AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಗಮನಿಸಿ, ಈ ಎರಡು ದಿನ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಕರೆಂಟ್​​ ಇರುವುದಿಲ್ಲ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಜನವರಿ 17 ಮತ್ತು 18 ರಂದು ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿ ವಿದ್ಯುತ್ ಕಡಿತ ಘೋಷಿಸಿದೆ. ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಗ್ರಿಡ್ ನಿರ್ವಹಣೆ ಮತ್ತು ನವೀಕರಣ ಕಾರ್ಯಗಳಿಗಾಗಿ ಈ ಕಡಿತ ಅಗತ್ಯ. ಬೊಮ್ಮನಹಳ್ಳಿ, ವೈಟ್‌ಫೀಲ್ಡ್, ಮಾರತಹಳ್ಳಿ ಸೇರಿದಂತೆ ಹಲವು ಪ್ರದೇಶಗಳು ಬಾಧಿತವಾಗಲಿವೆ. ನಿವಾಸಿಗಳು ಮೊಬೈಲ್ ಚಾರ್ಜ್, ಪವರ್ ಬ್ಯಾಂಕ್ ಸಿದ್ಧಪಡಿಸುವಂತಹ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ.

ಬೆಂಗಳೂರಿಗರೇ ಗಮನಿಸಿ, ಈ ಎರಡು ದಿನ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಕರೆಂಟ್​​ ಇರುವುದಿಲ್ಲ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jan 16, 2026 | 5:16 PM

Share

ಬೆಂಗಳೂರು, ಜ.16: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವಿದ್ಯುತ್​​​ ಕಂಬಗಳ ಬದಲಾವಣೆ, ಇತರ ಕೆಲಸ ಕಾರಣದಿಂದ ಈ ವಾರಾಂತ್ಯದಲ್ಲಿ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಮಾಡಲಿದೆ ಎಂದು ಹೇಳಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಕರೆಂಟ್​​ ಇರುವುದಿಲ್ಲ ಎಂದು ಹೇಳಲಾಗಿದೆ. ವಿದ್ಯುತ್ ಜಾಲದ ಸುರಕ್ಷತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು ವಾರಾಂತ್ಯದಲ್ಲಿ ಈ ಕೆಲಸವನ್ನು ಮಾಡಲು ಆಯ್ಕೆ ಮಾಡಿಕೊಂಡಿದ್ದು, ಕೆಲಸಕ್ಕೆ ಹೋಗುವವರಿಗೆ ಇದರಿಂದ ಅನುಕೂಲವಾಗಲಿದೆ. ಶನಿವಾರ ಮತ್ತು ಭಾನುವಾರ (ಜನವರಿ 17 ಮತ್ತು 18) ಹಗಲಿನಲ್ಲಿ ವಿದ್ಯುತ್ ವ್ಯತ್ಯಯಕ್ಕೆ ಮಾಡಲಾಗುವುದು ಎಂದು ನಾಗರಿಕರಿಗೆ ಮೊದಲೇ ಎಚ್ಚರಿಕೆ ನೀಡಿದ್ದಾರೆ.

ಈ ದಿನದಂದು ಟ್ರಾನ್ಸ್‌ಫಾರ್ಮರ್‌ಗಳನ್ನು ನವೀಕರಿಸುವುದು ಮತ್ತು ಫೀಡರ್‌ಗಳ ಸುರಕ್ಷತೆಗಳ ಬಗ್ಗೆ ಪರಿಶೀಲನೆ, ಇತರ ಕೆಲಸಗಳನ್ನು ಮಾಡಲಾಗುವುದು. ಇದರಿಂದ ಮುಂದಿನ ದಿನಗಳಲ್ಲಾಗುವ ಸಮಸ್ಯೆಗಳನ್ನು ತಡೆಯಬಹುದು ಎಂದು ಬೆಸ್ಕಾಂ ಹೇಳಿದೆ. ಬೆಂಗಳೂರಿನ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿ ವಿದ್ಯುತ್ ಕಡಿತಗೊಳ್ಳಿದೆ. ದಕ್ಷಿಣ ಬೆಂಗಳೂರು ಪ್ರದೇಶಗಳಾದ ಬೊಮ್ಮನಹಳ್ಳಿ, ಹೆಚ್‌ಎಸ್‌ಆರ್ ಲೇಔಟ್, ಕೂಡ್ಲು, ಜಕ್ಕಸಂದ್ರ, ಬೆಳ್ಳಂದೂರು ಮತ್ತು ಸರ್ಜಾಪುರ ರಸ್ತೆಯಲ್ಲಿ ವಿದ್ಯುತ್​​ ಕಡಿತವಾಗಲಿದೆ. ಪೂರ್ವ ಬೆಂಗಳೂರಿನ ಮಾರತಹಳ್ಳಿ, ವೈಟ್‌ಫೀಲ್ಡ್, ಕೆಆರ್ ಪುರಂ, ಮಹದೇವಪುರ, ಬಾಣಸವಾಡಿ, ಮತ್ತು ಹೊರಮಾವು ವಿದ್ಯುತ್​​ ಕಡಿತವಾಗಲಿದೆ.

ಬೆಂಗಳೂರಿನ ವಿದ್ಯುತ್ ಕಡಿತದ ಪರಿಣಾಮವನ್ನು ಕಡಿಮೆ ಮಾಡಲು, ನಿವಾಸಿಗಳು ಮತ್ತು ವ್ಯಾಪಾರಿಗಳು ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ವಿದ್ಯುತ್ ಕಡಿತಗೊಳ್ಳುವ ಮೊದಲು ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಪವರ್ ಬ್ಯಾಂಕ್‌ಗಳು ಸಂಪೂರ್ಣವಾಗಿ ಚಾರ್ಜ್ ಆಗಿವೆಯೇ ಎಂದು ನೋಡಿಕೊಳ್ಳಬೇಕು. ಮನೆಯಿಂದ ಕೆಲಸ ಮಾಡುವವರು, ಕೆಲಸದ ಸ್ಥಳದಲ್ಲಿ ವೈ-ಫೈ ಹೊಂದಿರುವ ಬಗ್ಗೆ ಮೊದಲೆ ಪರಿಶೀಲನೆ ಮಾಡಿಕೊಂಡಿರಬೇಕು. ಇನ್ವರ್ಟರ್‌ಗಳು, ಬ್ಯಾಕಪ್ ಲೈಟ್‌ಗಳು ಮತ್ತು ಇತರ ಅಗತ್ಯ ಸಾಧನಗಳು ಕಾರ್ಯನಿರ್ವಹಿಸುತ್ತಿವೆಯೇ ಎಂದು ಪರಿಶೀಲಿಸುವುದು ಅಗತ್ಯ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಕಂಪನಿಯಲ್ಲಿ 1 ವರ್ಷ ಅನುಭವ ಇರುವವರಿಗೆ 35 ಲಕ್ಷದ ಪ್ಯಾಕೇಜ್? 5 ವರ್ಷ ದುಡಿದವರಿಗೆ ಮರ್ಯಾದೆಯೇ ಇಲ್ಲ

ಈ ಮೇಲೆ ತಿಳಿಸಲಾದ ಎಲ್ಲ ಪ್ರದೇಶಗಳಲ್ಲಿ ಸಂಪೂರ್ಣ ವಿದ್ಯುತ್​ ಕಡಿತ ಇರಲ್ಲ, ಕೆಲವು ಪ್ರದೇಶಗಳು ಅಲ್ಪಾವಧಿಯ ವಿದ್ಯುತ್ ಅಡಚಣೆಗಳು ಅಥವಾ ಸಣ್ಣಪುಟ್ಟ ಅಡೆತಡೆಗಳನ್ನು ಮಾತ್ರ ಇರುತ್ತದೆ. ಇದಲ್ಲದೆ, ನಗರದ ವಿದ್ಯುತ್ ಮೂಲಸೌಕರ್ಯದ ದೀರ್ಘಕಾಲೀನ ಸುಧಾರಣೆಗೆ ಈ ದುರಸ್ಥಿತಿಗಳನ್ನು ಮಾಡಲೇಬೇಕು. ಈ ದಿನಕ್ಕೆ ನಿಮಗೆ ವಿದ್ಯುತ್​​​​​​ ಸಮಸ್ಯೆ ಉಂಟಾದರೂ ಮುಂದಿನ ದಿನಗಳಲ್ಲಿ ಇದರ ಲಾಭವನ್ನು ಪಡೆದುಕೊಳ್ಳಬಹುದು ಎಂದು ಹೇಳಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ