AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಒಬ್ಬಂಟಿ ಮಹಿಳೆಯ ಕತ್ತುಹಿಸುಕಿ ಕೊಲೆ

ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯ ಕತ್ತು ಹಿಸುಕಿ ಕೊಲೆ(Murder) ಮಾಡಿದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರ(Bettadasanapura) ದಲ್ಲಿ ನಡೆದಿದೆ. ನೀಲಂ(30) ಮೃತ ರ್ದುದೈವಿ. ಪತಿ ಕೆಲಸಕ್ಕೆ ಹೋಗಿದ್ದಾಗ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಬೆಂಗಳೂರಿನಲ್ಲಿ ಒಬ್ಬಂಟಿ ಮಹಿಳೆಯ ಕತ್ತುಹಿಸುಕಿ ಕೊಲೆ
ಬೆಟ್ಟದಾಸನಪುರ ಮಹಿಳೆಯ ಕೊಲೆ
ರಾಮು, ಆನೇಕಲ್​
| Edited By: |

Updated on: Jan 04, 2024 | 6:01 PM

Share

ಬೆಂಗಳೂರು, ಜ.04: ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯ ಕತ್ತು ಹಿಸುಕಿ ಕೊಲೆ(Murder) ಮಾಡಿದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರ(Bettadasanapura) ದಲ್ಲಿ ನಡೆದಿದೆ. ನೀಲಂ(30) ಮೃತ ರ್ದುದೈವಿ. ಪತಿ ಕೆಲಸಕ್ಕೆ ಹೋಗಿದ್ದಾಗ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಮನೆಯಲ್ಲಿದ್ದ ಒಡವೆ, ಹಣ ಏನೂ ಕಳ್ಳತನವಾಗಿಲ್ಲ. ಹೀಗಾಗಿ ಯಾರೋ ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಎಲೆಕ್ಟ್ರಾನಿಕ್​ಸಿಟಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಧ್ಯಾಹ್ನ ಮಕ್ಕಳು ಶಾಲೆ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ

ಇನ್ನು ಪತಿ ಹಾರ್ಡ್​ವೇರ್​ ಶಾಪ್ ಜೊತೆ ಕಾಂಟ್ರಾಕ್ಟ್ ಕೆಲಸ ಮಾಡುತ್ತಿದ್ದ. ಮಧ್ಯಾಹ್ನ ಮಕ್ಕಳು ಶಾಲೆ ಮುಗಿಸಿ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಹೌದು, ಮಕ್ಕಳು ಮನೆಯಲ್ಲಿ ನೋಡಿದಾಗ ಹಾಲ್​ನಲ್ಲಿ ತಾಯಿ ಕೊಲೆಯಾಗಿ ಬಿದ್ದಿದ್ದಾರೆ. ಇದನ್ನು ನೋಡಿದ ಕೂಡಲೇ ತಂದೆಗೆ ಹೇಳಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಇನ್ನು ಮನೆಯಲ್ಲಿದ್ದ ಒಡವೆ, ಹಣ ಯಾವುದು ಕಳ್ಳತನವಾಗಿಲ್ಲದೆ ಇರುವುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:2023ರಲ್ಲಿ ಬೆಂಗಳೂರಲ್ಲಿ 207 ಕೊಲೆಗಳು; ಕ್ಷುಲ್ಲಕ, ಅಕ್ರಮ ಸಂಬಂಧಕ್ಕೆ ಹೆಚ್ಚು ಹತ್ಯೆ ಕೇಸ್ ದಾಖಲು

ಮಂಡಿಕಲ್​​​ ಕ್ರಾಸ್​​ಬಳಿ ಬೈಕ್​​​​ಗೆ ಟಿಪ್ಪರ್​​ ಡಿಕ್ಕಿ, ಬೈಕ್​​ ಸವಾರ ಸಾವು

ಚಿಕ್ಕಬಳ್ಳಾಪುರ: ತಾಲೂಕಿನ ಮಂಡಿಕಲ್​​​ ಕ್ರಾಸ್​​ಬಳಿ ಬೈಕ್​​​​ಗೆ ಟಿಪ್ಪರ್​​ ಡಿಕ್ಕಿಯಾಗಿ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಮ್ಮಗುಟ್ಟಹಳ್ಳಿ ಗ್ರಾಮದ ಕಾರ್ತಿಕ್​​(30) ಮೃತ ಬೈಕ್​​ ಸವಾರ. ಹಿಂಬದಿ ಬೈಕ್​​​ ಸವಾರ ಆನಂದ್​ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ