AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lokayukta Raid: ಲೋಕಾಯುಕ್ತ ದಾಳಿಗೆ ಬೆಸ್ಕಾಂ ಇಇ ಚನ್ನಕೇಶವ ಶಾಕ್: ಬಿಪಿಯಲ್ಲಿ ಏರುಪೇರು

Lokayukta raids government officials ಬೆಂಗಳೂರು ಸೇರಿ ರಾಜ್ಯದ 63 ಕಡೆ ಲೋಕಾಯುಕ್ತ ದಾಳಿಯಾಗಿದೆ. ಅಕ್ರಮ ಆಸ್ತಿ ಗಳಿಕೆ ದೂರು ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಈ ವೇಳೆ ಬೆಂಗಳೂರಿನಲ್ಲಿ ಬೆಸ್ಕಾಂ ಇಇ ಆಘಾತಕ್ಕೊಳಗಾಗಿದ್ದು, ಬಿಪಿ ಏರುಪೇರಾಗಿರುವ ಘಟನೆ ನಡೆದಿದೆ,

Lokayukta Raid: ಲೋಕಾಯುಕ್ತ ದಾಳಿಗೆ ಬೆಸ್ಕಾಂ ಇಇ  ಚನ್ನಕೇಶವ ಶಾಕ್: ಬಿಪಿಯಲ್ಲಿ ಏರುಪೇರು
Jagadish PB
| Edited By: |

Updated on: Dec 05, 2023 | 10:08 AM

Share

ಬೆಂಗಳೂರು, (ಡಿಸೆಂಬರ್ 04): ಇಂದು ಬೆಳ್ಳಂಬೆಳ್ಳಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ಹಲವಡೆ ಏಕಾಕಾಲಕ್ಕೆ ದಾಳಿ(Lokayukta Raid) ಮಾಡಿದ್ದು, ಹಲವು ಇಲಾಖೆ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಇನ್ನು ಲೋಕಾಯುಕ್ತ ಅಧಿಕಾರಿಗಳ ದಾಳಿಗೆ ಬೆಂಗಳೂರಿನ ಜಯನಗರ ಬೆಸ್ಕಾಂ ಉಪವಿಭಾಗದ ಇಇ ಚನ್ನಕೇಶವ ಆಘಾತಕ್ಕೊಳಗಾಗಿದ್ದು, ಅವರ ಬಿಪಿಯಲ್ಲಿ ಏರುಪೇರಾಗಿದೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ನಿದ್ದೆಗಣ್ಣಲ್ಲಿದ್ದ ಚನ್ನಕೇಶವ ಅವರಿಗೆ ಹೈಬಿಪಿಯಾಗಿದೆ. ಕೂಡಲೇ ಅವರ ಪತ್ನಿ ಹಾಗೂ ಅಧಿಕಾರಿಗಳು ಮಾತ್ರೆ ನೀಡದ ಬಳಿಕ ಚನ್ನಕೇಶವ ಅವರು ಸುಧಾರಿಸಿಕೊಂಡಿದ್ದಾರೆ.

ಇನ್ನು ಅಮೃತಹಳ್ಳಿಯ ಅಪಾರ್ಟ್​ಮೆಂಟ್​ನ ನಿವಾಸದಲ್ಲಿ ಪರಿಶೀಲನೆ ವೇಳೆ 6 ಲಕ್ಷ ನಗದು, ಅಂದಾಜು 3 ಕೆಜಿ ಚಿನ್ನ, 28ಕೆಜಿ ಬೆಳ್ಳಿ, 25 ಲಕ್ಷ ರೂ. ಮೌಲ್ಯದ ಡೈಮಂಡ್ ಸೇರಿದಂತೆ ಒಟ್ಟು 1.5 ಕೋಟಿ.ರೂಪಾಯಿ ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿವೆ.

ಇದನ್ನೂ ಓದಿ: Lokayukta Raids: ಬೆಂಗಳೂರು ಸೇರಿ ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ

ಅಮೃತಹಳ್ಳಿಯ ಖಾಸಗಿ ಅಪಾರ್ಟ್ಮೆಂಟ್ ನ ನಿವಾಸಕ್ಕೆ ಇಂದು ಬೆಳಗ್ಗೆ 6 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳು ಬಾಗಿಲು ಬಡಿದಿದ್ದಾರೆ. ಈ ವೇಳೆ ಪತ್ನಿ ಮನೆ ಬಾಗಿಲು ತೆರೆದಿದ್ದಾರೆ. ಬಳಿಕ ಚನ್ನಕೇಶವ ಅವರು ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ. ಸದ್ಯ ಅವರು ಸುಧಾರಿಸಿಕೊಂಡಿದ್ದು, ದಾಖಲೆ ಪರಿಶೀಲನೆಗೆ ಸಹಕಾರ ನೀಡುತ್ತಿದ್ದಾರೆ. ಈ ಹಿನ್ನೆಲೆಯ್ಲಲಿ ಲೋಕಾಯುಕ್ತ ಅಧಿಕಾರಿಗಳು ಸಹ ಚನ್ನಕೇಶವ ಹಾಗೂ ಅವರ ಪತ್ನಿ ಸಮ್ಮುಖದಲ್ಲೇ ಮನೆಯಲ್ಲಿ ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ,

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ