AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂ ಗುತ್ತಿಗೆ ನೌಕರನ ಕಿಡ್ನಾಪ್

ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಸಿನಿಮೀಯ ಶೈಲಿಯಲ್ಲಿ ಅಪಹರಣ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಿಡ್ನಾಪ್ ಆದ 24 ಗಂಟೆಯಲ್ಲಿ ನೌಕರನನ್ನು ರಕ್ಷಣೆ ಮಾಡಿದ ಪೀಣ್ಯಾ ಠಾಣಾ ಪೊಲೀಸರು, ಆರೋಪಿಗಳನ್ನ ಬಂಧಿಸಿದ್ದಾರೆ.

ಬೆಂಗಳೂರು: ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂ ಗುತ್ತಿಗೆ ನೌಕರನ ಕಿಡ್ನಾಪ್
ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂ ಗುತ್ತಿಗೆ ನೌಕರನ ಕಿಡ್ನಾಪ್ (ಸಾಂದರ್ಭಿಕ ಚಿತ್ರ)
Shivaprasad B
| Edited By: |

Updated on: Nov 03, 2023 | 12:48 PM

Share

ಬೆಂಗಳೂರು, ನ.3: ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂನಲ್ಲಿ (BESCOM) ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಸಿನಿಮೀಯ ಶೈಲಿಯಲ್ಲಿ ಅಪಹರಣ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಿಡ್ನಾಪ್ ಆದ 24 ಗಂಟೆಯಲ್ಲಿ ನೌಕರನನ್ನು ರಕ್ಷಣೆ ಮಾಡಿದ ಪೀಣ್ಯಾ ಠಾಣಾ ಪೊಲೀಸರು, ಆರೋಪಿಗಳನ್ನ ಬಂಧಿಸಿದ್ದಾರೆ.

ಲೋಹಿತ್ ಗೌಡ, ವೆಂಕಟೇಶ್, ರವಿ, ರಮೇಶ್, ಭರತ್ ಸೇರಿದಂತೆ ಒಟ್ಟು 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಲವನ್ನು ಮರು ಪಾವತಿಸಿದ ಗುತ್ತಿಗೆ ನೌಕರ ಪ್ರವೀಣ್​ನನ್ನು ನವಯುಗ ಟೋಲ್ ಬಳಿ ಕಿಡ್ನಾಪ್ ಮಾಡಿ ಮಡಿಕೇರಿಯ ಹೋಮ್ ಸ್ಟೇಯಲ್ಲಿ ಇರಿಸಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರವೀಣ್​ನನ್ನು ರಕ್ಷಣೆ ಮಾಡಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಹಾಸನ: ಬೆಂಗಳೂರಿನ ಕಾಲೇಜು ವಿದ್ಯಾರ್ಥಿಯ ಕಿಡ್ನಾಪ್, ಅರಕಲಗೂಡಿನಲ್ಲಿ ರಕ್ಷಣೆ

ಸ್ಫೋಟಕ ಮಾಹಿತಿ ಬಯಲಿಗೆ

ಆರೋಪಿಗಳ ಬಂಧಿಸಿ ವಿಚಾರಣೆ ನಡೆಸಿದಾಗ ಹಣಕಾಸಿನ ವಿಚಾರ ಬೆಳಕಿಗೆ ಬಂದಿದೆ. ಬೆಸ್ಕಾಂನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸಾಕಷ್ಟು ಜನರಿಗೆ ಪ್ರವೀಣ್ ವಂಚನೆ ಮಾಡಿರುವುದು ತಿಳಿದುಬಂದಿದೆ. ಬೆಸ್ಕಾಂ ಅಧಿಕಾರಿ ಪರಿಚಯವಿದ್ದಾರೆ ಎಂದು ಲಕ್ಷಾಂತರ ಹಣ ಪಡೆದು ವಂಚಿಸಿದ್ದನ್ನು ಆರೋಪಿಗಳು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ.

ಈ ಬಗ್ಗೆ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಿರುವಾಗ ಕಳೆದ ಅಕ್ಟೋಬರ್ 30 ರಂದು ಸಂಜೆ ಮಾತುಕತೆಗೆಂದು ಪ್ರವೀಣ್​ನನ್ನು ಕರೆಸಿಕೊಂಡು ಹಣ ನೀಡಿದ್ದವರು ಕಿಡ್ನಾಪ್ ಮಾಡಿದ್ದಾರೆ. ಹಣ ವಾಪಸ್ ಕೊಡುವಂತೆ ಬಲವಂತವಾಗಿ ಕರೆದೊಯ್ದು ಹಲ್ಲೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?