AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಬಹಳುತ್ತಿರುವ ಬೆಂಗಳೂರಿನ ಸ್ಲಂ ನಿವಾಸಿಗಳು: ಸಮೀಕ್ಷೆ

ಬೆಂಗಳೂರಿನಲ್ಲಿ ಗಮನಾರ್ಹ ಸಂಖ್ಯೆಯ ಕೊಳಗೇರಿ ನಿವಾಸಿಗಳು ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂಬ ಆಘಾತಕಾರಿ ಸಂಗತಿ ಸಮೀಕ್ಷೆಯೊಂದರ ಮೂಲಕ ಬಹಿರಂಗಗೊಂಡಿದೆ.

ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಬಹಳುತ್ತಿರುವ ಬೆಂಗಳೂರಿನ ಸ್ಲಂ ನಿವಾಸಿಗಳು: ಸಮೀಕ್ಷೆ
ಸಾಂದರ್ಭಿಕ ಚಿತ್ರImage Credit source: Getty Images
TV9 Web
| Edited By: |

Updated on:Dec 16, 2022 | 9:17 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಗಮನಾರ್ಹ ಸಂಖ್ಯೆಯ ಕೊಳಗೇರಿ ನಿವಾಸಿಗಳು (Slum dwellers) ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ (NCD) ಬಳಲುತ್ತಿದ್ದಾರೆ ಎಂಬ ಆಘಾತಕಾರಿ ಅಂಶ ಎನ್‌ಜಿಒ ಲೇಬರ್ನೆಟ್ ನಡೆಸಿದ ಸಮೀಕ್ಷೆಯಿಂದ ಬಹಿರಂಗಗೊಂಡಿದೆ. ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳ ನಡುವೆ ಸಮೀಕ್ಷೆ ನಡೆದಿದ್ದು, ಒಟ್ಟು 36,034 ಕೊಳಗೇರಿ ನಿವಾಸಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಶೇ 6.25 ರಷ್ಟು ಮಂದಿ ಅಧಿಕ ಬಿಪಿ ಮತ್ತು ಶೇಕಡಾ 4.7 ರಷ್ಟು ಮಂದಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವುದು ತಿಳಿದುಬಂದಿದೆ.

ಮಾದರಿಯ 6,748 ಜನರಲ್ಲಿ ಮಧುಮೇಹ ತಪಾಸಣೆ ಮಾಡಲಾಗಿದ್ದು, ಹೆಚ್ಚು ಅಪಾಯಕಾರಿ ಅಂಶಗಳನ್ನು ಹೊಂದಿದ್ದಾರೆ. ಶೇ 7.88 ರಷ್ಟು ಜನರು ಟೈಪ್ -2 ಮಧುಮೇಹವನ್ನು ಹೊಂದಿದ್ದಾರೆ ಮತ್ತು ಶೇ 22.2 ಪ್ರತಿಶತದಷ್ಟು ಜನರು ಪೂರ್ವ ಮಧುಮೇಹವನ್ನು ಹೊಂದಿದ್ದಾರೆಂದು ಸಮೀಕ್ಷೆ ಹೇಳಿದೆ. ಎರಡೂ ಮಾದರಿಗಳಲ್ಲಿ ಪ್ರತಿ ಶೇಕಡಾ ಒಂದಕ್ಕಿಂತ ಹೆಚ್ಚು ಕಡಿಮೆ ಬಿಪಿ ಮತ್ತು ಕಡಿಮೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೊಂದಿದೆ.

ಇದನ್ನೂ ಓದಿ: Bengaluru New Year: ಹೊಸ ವರ್ಷಾಚರಣೆಗೆ ಹೊಸ ಬೇಡಿಕೆಗಳನ್ನಿಟ್ಟ ಬಾರ್, ಪಬ್ ಮಾಲೀಕರು

“ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಸಾಂಪ್ರದಾಯಿಕವಾಗಿ ಮೇಲ್ಮಧ್ಯಮ ವರ್ಗದವರಲ್ಲಿ ಹೆಚ್ಚು ಸಾಮಾನ್ಯವಾಗಿರುವ ಜೀವನಶೈಲಿ ರೋಗಗಳಾಗಿವೆ” ಎಂದು ಲೇಬರ್ನೆಟ್‌ನ ಹಿರಿಯ ಉಪಾಧ್ಯಕ್ಷ ಡಾ.ಬಟೂಲ್ ಫಾತಿಮಾ ಹೇಳಿದರು. ಸಾರ್ವಜನಿಕ ಆರೋಗ್ಯ ಸಂಶೋಧಕ ಪ್ರಸನ್ನ ಸಾಲಿಗ್ರಾಮ ಮಾತನಾಡಿ, ಕಳೆದ ದಶಕದಲ್ಲಿ ವಲಸೆ ಕಾರ್ಮಿಕರಲ್ಲಿ ಎನ್‌ಸಿಡಿಗಳು ಹೆಚ್ಚಾಗಿ ಕಂಡುಬರುತ್ತಿವೆ ಎಂದರು.

ಹೆಚ್ಚಿನ ಸ್ಲಂ ನಿವಾಸಿಗಳು ಪ್ರಾಥಮಿ ಆರೋಗ್ಯ ಕೇಂದ್ರದಲ್ಲಿನ ವ್ಯವಸ್ಥೆಯನ್ನು ಬಳಸುತ್ತಿಲ್ಲ ಎಂದು ಸಮೀಕ್ಷೆಯು ಕಂಡುಹಿಡಿದಿದೆ. ಡಾ. ಫಾತಿಮಾ ಅಂದಾಜಿಸಿರುವ ಪ್ರಕಾರ, ರೋಗನಿರ್ಣಯ ಮಾಡಿದವರಲ್ಲಿ ಶೇ 60 ರಿಂದ 70 ರಷ್ಟು ಜನರು ತಮ್ಮ ಸ್ಥಿತಿಯ ಬಗ್ಗೆ ತಿಳಿದಿರಲಿಲ್ಲ ಮತ್ತು ಸಕಾಲಿಕ ಚಿಕಿತ್ಸೆ ಕೂಡ ಪಡೆಯುತ್ತಿಲ್ಲ.

ಸಮೀಕ್ಷೆಗೊಳಪಟ್ಟ 36,034 ಜನರಲ್ಲಿ ಕ್ರಮವಾಗಿ ಶೇ 15.9, ಶೇ 5.9 ಮತ್ತು ಶೇ 22.9 ಜನರು ಮಾತ್ರ ಆಯುಷ್ಮಾನ್ ಭಾರತ್, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಅಥವಾ ಬಿಪಿಎಲ್ ಕಾರ್ಡ್ ಹೊಂದಿದ್ದು, ಚಿಕಿತ್ಸೆಗಾಗಿ ಸಾರ್ವಜನಿಕ ಆರೋಗ್ಯ ವಿಮೆಗೆ ಅರ್ಹರಾಗಿರುತ್ತಾರೆ. ಕೇವಲ 384 ಮಹಿಳೆಯರು ಗರ್ಭಾವಸ್ಥೆಯಲ್ಲಿ ಉಚಿತ ಪಡಿತರ ಮತ್ತು ಸ್ಕ್ಯಾನ್‌ಗೆ ಅಗತ್ಯವಿರುವ ತಾಯಿ ಕಾರ್ಡ್ ಹೊಂದಿದ್ದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 am, Fri, 16 December 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!