪಿಂಕ್‌ ಲೈನ್ ಮೆಟ್ರೋ ಮಾರ್ಗದಲ್ಲಿ 100ರಷ್ಟು ಕಾಮಗಾರಿ ಮುಗಿದಿದೆ. ಆರು ಎಲಿವೇಟೆಡ್ ಮೆಟ್ರೋ ಸ್ಟೇಷನ್​​ಗಳನ್ನು ಜೂನ್​ನಲ್ಲಿ ಓಪನ್ ಮಾಡಲು ಪ್ಲಾನ್ ಕೂಡ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ: ಮೇ 10ರಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಇದೀಗ ಈ ಮಾರ್ಗವನ್ನು ಕಾಡುಗೋಡಿ ಟ್ರೀ ಪಾರ್ಕ್​​ವರೆಗೆ ವಿಸ್ತರಣೆ ಮಾಡಲು ಬಿಎಂಆರ್​​ಸಿಎಲ್​​ ಮುಂದಾಗಿದೆ. ಈ ಮಾರ್ಗ ಓಪನ್ ಆದರೆ ಬೆಂಗಳೂರಲ್ಲೇ ಅತಿ ಹೆಚ್ಚು ಉದ್ದದ ಮೆಟ್ರೋ ಮಾರ್ಗವಾಗಲಿದೆ. ಈ ಮಾರ್ಗವು ಕಾಳೇನ ಅಗ್ರಹಾರ (ಗೊಟ್ಟಿಗೆರೆ) ಜಿಗಣಿ, ಆನೇಕಲ್, ಅತ್ತಿಬೆಲೆ, ಸರ್ಜಾಪುರ, ವರ್ತೂರು, ಕಾಡುಗೋಡಿ ಟ್ರೀ ಪಾರ್ಕ್, ಚನ್ನಸಂದ್ರ ಹೋಫ್ ಫಾರ್ಮ್ (73 ಕಿ.ಮೀ) ಮಾರ್ಗದಲ್ಲಿ ಸಂಚಾರ ಮಾಡಲಿದೆ. ಈ ಮೆಟ್ರೋ ಮಾರ್ಗಕ್ಕಾಗಿ ಫಿಸಿಬಲಿಟಿ ಟೆಸ್ಟ್ ಮಾಡಿದ್ದು, ಅದರ ವರದಿ ಇದೀಗ ಬಿಎಂಆರ್​​ಸಿಎಲ್​ ಕೈಸೇರಿದೆ. ಆ ವರದಿಯನ್ನು ರಾಜ್ಯ ಸರ್ಕಾರಕ್ಕೂ ಸಲ್ಲಿಸಲಿದೆ.

ಇನ್ನು ಈ ಮಾರ್ಗದಲ್ಲಿ ಅಂದಾಜು 35 ಮೆಟ್ರೋ ಸ್ಟೇಷನ್​ಗಳನ್ನು ನಿರ್ಮಾಣ ಮಾಡಲು ಪ್ಲಾನ್ ಮಾಡಲಾಗುತ್ತಿದೆ. ಇತ್ತ ಅತ್ತಿಬೆಲೆ ಬಳಿ ಕೆಹೆಚ್​​ಬಿ 90 ಸಾವಿರ ಆಸನಗಳ ಸಾಮರ್ಥ್ಯದ ಕ್ರೀಡಾಂಗಣವನ್ನು ನಿರ್ಮಾಣ ಮಾಡಲು ಮುಂದಾಗಿದ್ದು, ಪಿಂಕ್‌ ಲೈನ್ ವಿಸ್ತರಿಸುವುದರಿಂದ ಪ್ರೇಕ್ಷಕರು ಬಂದು ಹೋಗಲು ಸಹಾಯ ಆಗಲಿವಾಗಲಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮೆಟ್ರೋ ಪ್ರಯಾಣಿಕರು ಈ ಭಾಗದಲ್ಲಿ ಮೆಟ್ರೋ ಓಪನ್ ಆದರೆ ರಾಜಧಾನಿಯಲ್ಲಿ ತುಂಬಾ ದೊಡ್ಡಮಟ್ಟದಲ್ಲಿ ಟ್ರಾಫಿಕ್ ಕಡಿಮೆ ಆಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಆರಂಭಕ್ಕೂ ಮುನ್ನವೇ ಸಂಘರ್ಷ: ಬೀಳಕಹಳ್ಳಿ ಹೆಸರಿಗಾಗಿ ಸ್ಥಳೀಯರ ಪಟ್ಟು

ಒಟ್ಟಾರೆಯಾಗಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಮಹತ್ವಾಕಾಂಕ್ಷಿ ಯೋಜನೆಗೆ ಹಸಿರು ನಿಶಾನೆ ತೋರಿದರೆ, ರಾಜಧಾನಿಯ ಜನರಿಗೆ ಸಂಚಾರದ ಸಂಕಷ್ಟದಿಂದ ದೊಡ್ಡ ಮಟ್ಟದ ವಿನಾಯಿತಿ ಸಿಗುವುದರಲ್ಲಿ ಯಾವುದೇ ಸಂಶಯವಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:38 pm, Fri, 8 May 26

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ