AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಸ್ಕಾಂ ಸಿಬ್ಬಂದಿಗೆ ಜಾತಿ ಗಣತಿ ಕೆಲಸ: ಮೀಟರ್ ರೀಡಿಂಗ್ ವಿಳಂಬದಿಂದ ಗ್ರಾಹಕರಿಗೆ ಬರೆ!

ಕರ್ನಾಟಕದಲ್ಲಿ ಜಾತಿ ಸಮೀಕ್ಷೆ ಕುರಿತ ವಿಷಯಗಳು ಚರ್ಚೆಯಾಗುತ್ತಿದ್ದರೆ, ಇತ್ತ ಬೆಂಗಳೂರಿನ ಜನರಿಗೆ ಜಾತಿ ಸಮೀಕ್ಷೆಯಿಂದ ಮತ್ತೊಂದು ರೀತಿಯ ಸಂಕಷ್ಟ ಎದುರಾಗಿದೆ. ಮನೆ ಮನೆ ಸಮೀಕ್ಷೆ ವೇಳೆ ಜಿಯೋ ಟ್ಯಾಗಿಂಗ್ ಮಾಡಲು ಸರ್ಕಾರ ಬೆಸ್ಕಾಂ ಸಿಬ್ಬಂದಿ ಬಳಸಿಕೊಳ್ಳುತ್ತಿರುವುದರಿಂದ ಬೆಂಗಳೂರಿಗರ ವಿದ್ಯುತ್ ಬಿಲ್ ಮೇಲೆ ಪರಿಣಾಮ ಬೀರುತ್ತಿದೆ ಎನ್ನಲಾಗಿದೆ. ಕಳೆದೆರಡು ತಿಂಗಳಿಂದ ವಿದ್ಯುತ್ ಬಿಲ್ ದಿಢೀರ್ ಏರಿಕೆ ಕಂಡಿದ್ದು, ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತವಾಗಿದೆ.

ಬೆಸ್ಕಾಂ ಸಿಬ್ಬಂದಿಗೆ ಜಾತಿ ಗಣತಿ ಕೆಲಸ: ಮೀಟರ್ ರೀಡಿಂಗ್ ವಿಳಂಬದಿಂದ ಗ್ರಾಹಕರಿಗೆ ಬರೆ!
ಬೆಸ್ಕಾಂ ಸಿಬ್ಬಂದಿಗೆ ಜಾತಿ ಗಣತಿ ಕೆಲಸ: ಮೀಟರ್ ರೀಡಿಂಗ್ ವಿಳಂಬ
ಶಾಂತಮೂರ್ತಿ
| Edited By: |

Updated on: Sep 23, 2025 | 7:53 AM

Share

ಬೆಂಗಳೂರು, ಸೆಪ್ಟೆಂಬರ್ 23: ರಾಜ್ಯದಲ್ಲಿ ಜಾತಿ ಸಮೀಕ್ಷೆ (Caste Census) ನಡೆಸುತ್ತಿರುವ ಸರ್ಕಾರ, ಇದೀಗ ಆ ಸಮೀಕ್ಷೆ ನಡೆಸಲು ಬೆಸ್ಕಾಂ (BESCOM) ಸಿಬ್ಬಂದಿಗೂ ಜವಾಬ್ದಾರಿ ವಹಿಸಿರುವುದರಿಂದ ಬೆಂಗಳೂರಿನ (Bengaluru) ಜನರಿಗೆ ಸಂಕಷ್ಟ ಎದುರಾಗಿದೆ ಎನ್ನಲಾಗಿದೆ. 2025 ರ ಆಗಸ್ಟ್ 23 ರಿಂದ ರಾಜಧಾನಿಯಲ್ಲೂ ಮೀಟರ್ ರೀಡರ್​​ಗಳಿಗೆ ಜಿಯೋ ಟ್ಯಾಗ್ ಮಾಡುವ ಕೆಲಸ ಕೊಟ್ಟಿರುವ ಸರ್ಕಾರ, ಆ ಮೂಲಕ ಜಾತಿ ಸಮೀಕ್ಷೆ ನಡೆಸುವ ಜವಾಬ್ದಾರಿ ವಹಿಸಿದೆ. ಇತ್ತ ಮೀಟರ್ ರೀಡರ್​ಗಳಿಗೆ ಈ ಕೆಲಸ ಕೊಟ್ಟಿರುವುದರಿಂದ ಅವರು ಸರಿಯಾದ ಸಮಯಕ್ಕೆ ರೀಡಿಂಗ್ ನೋಡಿ ಬಿಲ್ ಕೊಟ್ಟಿಲ್ಲ ಎಂಬ ಆರೋಪ ಕೇಳಿಬರಲು ಶುರುವಾಗಿದೆ. ಇದರಿಂದ ಕಳೆದ ಎರಡು ತಿಂಗಳಿಂದ ವಿದ್ಯುತ್ ಬಿಲ್ ದಿಢೀರ್ ಏರಿಕೆಯಾಗಿರವುದು ಜನರು ಕಂಗಾಲಾಗುವಂತೆ ಮಾಡಿದೆ.

ರಾಜಧಾನಿಯಲ್ಲಿ ಪ್ರತಿ ತಿಂಗಳು 11 ಅಥವಾ 12 ನೇ ತಾರೀಖಿನಂದು ಮೀಟರ್ ರೀಡಿಂಗ್ ತೆಗೆದುಕೊಂಡು ಬಿಲ್ ಕೊಡುತ್ತಿದ್ದ ಮೀಟರ್ ರೀಡರ್​​ಗಳು ಇದೀಗ ಬಿಲ್ ಕೊಡುವುದನ್ನು ವಿಳಂಬ ಮಾಡುತ್ತಿದ್ದಾರೆ. ಇದರಿಂದಾಗಿ ವಿದ್ಯುತ್ ಬಿಲ್ ಹೆಚ್ಚು ಬರುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.

ಗೃಹಜ್ಯೋತಿ ಫಲಾನುಭವಿಗಳಿಗೂ ನೂರಾರು ರೂ. ಬಿಲ್!

ಸರ್ಕಾರದ ಗೃಹಜ್ಯೋತಿ ಯೋಜನೆಯಡಿಯಲ್ಲಿ ಉಚಿತ ಕರೆಂಟ್ ಪಡೆಯುತ್ತಿದ್ದವರಿಗೂ ಕಳೆದೆರಡು ತಿಂಗಳಿಂದ ನೂರಾರು ರೂಪಾಯಿ ಬಿಲ್ ಬರುತ್ತಿದ್ದು, ಇತ್ತ ಉಚಿತ ವಿದ್ಯುತ್ ಲಿಮಿಟ್ ಮುಗಿದ ಬಳಿಕ ಹೆಚ್ಚುವರಿ ಶುಲ್ಕಗಳನ್ನು ಸೇರಿಸಿ ಬಿಲ್ ಕೊಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇತ್ತ ಮೀಟರ್ ರೀಡರ್​​ಗಳಿಗೆ ಜಾತಿ ಸಮೀಕ್ಷೆಯ ಕೆಲಸ ಕೊಟ್ಟು ಒತ್ತಡ ಹೇರಿರುವ ಸರ್ಕಾರ, ಉಚಿತ ವಿದ್ಯುತ್​​ಗೂ ಸದ್ದಿಲ್ಲದೇ ಕತ್ತರಿ ಹಾಕಿದೆ ಎಂದು ಜನ ಆರೋಪಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಜಾತಿಗಣತಿ ಶುರು: ಹಲವಡೆ ಸಿಗದ ಕಿಟ್, ಟ್ರೈನಿಂಗ್ ಇಲ್ಲ, ಸರ್ವರ್ ಸಮಸ್ಯೆ

ಸದ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯಡಿಯಲ್ಲಿ ಇನ್ನೂರು ಯೂನಿಟ್ ವಿದ್ಯುತ್ ಉಚಿತ ಕೊಡುತ್ತಿರುವ ಸರ್ಕಾರ, ಇದೀಗ ಹೆಚ್ಚಿನ ಬಿಲ್ ನೀಡಿ ಶಾಕ್ ಕೊಡುತ್ತಿರುವ ಆರೋಪ ಕೇಳಿಬಂದಿದೆ. ನಿಗದಿತ ಸಮಯದೊಳಗೆ ಬಿಲ್ ಕೊಟ್ಟು ಮೊತ್ತ ಕಟ್ಟಿಸಿಕೊಳ್ಳಬೇಕಿದ್ದ ಬೆಸ್ಕಾಂ ಇದೀಗ ಜನರಿಗೆ ಎದುರಾಗಿರುವ ಸಮಸ್ಯೆಗೆ ಯಾವ ರೀತಿ ಪರಿಹಾರ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ