AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BESCOM: ಜೂನ್ ತಿಂಗಳಲ್ಲಿ ಹೆಚ್ಚು ವಿದ್ಯುತ್ ಬಿಲ್ ಬಂದಿದೆಯೇ? ಬೆಸ್ಕಾಂ ಸ್ಪಷ್ಟೀಕರಣ ಇಲ್ಲಿದೆ

ಬಿಲ್​ ಬಗ್ಗೆ ಗೊಂದಲಗಳಿದ್ದರೆ ಆತಂಕಕ್ಕೀಡಾಗದೆ ಉಪವಿಭಾಗವನ್ನು ಸಂಪರ್ಕಿಸಬಹುದು. ಬೆಸ್ಕಾಂ ಹೆಲ್ಪ್​ಲೈನ್ 1912 ಸಂಖ್ಯೆಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಸಂಸ್ಥೆ ತಿಳಿಸಿದೆ.

BESCOM: ಜೂನ್ ತಿಂಗಳಲ್ಲಿ ಹೆಚ್ಚು ವಿದ್ಯುತ್ ಬಿಲ್ ಬಂದಿದೆಯೇ? ಬೆಸ್ಕಾಂ ಸ್ಪಷ್ಟೀಕರಣ ಇಲ್ಲಿದೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jun 19, 2023 | 9:57 PM

Share

ಬೆಂಗಳೂರು: ಜೂನ್​ ತಿಂಗಳಲ್ಲಿ ಹೆಚ್ಚು ವಿದ್ಯುತ್ ಬಿಲ್ (Electricity Bill) ಬಂದ ಬಗ್ಗೆ ಗ್ರಾಹಕರು ತಲೆಕೆಡಿಸಿಕೊಂಡಿದ್ದು, ಈ ವಿಚಾರವಾಗಿ ಬೆಸ್ಕಾಂ (BESCOM) ಸ್ಪಷ್ಟೀಕರಣ ನೀಡಿದೆ. ಜೂನ್ ತಿಂಗಳಲ್ಲಿ ಗ್ರಾಹಕರಿಗೆ ನೀಡಿರುವ ಬಿಲ್ ಮಾಹಿತಿ ತಂತ್ರಾಂಶದಲ್ಲಿ ಸೇರ್ಪಡೆಗೊಳಿಸುವ ಕಾರ್ಯ ಪ್ರಗತಿಯಲ್ಲಿರುವ ಕಾರಣ ಆನ್​ಲೈನ್​ನಲ್ಲಿ ಋಣಾತ್ಮಕ ಬಿಲ್​ ಬಂದಿದೆ. ಇನ್ನೆರಡು ದಿನಗಳ ಒಳಗೆ ಇದನ್ನು ಸರಿಪಡಿಸಲಾಗುವುದು ಎಂದು ಬೆಸ್ಕಾಂ ಸೋಮವಾರ ಹೇಳಿದೆ.

ಗ್ರಾಹಕರಿಗೆ ನೀಡಿರುವ ಮುದ್ರಿತ ಬಿಲ್​ನಲ್ಲಿ ಮೊತ್ತ ನಮೂದಾಗಿರುತ್ತದೆ. ಆ ಮೊತ್ತವನ್ನು ಆನ್​ಲೈನ್​ನಲ್ಲಿ ನಮೂದಿಸಿ ಪಾವತಿಸಲು ಕೋರಲಾಗಿದೆ. ಬಿಲ್​ ಬಗ್ಗೆ ಗೊಂದಲಗಳಿದ್ದರೆ ಆತಂಕಕ್ಕೀಡಾಗದೆ ಉಪವಿಭಾಗವನ್ನು ಸಂಪರ್ಕಿಸಬಹುದು. ಬೆಸ್ಕಾಂ ಹೆಲ್ಪ್​ಲೈನ್ 1912 ಸಂಖ್ಯೆಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಸಂಸ್ಥೆ ತಿಳಿಸಿದೆ.

ಬೆಸ್ಕಾಂ ಗ್ರಾಹಕರ ಬಳಕೆಗೆ ಅನುಗುಣವಾಗಿ ಮಾತ್ರ ಬಿಲ್ ನೀಡಲಾಗಿದೆ. ಯಾವುದೇ ಹೆಚ್ಚುವರಿ ಶುಲ್ಕ ಸೇರಿಸಿ ಬೆಸ್ಕಾಂ ಬಿಲ್​ ನೀಡಿರುವುದಿಲ್ಲ. ಜುಲೈ ತಿಂಗಳಲ್ಲಿ ಯಾವುದೇ ಬಿಲ್ಲಿಂಗ್ ಸಮಸ್ಯೆ ಇರುವುದಿಲ್ಲ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Gruha Jyothi Scheme: ಗೃಹಜ್ಯೋತಿ ಯೋಜನೆ ನೋಂದಣಿ, ಮೊದಲ ದಿನ 55 ಸಾವಿರ ಅರ್ಜಿ

ಗೃಹಜ್ಯೋತಿಗೆ ಲಕ್ಷಕ್ಕೂ ಹೆಚ್ಚು ಮಂದಿ ಅರ್ಜಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಸೋಮವಾರ 1,61,958 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಬೆಳಗ್ಗೆಯಿಂದ ಸಂಜೆ 5.30 ರವರೆಗೆ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. ಮೊದಲ ದಿನ ಸುಮಾರು 55 ಸಾವಿರ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದರು. ಎರಡನೇ ದಿನ ನೋಂದಣಿ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಲಕ್ಷಕ್ಕೂ ಹೆಚ್ಚು ಮಂದಿ ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್