ಬೆಂಗಳೂರು: ಫುಟ್​ಪಾತ್​ ಮೇಲೆ ವಾಹನ ಚಲಾಯಿಸಿದ್ರೆ ಲೈಸೆನ್ಸ್​ ರದ್ದು!

ಬೆಂಗಳೂರು ಸಂಚಾರ ಪೊಲೀಸರು ಪಾದಚಾರಿ ಮಾರ್ಗಗಳಲ್ಲಿ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ. ಮೊದಲ ಅಪರಾಧಕ್ಕೆ ದಂಡ ವಿಧಿಸಲಾಗುವುದು, ಪುನರಾವರ್ತಿತ ಅಪರಾಧಕ್ಕೆ ಚಾಲನಾ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಪಾದಚಾರಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಪಾದಚಾರಿ ಮಾರ್ಗಗಳಲ್ಲಿ ವಾಹನ ಚಾಲನೆ ಮಾಡುವುದು ಅಪಾಯಕಾರಿ ಮತ್ತು ಕಾನೂನುಬಾಹಿರ ಎಂಬುದನ್ನು ಜನರು ಅರಿತುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಬೆಂಗಳೂರು: ಫುಟ್​ಪಾತ್​ ಮೇಲೆ ವಾಹನ ಚಲಾಯಿಸಿದ್ರೆ ಲೈಸೆನ್ಸ್​ ರದ್ದು!
ಸಾಂದರ್ಭಿಕ ಚಿತ್ರ
Follow us
Jagadisha B
| Updated By: ವಿವೇಕ ಬಿರಾದಾರ

Updated on:Feb 03, 2025 | 10:38 AM

ಬೆಂಗಳೂರು, ಫೆಬ್ರವರಿ 03: ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ಟ್ರಾಫಿಕ್​ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಹಾಗೇ, ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೂ ಕೂಡ ಕೆಲವರು ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ತಿರುಗಾಡುತ್ತಿದ್ದಾರೆ. ಇಂತವರ ವಿರುದ್ಧ ಸಂಚಾರಿ ಪೊಲೀಸರು ಕ್ರಮಕೈಗೊಳ್ಳುತ್ತಿದ್ದಾರೆ. ಟ್ರಾಫಿಕ್ ಜಾಮ್​ ಅಂತ ಫುಟ್​​ಪಾತ್​ ಮೇಲೆ ಗಾಡಿ ಓಡಿಸುವವರ ವಿರುದ್ಧ ನೂತನ ಅಸ್ತ್ರ ಪ್ರಯೋಗಿಸಲು ಬೆಂಗಳೂರು ಸಂಚಾರಿ ಪೊಲೀಸರು ನಿರ್ಧರಿಸಿದ್ದಾರೆ.

ದಂಡಾಸ್ತ್ರಕ್ಕೂ ಜಗ್ಗದ ವಾಹನ ಸವಾರರ ಡ್ರೈವಿಂಗ್​ ಲೈಸೆನ್ಸ್​ (Driving licence) ಅಮಾನತು ಮಾಡಲು ತೀರ್ಮಾನಿಸಿದ್ದಾರೆ. ಪಾದಚಾರಿಗಳ ಸುರಕ್ಷತೆ ದೃಷ್ಠಿಯಿಂದ ಸಂಚಾರಿ ಪೊಲೀಸರು ಈ ನಿಯಮ ಜಾರಿಗೆ ತಂದಿದ್ದಾರೆ. ಈ ಹಿಂದೆ ಫುಟಪಾತ್​​ ಮೇಲೆ ಗಾಡಿ ಓಡಿಸಿದರೆ ಸಂಚಾರಿ ಪೊಲೀಸರು ದಂಡ ಹಾಕುತ್ತಿದ್ದರು. ದಂಡ ವಿಧಿಸಿದರೂ ವಾಹನ ಸವಾರರು ಮಾತ್ರ, ಜಗ್ಗದೆ ಮತ್ತೆ ತಮ್ಮ ಫುಟ್​ಪಾತ್​ ಮೇಲೆ ವಾಹನ ಚಲಾಯಿಸುತ್ತಿದ್ದಾರೆ.

ಇದನ್ನೂ ಓದಿ: BTP AsTraM App: ಬೆಂಗಳೂರು ಟ್ರಾಫಿಕ್​ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಅಸ್ತ್ರಂ ಆ್ಯಪ್ ಬಿಡುಗಡೆ, ಇಲ್ಲಿದೆ ವಿವರ

ಹೀಗಾಗಿ, ಬೆಂಗಳೂರು ಸಂಚಾರಿ ಪೊಲೀಸ್​ ಹಿರಿಯ ಅಧಿಕಾರಿಗಳು ಸಭೆ ನಡೆಸಿ, ಡ್ರೈವಿಂಗ್​ ಲೈಸೆನ್ಸ್​​ ಅಮಾನತು ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಮೊದಲ ಬಾರಿಗೆ ದಂಡ ಹಾಕಲಾಗುತ್ತದೆ. ಮತ್ತೆ ಮತ್ತೆ ಸಿಕ್ಕಿಬಿದ್ದರೇ, ಆತನ ಲೈಸೆನ್ಸ್​ ಅಮಾನತು ಮಾಡುವಂತೆ ಸಂಚಾರಿ ಪೊಲೀಸರು ಶಿಪಾರಸ್ಸು ಮಾಡುತ್ತಾರೆ. ಹೀಗಾಗಿ, ಇನ್ಮುಂದೆ ಫುಟ್​ಪಾತ್​​ ಮೇಲೆ ಗಾಡಿ ಓಡಿಸುವ ಮುನ್ನ ಯೋಚಿಸಿ ಎಂದು ಸಂಚಾರಿ ಪೊಲೀಸರಿ ಎಚ್ಚರಿಕೆ ನೀಡಿದ್ದಾರೆ.

ಟ್ವಿಟರ್​ ಪೋಸ್ಟ್​

80 ಲಕ್ಷ ರೂ. ದಂಡ ಸಂಗ್ರಹ

ಡ್ರಂಕ್ & ಡ್ರೈವ್ ವಿರುದ್ಧ ಸಂಚಾರಿ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಜನವರಿ 27ರಿಂದ ಫೆ.2ರವರೆಗೆ ತಪಾಸಣೆಯಲ್ಲಿ 80 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ಬೆಂಗಳೂರಿನ 50 ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ನಡೆದಿದೆ. ಕಳೆದ 1 ವಾರದಲ್ಲಿ 800 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್​​ ಮಾಹಿತಿ ನೀಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:35 am, Mon, 3 February 25

ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ