AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದ ತಪ್ಪಿಸಿಕೊಳ್ಳಲು ಸ್ಪೀಡ್ ಆಗಿ ವಾಹನ ಚಲಾಯಿಸುವ ಸವಾರರೇ ಎಚ್ಚರ! ಈ ರಸ್ತೆಗಳಲ್ಲಿ ಬಾಯ್ತೆರೆದು ಕಾಯುತ್ತಿವೆ ಗುಂಡಿಗಳು

ರಾಜಧಾನಿಯಲ್ಲಿ ಕಳೆದ ಒಂದು ವಾರದಿಂದ ಮಳೆ ಆರಂಭವಾಗಿದೆ. ಮಳೆ ಬರುವ ವೇಳೆ ಬೈಕ್ ಮತ್ತು ವಾಹನ ಸವಾರರು ಬೇಗ ಮನೆ ತಲುಪಬೇಕು ಎಂದು ಸ್ಪೀಡ್ ಆಗಿ ವಾಹನ ಚಲಾಯಿಸುತ್ತಾರೆ. ಆದರೆ ವಾಹನ ಸವಾರರೇ ಎಚ್ಚರ ವಹಿಸಿ. ಏಕೆಂದರೆ ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿವೆ ನೂರಾರು ಡೆಡ್ಲಿ ಗುಂಡಿಗಳು.

ಮಳೆಯಿಂದ ತಪ್ಪಿಸಿಕೊಳ್ಳಲು ಸ್ಪೀಡ್ ಆಗಿ ವಾಹನ ಚಲಾಯಿಸುವ ಸವಾರರೇ ಎಚ್ಚರ! ಈ ರಸ್ತೆಗಳಲ್ಲಿ ಬಾಯ್ತೆರೆದು ಕಾಯುತ್ತಿವೆ ಗುಂಡಿಗಳು
ಬಾಯ್ತೆರೆದು ಕಾಯುತ್ತಿವೆ ಗುಂಡಿಗಳು
Kiran Surya
| Edited By: |

Updated on: May 13, 2024 | 10:12 AM

Share

ಬೆಂಗಳೂರು, ಮೇ.13: ಈಗಾಗಲೇ ಕಳೆದ ಒಂದು ವಾರದಿಂದ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ (Bengaluru Rain) ಜೋರಾಗಿ ಗಾಳಿ ಮಳೆ ಆರಂಭವಾಗಿದೆ. ರಾತ್ರಿ ವೇಳೆ ಮಳೆ ಸುರಿಯುವಾಗ ಬೈಕ್ ಸವಾರರು ಮಳೆಯಲ್ಲಿ ನೆನೆಯುವ ಮುನ್ನ ಮನೆ ಸೇರಿಕೊಳ್ಳಬೇಕೆಂದು ಸ್ಪೀಡ್ ಆಗಿ ವಾಹನ ಓಡಿಸಲು ಮುಂದಾಗ್ತಾರೆ. ಆದರೆ ನಗರದಲ್ಲಿರುವ ಡೆಡ್ಲಿ ಗುಂಡಿಗಳು (Potholes) ಗೊತ್ತಾಗದೆ ಗುಂಡಿಯಲ್ಲಿ ಬಿದ್ದು ಕೈಕಾಲು ಮುರಿದುಕೊಳ್ಳುವ ಸಾಧ್ಯತೆ ಹೆಚ್ಚು. ನಾವಿಲ್ಲಿ ನೀಡಿರುವ ಈ ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳಿದ್ದು ಈ ರಸ್ತೆಗಳಲ್ಲಿ ಸಂಚರಿಸುವಾಗ ಕೊಂಚ ಎಚ್ಚರ ವಹಿಸಿ.

ಹೊಸೂರು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ನೋಡಿದ್ರೆ ಈ ಗುಂಡಿಗಳಲ್ಲಿ ಯಾರಾದರೂ ಬಿದ್ರೆ ಖಂಡಿತವಾಗಿ ಕೈಕಾಲು ಮುರಿದುಕೊಳ್ಳುತ್ತಾರೆ ಅನ್ಸುತ್ತೆ.‌ ಇತ್ತ ಚಿನ್ನಯನಪಾಳ್ಯ ತಿರುವು ರೋಡ್ ನಲ್ಲಿರುವ ಗುಂಡಿಯ ಬಗ್ಗೆಯಂತು ಹೇಳೋದೆ ಬೇಡ ನೋಡಿದ್ರೆ ಗೊತ್ತಾಗುತ್ತದೆ ಅಮಾಯಕರ ಪ್ರಾಣ ತೆಗೆಯಲು ಈ ಗುಂಡಿ ಕಾಯ್ಕೊಂಡಿದೆ ಎಂದು. ಇನ್ನೂ ಲಕ್ಕಸಂದ್ರ ಜಂಕ್ಷನ್ ನಲ್ಲಿರುವ ಗುಂಡಿಗಳಂತೋ ವಾಹನ ಸವಾರರು ಯಾವ ಕಡೆ ಹೋಗಬೇಕೆಂದು ಗೊತ್ತಾಗದಷ್ಟು ಆ್ಯಂಗಲ್​ನಲ್ಲಿ ಗುಂಡಿಗಳು ಬಿದ್ದಿವೆ. ಈ ಗುಂಡಿಗಳಲ್ಲಿ ವಾಹನ ಚಾಲನೆ ಮಾಡಬೇಕಾದ್ರೆ ಚೂರು ನಿರ್ಲಕ್ಷ್ಯ ಮಾಡಿದ್ರು ಆಸ್ಪತ್ರೆ ಸೇರುವುದು ಗ್ಯಾರೆಂಟಿ. ಪ್ರತಿದಿನ ಈ ರೋಡ್ ನಲ್ಲಿ ಓಡಾಡುತ್ತೀನಿ ಯಾವಾಗಲೂ ಯಾರಾದರೂ ವಾಹನ ಸವಾರರು ಈ ಗುಂಡಿಗಳಲ್ಲಿ ಬೀಳುತ್ತಾನೆ ಇರುತ್ತಾರೆ. ದಯವಿಟ್ಟು ಇದನ್ನು ಮೊದಲು ಸರಿ ಪಡಿಸಿ ಎಂದು ಬೈಕ್ ಸವಾರ ಭರತ್ ಮನವಿ ಮಾಡುದ್ರು.

ಇದನ್ನೂ ಓದಿ: ವಯಸ್ಸಿಗೂ ಮೀರಿದ ಸಾಧನೆ; ವಿಶ್ವ ದಾಖಲೆ ಬರೆದ ಬೆಂಗಳೂರಿನ ನಾಲ್ಕು ತಿಂಗಳ ಪುಟ್ಟ ಕಂದ

ಒಟ್ನಲ್ಲಿ ಮಳೆ ಬರುವಾಗ ರೋಡ್ ಮೇಲೆ ನೀರು ಕಮ್ಮಿ ಆದ ಮೇಲೆ ಬೈಕ್ ಚಲಾಯಿಸುವುದು ಒಳ್ಳೆಯದು. ಇಲ್ಲಾಂದ್ರೆ ಗುಂಡಿಗಳು ಕಾಣದೆ ಅದರಲ್ಲಿ ಬೀಳ್ಬೋದು. ಇನ್ನು ಬೈಕ್​ನಲ್ಲಿ ಹಿಂದೆ ಹೆಂಡತಿ, ಮಕ್ಕಳು, ವಯಸ್ಸಾದವರು ಇದ್ರಂತೂ ಬೀ ಕೇರ್ ಫುಲ್. ನಿಮ್ಮ ವೇಗಕ್ಕೆ ಹಿಂದೆ ಕುಳಿತವ್ರು ಮುಗ್ಗರಿಸಿ ಬೀಳಬಹುದು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ