AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಬಹಳುತ್ತಿರುವ ಬೆಂಗಳೂರಿನ ಸ್ಲಂ ನಿವಾಸಿಗಳು: ಸಮೀಕ್ಷೆ

ಬೆಂಗಳೂರಿನಲ್ಲಿ ಗಮನಾರ್ಹ ಸಂಖ್ಯೆಯ ಕೊಳಗೇರಿ ನಿವಾಸಿಗಳು ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂಬ ಆಘಾತಕಾರಿ ಸಂಗತಿ ಸಮೀಕ್ಷೆಯೊಂದರ ಮೂಲಕ ಬಹಿರಂಗಗೊಂಡಿದೆ.

ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಬಹಳುತ್ತಿರುವ ಬೆಂಗಳೂರಿನ ಸ್ಲಂ ನಿವಾಸಿಗಳು: ಸಮೀಕ್ಷೆ
ಸಾಂದರ್ಭಿಕ ಚಿತ್ರImage Credit source: Getty Images
TV9 Web
| Edited By: |

Updated on:Dec 16, 2022 | 9:17 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಗಮನಾರ್ಹ ಸಂಖ್ಯೆಯ ಕೊಳಗೇರಿ ನಿವಾಸಿಗಳು (Slum dwellers) ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ (NCD) ಬಳಲುತ್ತಿದ್ದಾರೆ ಎಂಬ ಆಘಾತಕಾರಿ ಅಂಶ ಎನ್‌ಜಿಒ ಲೇಬರ್ನೆಟ್ ನಡೆಸಿದ ಸಮೀಕ್ಷೆಯಿಂದ ಬಹಿರಂಗಗೊಂಡಿದೆ. ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳ ನಡುವೆ ಸಮೀಕ್ಷೆ ನಡೆದಿದ್ದು, ಒಟ್ಟು 36,034 ಕೊಳಗೇರಿ ನಿವಾಸಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಶೇ 6.25 ರಷ್ಟು ಮಂದಿ ಅಧಿಕ ಬಿಪಿ ಮತ್ತು ಶೇಕಡಾ 4.7 ರಷ್ಟು ಮಂದಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವುದು ತಿಳಿದುಬಂದಿದೆ.

ಮಾದರಿಯ 6,748 ಜನರಲ್ಲಿ ಮಧುಮೇಹ ತಪಾಸಣೆ ಮಾಡಲಾಗಿದ್ದು, ಹೆಚ್ಚು ಅಪಾಯಕಾರಿ ಅಂಶಗಳನ್ನು ಹೊಂದಿದ್ದಾರೆ. ಶೇ 7.88 ರಷ್ಟು ಜನರು ಟೈಪ್ -2 ಮಧುಮೇಹವನ್ನು ಹೊಂದಿದ್ದಾರೆ ಮತ್ತು ಶೇ 22.2 ಪ್ರತಿಶತದಷ್ಟು ಜನರು ಪೂರ್ವ ಮಧುಮೇಹವನ್ನು ಹೊಂದಿದ್ದಾರೆಂದು ಸಮೀಕ್ಷೆ ಹೇಳಿದೆ. ಎರಡೂ ಮಾದರಿಗಳಲ್ಲಿ ಪ್ರತಿ ಶೇಕಡಾ ಒಂದಕ್ಕಿಂತ ಹೆಚ್ಚು ಕಡಿಮೆ ಬಿಪಿ ಮತ್ತು ಕಡಿಮೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೊಂದಿದೆ.

ಇದನ್ನೂ ಓದಿ: Bengaluru New Year: ಹೊಸ ವರ್ಷಾಚರಣೆಗೆ ಹೊಸ ಬೇಡಿಕೆಗಳನ್ನಿಟ್ಟ ಬಾರ್, ಪಬ್ ಮಾಲೀಕರು

“ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಸಾಂಪ್ರದಾಯಿಕವಾಗಿ ಮೇಲ್ಮಧ್ಯಮ ವರ್ಗದವರಲ್ಲಿ ಹೆಚ್ಚು ಸಾಮಾನ್ಯವಾಗಿರುವ ಜೀವನಶೈಲಿ ರೋಗಗಳಾಗಿವೆ” ಎಂದು ಲೇಬರ್ನೆಟ್‌ನ ಹಿರಿಯ ಉಪಾಧ್ಯಕ್ಷ ಡಾ.ಬಟೂಲ್ ಫಾತಿಮಾ ಹೇಳಿದರು. ಸಾರ್ವಜನಿಕ ಆರೋಗ್ಯ ಸಂಶೋಧಕ ಪ್ರಸನ್ನ ಸಾಲಿಗ್ರಾಮ ಮಾತನಾಡಿ, ಕಳೆದ ದಶಕದಲ್ಲಿ ವಲಸೆ ಕಾರ್ಮಿಕರಲ್ಲಿ ಎನ್‌ಸಿಡಿಗಳು ಹೆಚ್ಚಾಗಿ ಕಂಡುಬರುತ್ತಿವೆ ಎಂದರು.

ಹೆಚ್ಚಿನ ಸ್ಲಂ ನಿವಾಸಿಗಳು ಪ್ರಾಥಮಿ ಆರೋಗ್ಯ ಕೇಂದ್ರದಲ್ಲಿನ ವ್ಯವಸ್ಥೆಯನ್ನು ಬಳಸುತ್ತಿಲ್ಲ ಎಂದು ಸಮೀಕ್ಷೆಯು ಕಂಡುಹಿಡಿದಿದೆ. ಡಾ. ಫಾತಿಮಾ ಅಂದಾಜಿಸಿರುವ ಪ್ರಕಾರ, ರೋಗನಿರ್ಣಯ ಮಾಡಿದವರಲ್ಲಿ ಶೇ 60 ರಿಂದ 70 ರಷ್ಟು ಜನರು ತಮ್ಮ ಸ್ಥಿತಿಯ ಬಗ್ಗೆ ತಿಳಿದಿರಲಿಲ್ಲ ಮತ್ತು ಸಕಾಲಿಕ ಚಿಕಿತ್ಸೆ ಕೂಡ ಪಡೆಯುತ್ತಿಲ್ಲ.

ಸಮೀಕ್ಷೆಗೊಳಪಟ್ಟ 36,034 ಜನರಲ್ಲಿ ಕ್ರಮವಾಗಿ ಶೇ 15.9, ಶೇ 5.9 ಮತ್ತು ಶೇ 22.9 ಜನರು ಮಾತ್ರ ಆಯುಷ್ಮಾನ್ ಭಾರತ್, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಅಥವಾ ಬಿಪಿಎಲ್ ಕಾರ್ಡ್ ಹೊಂದಿದ್ದು, ಚಿಕಿತ್ಸೆಗಾಗಿ ಸಾರ್ವಜನಿಕ ಆರೋಗ್ಯ ವಿಮೆಗೆ ಅರ್ಹರಾಗಿರುತ್ತಾರೆ. ಕೇವಲ 384 ಮಹಿಳೆಯರು ಗರ್ಭಾವಸ್ಥೆಯಲ್ಲಿ ಉಚಿತ ಪಡಿತರ ಮತ್ತು ಸ್ಕ್ಯಾನ್‌ಗೆ ಅಗತ್ಯವಿರುವ ತಾಯಿ ಕಾರ್ಡ್ ಹೊಂದಿದ್ದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 am, Fri, 16 December 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು