AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಭಗವದ್ಗೀತೆ ಸರ್ವಕಾಲಕ್ಕೂ ಶ್ರೇಷ್ಠ ಗ್ರಂಥ- ರಾಜನಾಥ್ ಸಿಂಗ್

ಸತ್ಯ, ಧರ್ಮ, ಅಹಿಂಸೆಯನ್ನು ಪ್ರತಿಪಾದಿಸುವ ಭಗವದ್ಗೀತೆ ಸರ್ವ ಕಾಲಕ್ಕೂ ಶ್ರೇಷ್ಠ ಗ್ರಂಥವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.

ಬೆಂಗಳೂರು: ಭಗವದ್ಗೀತೆ ಸರ್ವಕಾಲಕ್ಕೂ ಶ್ರೇಷ್ಠ ಗ್ರಂಥ- ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್​ ಸಿಂಗ್​​
TV9 Web
| Edited By: |

Updated on: Dec 03, 2022 | 7:57 PM

Share

ಬೆಂಗಳೂರು: ಸತ್ಯ, ಧರ್ಮ, ಅಹಿಂಸೆಯನ್ನು ಪ್ರತಿಪಾದಿಸುವ ಭಗವದ್ಗೀತೆ ಸರ್ವ ಕಾಲಕ್ಕೂ ಶ್ರೇಷ್ಠ ಗ್ರಂಥವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath singh) ತಿಳಿಸಿದರು. ನಾವು ಯಾವುದೇ ಪಠ್ಯ ಕಲಿಯಲು ಶಿಕ್ಷಕರ ಅವಶ್ಯಕತೆ ಇರುತ್ತದೆ. ಆದರೆ ಭಾವನೆಗಳಾದ ಶಾಂತ, ಕ್ರೌರ್ಯ, ಸಂತಸ, ದುಃಖ ಮುಂತಾದವುಗಳನ್ನು ಯಾರೂ ಕಲಿಸಿಲ್ಲ. ಇದು ನಮ್ಮಲ್ಲಿಯೇ ಪ್ರಕಟಗೊಳ್ಳುತ್ತದೆ ಎಂದರು.

ಇಂದು ವಸಂತಪುರದ ಇಸ್ಕಾನ್​ನ ಶ್ರೀ ರಾಜಾಧಿರಾಜ ಗೋವಿಂದ ಮಂದಿರದಲ್ಲಿ ಗೀತ ಜಯಂತಿಯ ಸಂದರ್ಭದಲ್ಲಿ ಏರ್ಪಡಿಸಲಾದ ‘ಗೀತ ದಾನ ಯಜ್ಞ ಮಹೋತ್ಸವ’ ವನ್ನು ಉದ್ಘಾಟಿಸಿ ಮಾತನಾಡಿದ ಅವರು ಭಗವದ್ಗೀತೆ ನಮ್ಮ ಜೀವನಕ್ಕೆ ಹತ್ತಿರವಾದದ್ದು. ನಾವು ಹೇಗೆ ಶೋಕದಿಂದ ಮುಕ್ತವಾಗಬಹುದೆಂದು ತಿಳಿಸಿಕೊಡುತ್ತದೆ. ಹಾಗೆಯೇ ಮೃತ್ಯುವಿನ ಭಯವನ್ನು ಹೋಗಲಾಡಿಸುತ್ತದೆ. ನಮ್ಮನ್ನು ಆಧ್ಯಾತ್ಮಿಕದ ಕಡೆ ಕರೆದೊಯ್ಯುತ್ತದೆ. ಎಷ್ಟೋ ಮಹಾಕವಿ, ಸಾಧಕರಿಗೆ ಇದು ಪ್ರೇರಣಾ ಶಕ್ತಿಯಾಗಿದೆ. ಭಗವದ್ಗೀತೆಯ ನೀತಿಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಸರಿಯಾದ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ನಾವು ಎಂದಿಗೂ ಸಕಾರಾತ್ಮಕವಾಗಿ ಆಲೋಚನೆ ಮಾಡಿ ಒಳ್ಳೆಯ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಅದೇ ತರನಾದ ಜೀವನ ಶೈಲಿಯನ್ನು ಮುಂದಿನ ಯುವ ಪೀಳಿಗೆಗೂ ತಲುಪಿಸಬೇಕು ಎಂದು ಹೇಳಿದರು.

ಭಗವದ್ಗೀತೆ ದೇವರ ವಾಣಿಯಾಗಿದೆ: ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಭಗವದ್ಗೀತೆ ದೇವರ ವಾಣಿಯಾಗಿದೆ. ಇದನ್ನು ಪಠಿಸುವುದರಿಂದ ನಮಗೆ ಶಾಂತಿ, ನೆಮ್ಮದಿ ಹಾಗೂ ಸಹನೆ ದೊರೆಯುತ್ತದೆ. ಅಲ್ಲದೆ ಬದುಕಿನ ದೃಷ್ಟಿಕೋನ ಬದಲಾಗಿ ಮನುಕುಲದ ಅಭಿವೃದ್ದಿ ಸಾಧ್ಯವಾಗುತ್ತದೆ. ಮಹಾಭಾರತದ ಕುರುಕ್ಷೇತ್ರ ಯುದ್ಧದಲ್ಲಿ ಕೃಷ್ಣನು ಅರ್ಜುನನಿಗೆ ಹೇಳಿದ ನೀತಿಪಾಠವಾಗಿದೆ. ಭಗವದ್ಗೀತೆ ಮನುಷ್ಯನ ಪಾಪ, ಪುಣ್ಯ, ಮರುಜನ್ಮ, ಕರ್ತವ್ಯ, ಬದುಕು ಮುಂತಾದವುಗಳ ಮೇಲೆ ಬೆಳಕು ಚೆಲ್ಲುತ್ತದೆ. ನಮ್ಮಲ್ಲಿನ ಎಷ್ಟೋ ಸಮಸ್ಯೆಗಳಿಗೆ ಭಗವದ್ಗೀತೆಯಲ್ಲಿ ಪರಿಹಾರ ಉಂಟು‌. ಇಸ್ಕಾನ್​ನವರು ನಮ್ಮ ದೇಶ ಮಾತ್ರವಲ್ಲದೆ ವಿದೇಶದಲ್ಲಿ ಸಹ ನಮ್ಮ ಸಂಸ್ಕತಿಯನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಭಾರತದಲ್ಲಿ ಭಕ್ತಿ ಚಳುವಳಿಯನ್ನು ಮತ್ತೆ ತರುವಲ್ಲಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಇಸ್ಕಾನ್ ಅಕ್ಷಯ ಪಾತ್ರೆ ಅಧ್ಯಕ್ಷರಾದ ಮಧುಪಂಡಿತ್ ದಾಸ್, ಕಂದಾಯ ಸಚಿವ ಆರ್.ಅಶೋಕ್, ಸಂಸದ ತೇಜಸ್ಚಿ ಸೂರ್ಯ, ಶಾಸಕ ಎಂ‌. ಕೃಷ್ಣಪ್ಪ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌