AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Clinics: ಬೆಂಗಳೂರಿನ ಕೆಲ ನಮ್ಮ ಕ್ಲೀನಿಕ್​​ಗಳ ಸಮಯ ಬದಲಿಸಲು ಚಿಂತನೆ: ದಿನೇಶ್ ಗುಂಡೂರಾವ್

ಬೆಂಗಳೂರಿನ ಕೆಲವು ನಮ್ಮ ಕ್ಲೀನಿಕ್​​ಗಳ ಸಮಯವನ್ನು ಬದಲಾಯಿಸಲು ರಾಜ್ಯ ಸರ್ಕಾರ ಚಿಂತಿಸಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ ಮಾತನಾಡಿ ನಮ್ಮ ಕ್ಲಿನಿಕ್​ ಮಧ್ಯಾಹ್ನ 12 ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಲಿವೆ ಎಂದರು.

Namma Clinics: ಬೆಂಗಳೂರಿನ ಕೆಲ ನಮ್ಮ ಕ್ಲೀನಿಕ್​​ಗಳ ಸಮಯ ಬದಲಿಸಲು ಚಿಂತನೆ: ದಿನೇಶ್ ಗುಂಡೂರಾವ್
Namma Clinic
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Aug 11, 2023 | 10:48 AM

Share

ಬೆಂಗಳೂರು: ನಗರದ ಕೆಲವು ನಮ್ಮ ಕ್ಲೀನಿಕ್​​ಗಳ (Namma Clinic) ಸಮಯವನ್ನು ಬದಲಾಯಿಸಲು ರಾಜ್ಯ ಸರ್ಕಾರ ಚಿಂತಿಸಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (​Dinesh Gundu Rao) ಮಾತನಾಡಿ ನಮ್ಮ ಕ್ಲಿನಿಕ್​ ಮಧ್ಯಾಹ್ನ 12 ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಲಿವೆ. ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಭಾವಿಸಿದ್ದೇವೆ. ಸಮಯ ಬದಲಾಯಿಸಿ ಕೆಲ ದಿನಗಳಕಾಲ ಕಾರ್ಯನಿರ್ವಹಣೆಯನ್ನು ನಾವು ಗಮನಿಸುತ್ತೇವೆ. ಈ ಸಂಬಂಧ ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದರು.

ನಾಗರಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ. ರೋಗಿಗಳು ತಮ್ಮ ಕೆಲಸ ಮತ್ತು ಮನೆಕೆಲಸಗಳನ್ನು ಪೂರ್ಣಗೊಳಿಸಿದ ನಂತರ ಸಮಾಲೋಚನೆಗಾಗಿ ಬರಲು ಸಂಜೆ ಉತ್ತಮವಾಗಿದೆ. ಪ್ರಸ್ತುತ, ನಮ್ಮ ಕ್ಲಿನಿಗಳು ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 9 ರಿಂದ ಸಂಜೆ 4:30 ರವರೆಗೆ ಕಾರ್ಯನಿರ್ವಹಿಸುತ್ತವೆ.

ಇದನ್ನೂ ಓದಿ: ಬೆಂಗಳೂರು: ಹೊಸ ಪಡಿತರ ಚೀಟಿ ಮಂಜೂರು ಮಾಡದಂತೆ ಸರ್ಕಾರ ಆದೇಶ; ಸದ್ಯಕ್ಕಿಲ್ಲ ಅರ್ಜಿ ಸಲ್ಲಿಕೆ

ಸಚಿವರು ಕಳೆದವಾರ ದೆಹಲಿಯಲ್ಲಿ ಆಪ್​ ಸರ್ಕಾರದ ಮೊಹಲ್ಲಾ ಕ್ಲಿನಿಕ್‌ಗೆ ಭೇಟಿ ನೀಡಿದ್ದರು. ಈ ವೇಳೆ ಮೊಹಲ್ಲಾ ಕ್ಲಿನಿಕ್​​ಗಳಲ್ಲಿ ಮೂಲಕಭೂತ ಸೌಕರ್ಯಗಳಿಲ್ಲದೆ ಜನರು ಈ ಕ್ಲಿನಿಕ್​ಗಳಿಗೆ ಬರುತ್ತಿಲ್ಲ. ಆದರೆ ನಮ್ಮ ರಾಜ್ಯದಲ್ಲಿನ ಚಿಕಿತ್ಸಾಲಯಗಳು ರೋಗಿಗಳಿಗೆ ತಕ್ಷಣದ ಪರೀಕ್ಷೆಯನ್ನು ಮಾಡಲು ಪ್ರಯೋಗಾಲಯ ಸೇರಿದಂತೆ ಹೆಚ್ಚಿನ ಸೌಲಭ್ಯಗಳನ್ನು ಹೊಂದಿವೆ ಎಂದು ಹೇಳಿದರು.

ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರ ಪ್ರಾರಂಭಿಸಿದ ಕ್ಲಿನಿಕ್‌ಗಳು ಉದ್ಘಾಟನೆಯಾದಾಗಿನಿಂದ ಸಾಕಷ್ಟು ಟೀಕೆಗಳಿಗೆ ಗುರಿಯಾಗಿವೆ. ಈ ನಮ್ಮ ಚಿಕಿತ್ಸಾಲಯಗಳನ್ನು ಪ್ರಾರಂಭಿಸುವ ಬದಲು ಈಗಿರುವ ಆರೋಗ್ಯ ಕೇಂದ್ರಗಳಲ್ಲಿನ ಸೌಲಭ್ಯಗಳನ್ನು ಸುಧಾರಿಸಲು ಸರ್ಕಾರ ಹೂಡಿಕೆ ಮಾಡಬೇಕಿತ್ತು ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದರು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ