AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಸ್ಕಾಂ ಬೇಜವಾಬ್ದಾರಿಗೆ ತಾಯಿ, ಹಸುಗೂಸು ಬಲಿ: ಎಇ-ಎಇಇ ಅಮಾನತು

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿದ್ದು, ಇದಕ್ಕೆ ಸಂಬಂಧಿಸಿದಂತೆ ಬೆಸ್ಕಾಂನ ಎಇ ಹಾಗೂ ಎಇಇಯನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಈ ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದು, ಮೃತ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡುವುದಾಗಿ ಇಂಧನ ಸಚಿವ ಕೆಜೆ ಜಾರ್ಜ್ ಟ್ವೀಟ್ ಮಾಡಿದ್ದಾರೆ.

ಬೆಸ್ಕಾಂ ಬೇಜವಾಬ್ದಾರಿಗೆ ತಾಯಿ, ಹಸುಗೂಸು ಬಲಿ: ಎಇ-ಎಇಇ ಅಮಾನತು
TV9 Web
| Edited By: |

Updated on: Nov 19, 2023 | 4:34 PM

Share

ಬೆಂಗಳೂರು, (ನವೆಂಬರ್ 19): ಬೆಂಗಳೂರಿನ (Bengaluru) ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿದ್ದು, ಇದಕ್ಕೆ ಸಂಬಂಧಿಸಿದಂತೆ ಬೆಸ್ಕಾಂನ ಎಇ ಹಾಗೂ ಎಇಇಯನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಇಂಧನ ಸಚಿವ ಕೆಜೆ ಜಾರ್ಜ್​ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಘಟನೆಗೆ ಕಾರಣರಾದ ಎಇ, ಎಇಇರನ್ನು ಅಮಾನತುಗೊಳಿಸಿದ್ದೇವೆ. ಪ್ರಕರಣದ ಬಗ್ಗೆ ತನಿಖೆಗೆ ಆದೇಶ ನೀಡಿದ್ದೇವೆ. ನಿರ್ಲಕ್ಷ್ಯವಹಿಸಿದ್ರೆ ಉಳಿದವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಇನ್ನು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್‌ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ದುರ್ದೈವದ ಘಟನೆ ನಡೆದಿದೆ. ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ AE ಮತ್ತು AEE ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಮತ್ತು ಇದಕ್ಕೆ ಕಾರಣಾದವರು ಮತ್ತಾರೇ ಇದ್ದರೂ ನಿರ್ದಾಕ್ಷಿಣ್ಯಯವಾಗಿ ಕ್ರಮ ಜರುಗಿಸಲಾಗುವುದು. ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ನೀಡಲಿದೆ ಎಂದು ಸಚಿವ ಕೆಜೆ ಜಾರ್ಜ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಬಾಣಂತಿ, ಹಸುಗೂಸು ದಾರುಣ ಸಾವು

ಇಂದು ಬೆಳಗ್ಗೆ ಬೆಂಗಳೂರಿನ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ತಾಯಿ ಸೌಂದರ್ಯ(23), 9 ತಿಂಗಳ ಮಗು ಲೀಲಾ ಮೃತಪಟ್ಟ ತಾಯಿ-ಮಗು. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?