AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lokayukta Raid: ಲೋಕಾಯುಕ್ತ ದಾಳಿಗೆ ಬೆಸ್ಕಾಂ ಇಇ ಚನ್ನಕೇಶವ ಶಾಕ್: ಬಿಪಿಯಲ್ಲಿ ಏರುಪೇರು

Lokayukta raids government officials ಬೆಂಗಳೂರು ಸೇರಿ ರಾಜ್ಯದ 63 ಕಡೆ ಲೋಕಾಯುಕ್ತ ದಾಳಿಯಾಗಿದೆ. ಅಕ್ರಮ ಆಸ್ತಿ ಗಳಿಕೆ ದೂರು ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಈ ವೇಳೆ ಬೆಂಗಳೂರಿನಲ್ಲಿ ಬೆಸ್ಕಾಂ ಇಇ ಆಘಾತಕ್ಕೊಳಗಾಗಿದ್ದು, ಬಿಪಿ ಏರುಪೇರಾಗಿರುವ ಘಟನೆ ನಡೆದಿದೆ,

Lokayukta Raid: ಲೋಕಾಯುಕ್ತ ದಾಳಿಗೆ ಬೆಸ್ಕಾಂ ಇಇ  ಚನ್ನಕೇಶವ ಶಾಕ್: ಬಿಪಿಯಲ್ಲಿ ಏರುಪೇರು
Jagadish PB
| Edited By: |

Updated on: Dec 05, 2023 | 10:08 AM

Share

ಬೆಂಗಳೂರು, (ಡಿಸೆಂಬರ್ 04): ಇಂದು ಬೆಳ್ಳಂಬೆಳ್ಳಗೆ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ಹಲವಡೆ ಏಕಾಕಾಲಕ್ಕೆ ದಾಳಿ(Lokayukta Raid) ಮಾಡಿದ್ದು, ಹಲವು ಇಲಾಖೆ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಇನ್ನು ಲೋಕಾಯುಕ್ತ ಅಧಿಕಾರಿಗಳ ದಾಳಿಗೆ ಬೆಂಗಳೂರಿನ ಜಯನಗರ ಬೆಸ್ಕಾಂ ಉಪವಿಭಾಗದ ಇಇ ಚನ್ನಕೇಶವ ಆಘಾತಕ್ಕೊಳಗಾಗಿದ್ದು, ಅವರ ಬಿಪಿಯಲ್ಲಿ ಏರುಪೇರಾಗಿದೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ನಿದ್ದೆಗಣ್ಣಲ್ಲಿದ್ದ ಚನ್ನಕೇಶವ ಅವರಿಗೆ ಹೈಬಿಪಿಯಾಗಿದೆ. ಕೂಡಲೇ ಅವರ ಪತ್ನಿ ಹಾಗೂ ಅಧಿಕಾರಿಗಳು ಮಾತ್ರೆ ನೀಡದ ಬಳಿಕ ಚನ್ನಕೇಶವ ಅವರು ಸುಧಾರಿಸಿಕೊಂಡಿದ್ದಾರೆ.

ಇನ್ನು ಅಮೃತಹಳ್ಳಿಯ ಅಪಾರ್ಟ್​ಮೆಂಟ್​ನ ನಿವಾಸದಲ್ಲಿ ಪರಿಶೀಲನೆ ವೇಳೆ 6 ಲಕ್ಷ ನಗದು, ಅಂದಾಜು 3 ಕೆಜಿ ಚಿನ್ನ, 28ಕೆಜಿ ಬೆಳ್ಳಿ, 25 ಲಕ್ಷ ರೂ. ಮೌಲ್ಯದ ಡೈಮಂಡ್ ಸೇರಿದಂತೆ ಒಟ್ಟು 1.5 ಕೋಟಿ.ರೂಪಾಯಿ ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿವೆ.

ಇದನ್ನೂ ಓದಿ: Lokayukta Raids: ಬೆಂಗಳೂರು ಸೇರಿ ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ

ಅಮೃತಹಳ್ಳಿಯ ಖಾಸಗಿ ಅಪಾರ್ಟ್ಮೆಂಟ್ ನ ನಿವಾಸಕ್ಕೆ ಇಂದು ಬೆಳಗ್ಗೆ 6 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳು ಬಾಗಿಲು ಬಡಿದಿದ್ದಾರೆ. ಈ ವೇಳೆ ಪತ್ನಿ ಮನೆ ಬಾಗಿಲು ತೆರೆದಿದ್ದಾರೆ. ಬಳಿಕ ಚನ್ನಕೇಶವ ಅವರು ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ. ಸದ್ಯ ಅವರು ಸುಧಾರಿಸಿಕೊಂಡಿದ್ದು, ದಾಖಲೆ ಪರಿಶೀಲನೆಗೆ ಸಹಕಾರ ನೀಡುತ್ತಿದ್ದಾರೆ. ಈ ಹಿನ್ನೆಲೆಯ್ಲಲಿ ಲೋಕಾಯುಕ್ತ ಅಧಿಕಾರಿಗಳು ಸಹ ಚನ್ನಕೇಶವ ಹಾಗೂ ಅವರ ಪತ್ನಿ ಸಮ್ಮುಖದಲ್ಲೇ ಮನೆಯಲ್ಲಿ ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ,

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?