AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ನೇಪಾಳಿ ದಂಪತಿಗೆ ಬಲೆ ಬೀಸಿದ ಪೊಲೀಸರು!

ಬೆಂಗಳೂರಿನಲ್ಲಿ ಈ ಹಿಂದೆ ನಡೆದಿದ್ದ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ ಭಾರಿ ಸಂಚಲನ ಮೂಡಿಸಿದೆ. ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿ ದಂಪತಿ ನಗರದಲ್ಲಿ ಬಂಗಾರ ದೋಚಿದ್ದರು. ಇದೀಗ ಆರೋಪಿಗಳು ನೇಪಾಳಿ ದಂಪತಿ ಎಂದು ಮಾರತ್ ಹಳ್ಳಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ದೇಶದ ಹಲವೆಡೆ ಇದೇ ರೀತಿಯ ಕೃತ್ಯ ಎಸಗಿರುವ ಈ ಜೋಡಿಗಾಗಿ ವಿಶೇಷ ತಂಡಗಳು ಮುಂಬೈ, ಕೋಲ್ಕತ್ತಾ ಹಾಗೂ ನೇಪಾಳದಲ್ಲಿ ಶೋಧ ಕಾರ್ಯ ನಡೆಸುತ್ತಿವೆ. ಕಳ್ಳರನ್ನು ಹಿಡಿಯಲು ಬಲೆ ಬೀಸಲಾಗಿದೆ.

ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ನೇಪಾಳಿ ದಂಪತಿಗೆ ಬಲೆ ಬೀಸಿದ ಪೊಲೀಸರು!
ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ನೇಪಾಳಿ ದಂಪತಿ!
ಭಾವನಾ ಹೆಗಡೆ
|

Updated on:Feb 02, 2026 | 10:43 AM

Share

ಬೆಂಗಳೂರು, ಫೆಬ್ರುವರಿ 02: ಬೆಂಗಳೂರಿನಲ್ಲಿ (Bengaluru) ಇತ್ತೀಚಿಗೆ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ನಡೆದಿದ್ದು,  ಮಾರತ್ ಹಳ್ಳಿ ಪೊಲೀಸರು ತಡವಾದರೂ ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿ ಸುಮಾರು ಬಂಗಾರ ದೋಚುತ್ತಿದ್ದ ಆರೋಪಿಗಳು ನೇಪಾಳಿ ದಂಪತಿ ಎಂಬುದು ತನಿಖೆಯಿಂದ ದೃಢಪಟ್ಟಿದ್ದು, ಕದೀಮರನ್ನು ಹಿಡಿಯಲು ಬಲೆ ಬೀಸಿದ್ದಾರೆ.

ತನಿಖೆ ವೇಳೆ ದಂಪತಿಯ ಸತ್ಯ ಬಯಲು

ಬೆಂಗಳೂರಿನಲ್ಲಿ ಹಿಂದೆ ನಡೆದಿದ್ದ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನದ ಜಾಡು ಹಿಡಿದು ಹೊರಟ ಪೊಲೀಸರಿಗೆ ಕದೀಮ ದಂಪತಿಯ ಕುರಿತ ಹಲವು ವಿಷಯಗಳು ತಿಳಿದು ಬಂದಿವೆ. ತನಿಖೆ ನಡೆಸಿದ ಪೊಲೀಸರು, ಆರೋಪಿಗಳು ದಿನೇಶ್ ಹಾಗೂ ಕಮಲ ಅಥವಾ ಸಲೀನಾ ಎಂಬ ನಕಲಿ ಹೆಸರುಗಳನ್ನು ಬಳಸಿಕೊಂಡು ಮನೆಕೆಲಸಕ್ಕೆ ಸೇರಿ ಕಳ್ಳತನ ನಡೆಸುತ್ತಿದ್ದರೆಂದು ತಿಳಿಸಿದ್ದಾರೆ. ಈ ದಂಪತಿ ದೇಶದ ಅನೇಕ ಭಾಗಗಳಲ್ಲಿ ಇದೇ ರೀತಿಯ ಕೃತ್ಯಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಈ ಪ್ರಕರಣದ ಬೆನ್ನತ್ತಿರುವ ಮಾರತ್ ಹಳ್ಳಿ ಪೊಲೀಸರು ಸುಮಾರು ಏಳು ವಿಶೇಷ ತಂಡಗಳನ್ನು ರಚಿಸಿ ಮುಂಬೈ, ಕೊಲ್ಕತ್ತಾ ಹಾಗೂ ನೇಪಾಳ ಸೇರಿ ಹಲವು ಕಡೆಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆರೋಪಿಗಳು ನೇಪಾಳಕ್ಕೆ ಪರಾರಿಯಾಗಿದ್ದರೆ ಅವರನ್ನು ಪತ್ತೆಹಚ್ಚುವುದು ಕಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೊತೆಗೆ ಸ್ಥಳೀಯವಾಗಿ ಯಾರಾದರೂ ಆರೋಪಿಗಳಿಗೆ ಸಹಾಯ ಮಾಡಿದ್ದಾರೆಯೇ ಎಂಬುದರ ಕುರಿತಾದ ತನಿಖೆಯೂ ಮುಂದುವರಿದಿದೆ ಎಂದು ತಿಳಿಸಲಾಗಿದೆ.

ಈ ಹಿಂದೆಯೂ ವಿವಿಧೆಡೆ ಕಳ್ಳತನ ಮಾಡಿದ್ದ ಜೋಡಿ

ಪುಣೆಯ ಭಾವ್ಧಾನ್ ಪ್ರದೇಶದ ವಿಂಡ್ಮಿಲ್ ಸೊಸೈಟಿಯ ರತ್ನಾದೀಪ್ ರಂಗನಾಥ್ ರಾವ್ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿ ಸುಮಾರು ಆರು ತಿಂಗಳ ಬಳಿಕ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಾಕರ್ ಒಡೆದು ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗಿದ್ದರು.  2025ರ ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದಲ್ಲಿ ನಿವೃತ್ತ ಸರ್ಕಾರಿ ಅಧಿಕಾರಿಯ ಮನೆಯಲ್ಲಿ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದರೆಂದು ಕಾರ್ಯಾಚರಣೆ ವೇಳೆ ತಿಳಿದುಬಂದಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:50 am, Mon, 2 February 26

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ