AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಸ್ಕಾಂ ಬೇಜವಾಬ್ದಾರಿಗೆ ತಾಯಿ, ಹಸುಗೂಸು ಬಲಿ: ಎಇ-ಎಇಇ ಅಮಾನತು

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿದ್ದು, ಇದಕ್ಕೆ ಸಂಬಂಧಿಸಿದಂತೆ ಬೆಸ್ಕಾಂನ ಎಇ ಹಾಗೂ ಎಇಇಯನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಈ ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದು, ಮೃತ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡುವುದಾಗಿ ಇಂಧನ ಸಚಿವ ಕೆಜೆ ಜಾರ್ಜ್ ಟ್ವೀಟ್ ಮಾಡಿದ್ದಾರೆ.

ಬೆಸ್ಕಾಂ ಬೇಜವಾಬ್ದಾರಿಗೆ ತಾಯಿ, ಹಸುಗೂಸು ಬಲಿ: ಎಇ-ಎಇಇ ಅಮಾನತು
TV9 Web
| Edited By: |

Updated on: Nov 19, 2023 | 4:34 PM

Share

ಬೆಂಗಳೂರು, (ನವೆಂಬರ್ 19): ಬೆಂಗಳೂರಿನ (Bengaluru) ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿದ್ದು, ಇದಕ್ಕೆ ಸಂಬಂಧಿಸಿದಂತೆ ಬೆಸ್ಕಾಂನ ಎಇ ಹಾಗೂ ಎಇಇಯನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಇಂಧನ ಸಚಿವ ಕೆಜೆ ಜಾರ್ಜ್​ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಘಟನೆಗೆ ಕಾರಣರಾದ ಎಇ, ಎಇಇರನ್ನು ಅಮಾನತುಗೊಳಿಸಿದ್ದೇವೆ. ಪ್ರಕರಣದ ಬಗ್ಗೆ ತನಿಖೆಗೆ ಆದೇಶ ನೀಡಿದ್ದೇವೆ. ನಿರ್ಲಕ್ಷ್ಯವಹಿಸಿದ್ರೆ ಉಳಿದವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಇನ್ನು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್‌ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ದುರ್ದೈವದ ಘಟನೆ ನಡೆದಿದೆ. ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ AE ಮತ್ತು AEE ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಮತ್ತು ಇದಕ್ಕೆ ಕಾರಣಾದವರು ಮತ್ತಾರೇ ಇದ್ದರೂ ನಿರ್ದಾಕ್ಷಿಣ್ಯಯವಾಗಿ ಕ್ರಮ ಜರುಗಿಸಲಾಗುವುದು. ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ನೀಡಲಿದೆ ಎಂದು ಸಚಿವ ಕೆಜೆ ಜಾರ್ಜ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಬಾಣಂತಿ, ಹಸುಗೂಸು ದಾರುಣ ಸಾವು

ಇಂದು ಬೆಳಗ್ಗೆ ಬೆಂಗಳೂರಿನ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ತಾಯಿ ಸೌಂದರ್ಯ(23), 9 ತಿಂಗಳ ಮಗು ಲೀಲಾ ಮೃತಪಟ್ಟ ತಾಯಿ-ಮಗು. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ