AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಹಕರಿಗೆ ವಿದ್ಯುತ್​ ಸ್ಮಾರ್ಟ್ ಮೀಟರ್ ಶಾಕ್: ದರ ಶೇ.400ರಿಂದ 800ರಷ್ಟು ಏರಿಕೆ

ವಿದ್ಯುತ್​ ದರ ಏರಿಕೆಯ ಸಲುವಾಗಿ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದ್ದು, ಈಗಾಗಲೇ ಗ್ರಾಹಕರಿಗೆ ನಡುಕ ಶುರುವಾಗಿದೆ. ಇದರ ಮಧ್ಯೆ ಹಲವು ವರ್ಷಗಳಿಂದ ಇಂಧನ ಇಲಾಖೆ ಜಾರಿ ಮಾಡಲು ಉದ್ದೇಶಿಸಿದ್ದ ಸ್ಮಾರ್ಟ್​ ಮೀಟರ್​ಗಳ ಅಳವಡಿಕೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ಫೆಬ್ರವರಿ 15 ರಿಂದ ಅನ್ವಯ ಆಗುವಂತೆ ಸ್ಮಾರ್ಟ್ ಮೀಟರ್ ಗಳ ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ. ಇನ್ನು ಈ ಸ್ಮಾರ್ಟ್​ ಮೀಟರ್​​ಗಳ ದರ ಕೇಳಿದ್ರೆ ಶಾಕ್ ಆಗುತ್ತೆ.

ಗ್ರಾಹಕರಿಗೆ ವಿದ್ಯುತ್​ ಸ್ಮಾರ್ಟ್ ಮೀಟರ್ ಶಾಕ್: ದರ ಶೇ.400ರಿಂದ 800ರಷ್ಟು ಏರಿಕೆ
Electricity Smart Meter
TV9 Web
| Edited By: |

Updated on: Mar 05, 2025 | 10:05 PM

Share

ಬೆಂಗಳೂರು, (ಮಾರ್ಚ್​ 05): ಕಳೆದ ವರ್ಷದಿಂದಲೂ ಸ್ಮಾರ್ಟ್​ ಮೀಟರ್​ಗಳನ್ನ ಕಡ್ಡಾಯ ಮಾಡುವ ಸಲುವಾಗಿ ಕಸರತ್ತು ನಡೆಸಿದ್ದ ಬೆಸ್ಕಾಂ ಕೊನೆಗೂ ಈ ಕುರಿತಾಗಿ ಆದೇಶ ಹೊರಡಿಸಿದ್ದು, ಫೆಬ್ರವರಿ 15ರಿಂದ ಅನ್ವಯವಾಗುವಂತೆ ಸ್ಮಾರ್ಟ್​ ಮೀಟರ್​ ಬಳಕೆ ಕಡ್ಡಾಯ ಎಂದು ಹೇಳಿದೆ. ಹೊಸ ವಿದ್ಯುತ್​ ಸಂಪರ್ಕ ಪಡೆಯುವ ಹಾಗೂ ಈಗಾಗಲೇ ಸ್ಟಾಟಿಕ್​ ಮೀಟರ್​ ಬಳಕೆದಾರರಿಗೂ ಇದು ಅನ್ವಯವಾಗಲಿದೆ. ಆದರೆ ಸ್ಟಾಟಿಕ್​ ಮೀಟರ್​​ಗಳಿಗಿಂತ ಸ್ಮಾರ್ಟ್​ ಮೀಟರ್​ಗಳು ದುಬಾರಿಯಾಗಿದ್ದು, ಇದೀಗ ಗ್ರಾಹಕರ ನಿದ್ದೆಗೆಡಿಸಿದೆ.

ಹೇಗಿದೆ ಸ್ಮಾರ್ಟ್ ಮೀಟರ್ ದರ?

ಇನ್ನು  ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು,  ಮುಂದಿನ ದಿನಗಳಲ್ಲಿ ಎಸ್ಕಾಂ ವ್ಯಾಪ್ತಿಯಲ್ಲೂ ಈ ಸ್ಮಾರ್ಟ್​ ಮೀಟರ್​ ಜಾರಿಗೊಳಿಸಲಾಗುತ್ತದೆ.  ಸದ್ಯ ಚಾಲ್ತಿಯಲ್ಲಿರುವ ಸ್ಟಾಟಿಕ್ ಮೀಟರ್​ಗಳಿಗೂ ಹೊಸ ಸ್ಮಾರ್ಟ್​ ಮೀಟರ್​ಗಳ ದರಕ್ಕೂ ಅಜಗಜಾಂತರ ವ್ಯತ್ಯಾಸವಿದೆ.  ಸ್ಮಾರ್ಟ್​ ಮೀಟರ್ ದರ ಶೇ.400ರಿಂದ 800ರಷ್ಟು ಏರಿಕೆಯಾಗಿದ್ದು, ಹೊಸ ಸಂಪರ್ಕಕ್ಕೆ ಸ್ಮಾರ್ಟ್​ ಮೀಟರ್​ ಕಡ್ಡಾಯವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಕೆಗೆ ಮುಹೂರ್ತ ಫಿಕ್ಸ್ , ಎಷ್ಟು ಹೆಚ್ಚಳ?

ಎಲ್ ಟಿ ಸಿಂಗಲ್ ಫೇಸ್ 2 ಸ್ಟಾಟಿಕ್​​ ಮೀಟರ್​​​ ದರ 980 ರೂಪಾಯಿ ಇದ್ದು, ಸ್ಮಾರ್ಟ್​​ ಮೀಟರ್​​ ದರ 4,800 ರೂ. ಇದೆ. ಎಲ್ ಟಿ 3 ಫೇಸ್ 4 ಸ್ಟಾಟಿಕ್​​ ಮೀಟರ್ 2,430 ರೂಪಾಯಿ ಇದ್ರೆ, ಸ್ಮಾರ್ಟ್​​ ಮೀಟರ್​​ ದರ 8,500 ರೂ. ಆಗಿದೆ. ಇನ್ನು ಎಲ್ ಟಿ 3 ಫೇಸ್ CT ಆಪರೇಟೆಡ್ 3450 ರಿಂದ 10,900 ರೂಪಾಯಿ ಆಗಿದೆ.

ಇದನ್ನೂ ಓದಿ
Image
ಪ್ರೋತ್ಸಾಹ ಧನ ಬಾಕಿ ಮಧ್ಯೆ ಹಾಲಿನ ದರ ಏರಿಕೆಗೆ ಸರ್ಕಾರ ಚಿಂತನೆ
Image
ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಕೆಗೆ ಮುಹೂರ್ತ ಫಿಕ್ಸ್
Image
ಟಿಕೆಟ್ ದರ ಏರಿಕೆ ಪರಿಣಾಮ: 5 ಲಕ್ಷಕ್ಕಿಳಿದ ಮೆಟ್ರೋ ಪ್ರಯಾಣಿಕರ ಸಂಖ್ಯೆ
Image
ನಂದಿನಿ ಹಾಲಿನ ದರ ಏರಿಕೆ ಬಗ್ಗೆ KMF ಅಧ್ಯಕ್ಷ ನೀಡಿದ್ರು ಬಿಗ್​ ಅಪ್ಡೇಟ್​

ರಿಚಾರ್ಜ್​ ಮಾಡದಿದ್ರೆ ವಿದ್ಯುತ್ ಸಂಪರ್ಕ ಕಟ್​

ಇನ್ನು ಈ ಸ್ಮಾರ್ಟ್​ ಮೀಟರ್ ನಿರ್ವಹಣೆ ಬಗ್ಗೆ ಬೆಸ್ಕಾಂ ಮಾರ್ಗಸೂಚಿ ಹೊರಡಿಸಿದ್ದು, ಪ್ರಿಪೇಯ್ಡ್ ಗ್ರಾಹಕರು ಕನಿಷ್ಠ 100 ರೂ ಅಥವಾ ಒಂದು ವಾರದ ಸರಾಸರಿ ಬಳಕೆಗೆ ಸಮಾನವಾದ ಮೊತ್ತವನ್ನು ಕನಿಷ್ಠ ರಿಚಾರ್ಜ್ ಮಾಡಿಸಬೇಕು. ಗರಿಷ್ಠ ರಿಚಾರ್ಜ್​ಗೆ ಯಾವುದೇ ಮಿತಿ ಇರುವುದಿಲ್ಲ. ಇದಲ್ಲದೇ ಮಾಸಿಕ ನಿಗದಿತ ಶುಲ್ಕವನ್ನು ತಿಂಗಳ ಮೊದಲ ದಿನವೇ ಕಡಿತ ಮಾಡಲಾಗುತ್ತದೆ. ಬ್ಯಾಲೆನ್ಸ್​ ಶೂನ್ಯವಾದರೆ ಸಂಪರ್ಕ ಕಡಿತಗೊಳಿಸಲಾಗುತ್ತದೆ. ಈ ಬಗ್ಗೆ ಅಲರ್ಟ್ ಕೊಡಿಸಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ ನಡುವೆ ವಿದ್ಯುತ್​ ಕಟ್ ಮಾಡಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಎಎಂಐ ಸಾಫ್ಟ್​ವೇರ್ ಮೂಲಕವೇ ಬೆಸ್ಕಾಂ ಸಂಪರ್ಕ ಕಡಿತ ಮಾಡಲಿದೆ. ​

ಇನ್ನು ಕೇಂದ್ರೀಯ ವಿದ್ಯುತ್​ ಪ್ರಾಧಿಕಾರ ಹಾಗೂ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ನಿರ್ದೇಶನದಂತೆ ಕ್ರಮ ವಹಿಸಲಾಗಿದ್ದು, ಗ್ರಾಹಕರಿಗೆ ಇದು ಅನಿವಾರ್ಯ ಎಂದು ಬೆಸ್ಕಾಂ ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲದೆ ಹಳೆಯ ಸ್ಟಾಟಿಕ್​ ಮೀಟರ್​ ಸ್ಪೆಸಿಫಿಕೇಶನ್​ಗೂ ಸ್ಮಾರ್ಟ್​ ಮೀಟರ್​ ಫೀಚರ್ಸ್​ ಇರುವ ಕಾರಣ ಕೊಂಚ ದುಬಾರಿಯಾಗಲಿದ್ದು, ಅಳವಡಿಕೆಯ ನಂತರ ಇದು ಗ್ರಾಹಕರು ವಿದ್ಯುತ್​ ಬಳಕೆಯ ಬಗ್ಗೆ ತಿಳಿದುಕೊಳ್ಳಲು ಹಾಗೂ ಮಿತವಾಗಿ ಬಳಸಿಕೊಳ್ಳಲು ಸಹಕಾರಿಯಾಗಲಿದೆ. ಹೀಗಾಗಿ ಬೆಸ್ಕಾಂನ ಈ ಹೊಸ ಸ್ಮಾರ್ಟ್ ಮೀಟರ್​ಗಳಿಗೆ ಮುಂದಿನ ದಿನಗಳಲ್ಲಿ ಗ್ರಾಹಕರಿಂದ ಏನು ಪ್ರತಿಕ್ರಿಯೆ ವ್ಯಕ್ತವಾಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್