AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಜೂ, ಸಫಾರಿ, ಚಿಟ್ಟೆ ಪಾರ್ಕ್​ಗೆ ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡುವಾಗ ಎಚ್ಚರ

ಇತ್ತೀಚಿನ ದಿನಗಳಲ್ಲಿ ಆನ್​ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಪ್ರಸಿದ್ಧ ಪ್ರವಾಸಿ ತಾಣವೂ ಆಗಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನವನ್ನೂ ಸಹ ಸೈಬರ್ ವಂಚಕರು ಗುರಿಯಾಗಿಸಿದ್ದಾರೆ. ಬನ್ನೇರುಘಟ್ಟ ಜೈವಿಕ ಉದ್ಯಾನವನ ಹೆಸರಿನಲ್ಲಿ ನಕಲಿ ವೆಬ್​​ಸೈಟ್ ಆರಂಭಿಸಿ, ಟಿಕೆಟ್ ಹೆಸರಿನಲ್ಲಿ ಸಾರ್ವಜನಿಕರ ಹಣಕ್ಕೆ ಕನ್ನ ಹಾಕುತ್ತಿದ್ದಾರೆ. ಈ ಬಗ್ಗೆ ಪ್ರವಾಸಿಗರು ಎಚ್ಚರಿಕೆ ವಹಿಸುವಂತೆ ಉದ್ಯಾನವನ ಆಡಳಿತ ಮನವಿ ಮಾಡಿದೆ.

ಬನ್ನೇರುಘಟ್ಟ ಜೂ, ಸಫಾರಿ, ಚಿಟ್ಟೆ ಪಾರ್ಕ್​ಗೆ ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡುವಾಗ ಎಚ್ಚರ
ಬನ್ನೇರುಘಟ್ಟ ಜೂ, ಸಫಾರಿಗೆ ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡುವಾಗ ಎಚ್ಚರ
ರಾಮು, ಆನೇಕಲ್​
| Edited By: |

Updated on: Apr 29, 2025 | 9:29 AM

Share

ಆನೇಕಲ್, ಏಪ್ರಿಲ್ 29: ಬೆಂಗಳೂರು ಹೊರವಲಯದ ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನ (Bannerghatta National Park) ಹೆಸರಿನಲ್ಲಿ ಆನ್​ಲೈನ್ ವಂಚಕರು (Online Fraud) ನಕಲಿ ವೆಬ್​ಸೈಟ್ (Fake Website) ಆರಂಭಿಸಿ ಸಾರ್ವಜನಿಕರಿಗೆ ವಂಚನೆ ಎಸಗುತ್ತಿರುವುದು ಬೆಳಕಿಗೆ ಬಂದಿದೆ. ಬನ್ನೇರುಘಟ್ಟ ಜೂ, ಸಫಾರಿ, ಚಿಟ್ಟೆ ಪಾರ್ಕ್​ಗೆ ಆನ್​ಲೈನ್ ಮೂಲಕ ಟಿಕೆಟ್ ಪಡೆಯಲು ಮುಂದಾದ ಗ್ರಾಹಕರನ್ನು ಈ ನಕಲಿ ವೆಬ್​ಸೈಟ್ ಮೂಲಕ ಯಾಮಾರಿಸಲಾಗುತ್ತಿದೆ. ಇದರಿಂದಾಗಿ ಪ್ರವಾಸಿಗರು ಹಣ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಬನ್ನೇರುಘಟ್ಟ ಉದ್ಯಾನವನ ಹೆಸರಿನಲ್ಲಿ ವಂಚನೆ ಹೇಗೆ?

ಬೆಂಗಳೂರು ಹೊರವಲಯದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ಹೆಸರಿನಲ್ಲಿ ನಕಲಿ ವೆಬ್​ಸೈಟೊಂದು (https://bannerghattanationalpark.org) ಕಾರ್ಯಾಚರಿಸುತ್ತಿದೆ. ಬನ್ನೇರುಘಟ್ಟ ಜೂ, ಸಫಾರಿ, ಚಿಟ್ಟೆ ಪಾರ್ಕ್​​ಗೆ ಟಿಕೆಟ್ ಬುಕಿಂಗ್ ಹೆಸರಿನಲ್ಲಿ ವಂಚನೆ ಎಸಗಲಾಗುತ್ತಿದೆ. ನಕಲಿ ವೆಬ್​ಸೈಟ್​​ನಲ್ಲಿ ಡೊನೇಷನ್ ಲಿಂಕ್ ಇದ್ದು, ಅದರ ಮೇಲೆ ಕ್ಲಿಕ್ ಮಾಡಿದರೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯ ಲಿಂಕ್ ಎಂಬ ಪೇಜೊಂದು (payments@banbanjara.com) ತೆರೆದುಕೊಳ್ಳುತ್ತದೆ. ಸದ್ಯ, ಈವರೆಗೆ ಯಾವುದೇ ಪ್ರವಾಸಿಗರು ಮೋಸ ಹೋದ ಬಗ್ಗೆ ದೂರುಗಳನ್ನು ದಾಖಲಿಸಿಲ್ಲ.

‘ವೆಬ್​​ಸೈಟ್ ಪರಿಶೀಲನೆ ನಡೆಸಿದ ವೇಳೆ ಫೇಕ್ ವೆಬ್​ಸೈಟ್ ಪತ್ತೆಯಾಗಿದೆ. ಅದರಲ್ಲಿ ಬನ್ನೇರುಘಟ್ಟ ಜೂ, ಸಫಾರಿಗೆ ಟಿಕೆಟ್ ಬುಕ್ ಮಾಡಿದ್ದು ನನ್ನ ವೈಯಕ್ತಿಕ ಅಕೌಂಟ್​​ನಿಂದ 2 ಸಾವಿರ ರೂ. ಹಣ ಪಾವತಿ ಆಗಿದೆ. ಹಾಗಾಗಿ ಪ್ರವಾಸಿಗರು ಯಾರೂ ವಂಚನೆಗೆ ಒಳಗಾಗಬಾರದು’ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ
Image
‘ಭಾರತವನ್ನು ದ್ವೇಷಿಸುತ್ತೇನೆ’: ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್
Image
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ಸೌಲಭ್ಯ
Image
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
Image
ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆನ್​ಲೈನ್ ವಂಚನೆ: ಎಚ್ಚರದಿಂದಿರಿ

ಅಲ್ಲದೆ, ನಕಲಿ ವೆಬ್​ಸೈಟ್ ವಿಚಾರವಾಗಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಸೂರ್ಯಸೇನ್ ದೂರು ದಾಖಲಿಸಿದ್ದಾರೆ.

ಪ್ರವಾಸಿಗರೇ ಗಮನಿಸಿ

ಮೇಲೆ ಉಲ್ಲೇಖಿಸಿರುವ ವೆಬ್​​ಸೈಟ್​ಗಳು ನಕಲಿ ಆಗಿದ್ದು, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆನ್​​ಲೈನ್ ಟಿಕೇಟ್ ಬುಕಿಂಗ್‌ಗಾಗಿ ಅಧಿಕೃತ ವೆಬ್‌ಸೈಟ್ https://bannerughattabiopark.org/ ಇದನ್ನೇ ಬಳಸಬೇಕು ಎಂದು ಸೂರ್ಯಸೇನ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Cyber Crime: ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆನ್​ಲೈನ್ ವಂಚನೆ: ಈ ಸ್ಕ್ಯಾಮ್​ಗಳ ಬಗ್ಗೆ ಎಚ್ಚರದಿಂದಿರಿ

ಈಗಾಗಲೇ ಬ್ಯಾಂಕ್, ಷೇರು ಮಾರುಕಟ್ಟೆ ಹೂಡಿಕೆ, ಡಿಜಿಟಲ್ ಅರೆಸ್ಟ್ ಇತ್ಯಾದಿಗಳ ಮೂಲಕ ಸೈಬರ್ ಅಪರಾಧಿಗಳು ಜನರನ್ನು ವಂಚಿಸುವ ಪ್ರಕರಣಗಳು ಹೆಚ್ಚಾಗಿವೆ. ಇದೀಗ ಉದ್ಯಾನವನಗಳು, ಪ್ರವಾಸಿ ತಾಣಗಳ ಆನ್​​ಲೈನ್ ಬುಕಿಂಗ್ ಹೆಸರಿನಲ್ಲಿಯೂ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪ್ರವಾಸಿಗರು ಹೆಚ್ಚು ಎಚ್ಚರಿಕೆ ವಹಿಸಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ