ಬೆಂಗಳೂರಿನ ಖ್ಯಾತ ಸರ್ಕಾರಿ ಆಸ್ಪತ್ರೆಗಳಿಗೆ ಬೆಸ್ಕಾಂ ನೋಟಿಸ್, ಬಾಕಿ ಪಾವತಿಸದಿದ್ದರೆ ವಿದ್ಯುತ್ ಕಟ್ ಮಾಡುವ ಎಚ್ಚರಿಕೆ

ಕೆಸಿ ಜನರಲ್‌ ಸರ್ಕಾರಿ ಆಸ್ಪತ್ರೆ ಬರೋಬ್ಬರಿ 48 ಲಕ್ಷ ರೂ ಮೊತ್ತದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಬೆಸ್ಕಾಂ) ಬಾಕಿ ಉಳಿಸಿಕೊಂಡ ಬಿಲ್ ಪಾವತಿಸುವಂತೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನ ಖ್ಯಾತ ಸರ್ಕಾರಿ ಆಸ್ಪತ್ರೆಗಳಿಗೆ ಬೆಸ್ಕಾಂ ನೋಟಿಸ್, ಬಾಕಿ ಪಾವತಿಸದಿದ್ದರೆ ವಿದ್ಯುತ್ ಕಟ್ ಮಾಡುವ ಎಚ್ಚರಿಕೆ
ಕೆ.ಸಿ.ಜನರಲ್ ಆಸ್ಪತ್ರೆ
Follow us
| Updated By: ಆಯೇಷಾ ಬಾನು

Updated on: Feb 02, 2023 | 1:35 PM

ಬೆಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಗಳಿಗೆ ಬಾಕಿ ವಿದ್ಯತ್ ಬಿಲ್ ಪಾವತಿಸುವಂತೆ ಬೆಸ್ಕಾಂ(BESCOM) ನೋಟಿಸ್​ ನೀಡಿದೆ. ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆ(KC General Hospital), ಜಯನಗರದ ಸಾರ್ವಜನಿಕ ಆಸ್ಪತ್ರೆ(Jayanagara Generala Hospital) ಸೇರಿ ಹಲವು ಸರ್ಕಾರಿ ಆಸ್ಪತ್ರೆಗಳು ಹಾಗೂ ಪೊಲೀಸ್ ಠಾಣೆಗಳಿಗೆ ಬೆಸ್ಕಾಂ ನೋಟಿಸ್ ಜಾರಿ ಮಾಡಿದೆ.

ಕೆಸಿ ಜನರಲ್‌ ಸರ್ಕಾರಿ ಆಸ್ಪತ್ರೆ ಬರೋಬ್ಬರಿ 48 ಲಕ್ಷ ರೂ ಮೊತ್ತದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಬೆಸ್ಕಾಂ) ಬಾಕಿ ಉಳಿಸಿಕೊಂಡ ಬಿಲ್ ಪಾವತಿಸುವಂತೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಕಾಲಮಿತಿಯಲ್ಲಿ ವಿದ್ಯುತ್‌ ಬಿಲ್‌ ಪಾವತಿ ಮಾಡದೆ ಇದ್ದರೆ, ವಿದ್ಯುತ್‌ ಕಡಿತ ಮಾಡುವುದಾಗಿಯೂ ಎಚ್ಚರಿಕೆ ನೀಡಿದೆ. ಹಾಗೂ ಜಯನಗರದ ಆಸ್ಪತ್ರೆ 24,49,453 ರೂ. ಬಾಕಿ ಉಳಿಸಿಕೊಂಡಿದ್ದು ವಿದ್ಯುತ್ ಬಿಲ್ ಪಾವತಿಸದಿದ್ದರೆ ಸ್ಥಗಿತಗೊಳಿಸುಂತೆ ಬೆಸ್ಕಾಂ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಮಂಡ್ಯ: ತಡರಾತ್ರಿ ರಸ್ತೆಯಲ್ಲಿ ಕಾರನ್ನ ಅಡ್ಡಗಟ್ಟಿ ಲಾಂಗ್ ಝಳಪಿಸಿದ ದುಷ್ಕರ್ಮಿಗಳು! ದರೋಡೆಗೆ ವಿಫಲ ಯತ್ನ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಕೆಸಿ ಜನರಲ್‌ ಆಸ್ಪತ್ರೆ ಹಾಗೂ ಜಯನಗರದ ಸಾರ್ವಜನಿಕ ಆಸ್ಪತ್ರೆಗೆ ನಿತ್ಯವು ಸಾವಿರಾರು ಸಂಖ್ಯೆಯಲ್ಲಿ ಹೊರ ರೋಗಿಗಳು ಬರುತ್ತಾರೆ. ಜೊತೆಗೆ ಒಳರೋಗಿಗಳ ಸಂಖ್ಯೆಯೂ ಹೆಚ್ಚಿದೆ. ಈ ಸಂರ್ಭದಲ್ಲಿ ಆಸ್ಪತ್ರೆಯ ವಿದ್ಯುತ್‌ ಕಡಿತ ಮಾಡುವುದು ತೀವ್ರವಾದ ಚರ್ಚೆಗೆ ಗ್ರಾಸವಾಗಿದೆ.

ಕೆ.ಸಿ ಜನರಲ್‌ ಆಸ್ಪತ್ರೆಯೂ ಮಾಸಿಕ ಆಧಾರದ ಮೇಲೆ ಆಸ್ಪತ್ರೆ ಬಿಲ್‌ಗಳನ್ನು ತೆರವುಗೊಳಿಸಿಲ್ಲ. ಲಕ್ಷಗಟ್ಟಲೆ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ, ನೋಟಿಸ್ ಜಾರಿ ಮಾಡಿದ್ದೇವೆ. ಎರಡು ತಿಂಗಳ ಹಿಂದೆಯೇ ಆಸ್ಪತ್ರೆಗೆ ಮೊದಲ ನೋಟಿಸ್ ನೀಡಲಾಗಿತ್ತು. ಜ.17ರಂದು ಮತ್ತೊಮ್ಮೆ ನೋಟಿಸ್ ನೀಡಲಾಗಿದೆ. ಜ.30ರಂದು ಬೆಸ್ಕಾಂ ಸಿಬ್ಬಂದಿ ವಿದ್ಯುತ್‌ ಬಿಲ್‌ ಪಾವತಿ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಬೆಸ್ಕಾಂನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್