AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿ ಭಾಷಾ ಪ್ರೇಮ ಮೆರೆದ ಚಂದ್ರ ಆರ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಎಂದು ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಭಾಗ್ಯವತಿ ಅಮರೇಶ್

ಕೆನಡ ದೇಶದ ಸಂಸದ ಚಂದ್ರಕಾಂತ್ ಆರ್ಯರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅರಣ್ಯ ಅಭಿವೃದ್ದಿ ನಿಗಮದ ನಿರ್ದೇಶಕರಾದ ಭಾಗ್ಯವತಿ ಅಮರೇಶ್ ಮನವಿ ಪತ್ರ ಸಲ್ಲಿಸಿದ್ದಾರೆ.

ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿ ಭಾಷಾ ಪ್ರೇಮ ಮೆರೆದ ಚಂದ್ರ ಆರ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಎಂದು ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಭಾಗ್ಯವತಿ ಅಮರೇಶ್
ಭಾಗ್ಯವತಿ ಅಮರೇಶ್, ಚಂದ್ರ ಆರ್ಯ
TV9 Web
| Edited By: |

Updated on:May 20, 2022 | 10:43 PM

Share

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪುತ್ರ ಕೆನಡಾದ ಸಂಸದ ಚಂದ್ರ ಆರ್ಯ(Chandra Arya) ಅವರು ಕೆನಡಾದ ಪಾರ್ಲಿಮೆಂಟ್ ಭವನದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸುವಾಗ ಕನ್ನಡದಲ್ಲಿ ಮಾತನಾಡಿ ಭಾಷಾ ಪ್ರೇಮ ಮೆರೆದಿದ್ದಾರೆ. ಅವರು ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ವಿಡಿಯೋ ರಾಜ್ಯದಲ್ಲಿ ಫುಲ್ ವೈರಲ್ ಆಗಿತ್ತು. ಕನ್ನಡಿಗರೆಲ್ಲರೂ ಅವರ ಭಾಷಾ ಪ್ರೇಮವನ್ನು ಕೊಂಡಾಡಿದರು. ಸದ್ಯ ಈಗ ಕೆನಡ ದೇಶದ ಸಂಸದ ಚಂದ್ರ ಆರ್ಯರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ(Kannada Rajyotsava Award) ನೀಡಿ ಗೌರವಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ(Basavaraj Bommai) ಅರಣ್ಯ ಅಭಿವೃದ್ದಿ ನಿಗಮದ ನಿರ್ದೇಶಕರಾದ ಭಾಗ್ಯವತಿ ಅಮರೇಶ್(Bhagyawati Amaresh) ಮನವಿ ಪತ್ರ ಸಲ್ಲಿಸಿದ್ದಾರೆ.

ಕರ್ನಾಟಕದ ಹೆಮ್ಮೆಯ ಪುತ್ರ ಕೆನಡ ದೇಶದ ಸಂಸದ ಚಂದ್ರ ಆರ್ಯ ರವರು ಕೆನಡ ಪಾರ್ಲಿಮೆಂಟ್ ಭವನದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸುವಾಗ ಕನ್ನಡ ಭಾಷೆಯನ್ನು ಬಳಸುವ ಮುಖಾಂತರ ಇಡೀ ಕರ್ನಾಟಕ ಮತ್ತು ಭಾರತದ ಗಮನ ಸೆಳೆದ್ದಿದ್ದಾರೆ. ಶ್ರೀಮಾನ್ ಚಂದ್ರ ಆರ್ಯ ರವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಅವರ ಮುಖದಲ್ಲಿದ್ದ ಆನಂದ ವರ್ಣಿಸಲು ಅಸಾಧ್ಯ. ಹೃದಯ ಪೂರ್ವಕವಾಗಿ ತನ್ನ ಮಾತೃ ಭಾಷೆಯನ್ನು ತಾನು ಹುಟ್ಟಿದ ರಾಜ್ಯ, ಜಿಲ್ಲೆ ಮತ್ತು ಊರನ್ನು ಹೇಳುತ್ತಾ ಜೊತೆಗೆ ರಾಷ್ಟ್ರಕವಿ ಕುವೆಂಪು ರವರನ್ನು ಮತ್ತು ವರನಟ ಡಾ. ರಾಜಕುಮಾರ್ ರವರನ್ನು ನೆನೆಸಿಕೊಂಡು ಪ್ರಮಾಣ ವಚನ ಸ್ವೀಕರಿಸಿ ಕನ್ನಡ ಭಾಷೆ ಮತ್ತು ಕರ್ನಾಟಕದ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ. ಇದನ್ನೂ ಓದಿ: ರವಿಶಂಕರ್ ಮಗ ಹಾಗೂ ನನ್ನ ಮಗ ಇಬ್ಬರೂ ಚಿತ್ರರಂಗಕ್ಕೆ ಬರ್ತಿದಾರೆ ಎಂದ ಸಾಯಿಕುಮಾರ್

ಇವರನ್ನು ನವಂಬರ್ ಒಂದನೇ ತಾರೀಖಿನಂದು ರಾಜ್ಯಕ್ಕೆ ವಿಶೇಷ ಆಹ್ವಾನಿತರಾಗಿ ಕರೆಸಿಕೊಂಡು ಕರ್ನಾಟಕ ರಾಜ್ಯ ಸರ್ಕಾರದಿಂದ ವಿತರಿಸುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಟ್ಟು ಗೌರವಿಸಬೇಕೆಂದು ನನ್ನ ಪ್ರಾರ್ಥನೆ. ನನ್ನ ಮನವಿಯನ್ನು ತಾವು ಜಾರಿಗೆ ತರುತ್ತೀರೆಂದು ನಂಬಿರುತ್ತೇನೆ ಎಂದು ಭಾಗ್ಯವತಿ ಅಮರೇಶ್ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. chandra arya

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಾರು ಈ ಚಂದ್ರ ಆರ್ಯ? ಚಂದ್ರ ಆರ್ಯ 1963ರಲ್ಲಿ ತುಮಕೂರು ಜಿಲ್ಲೆ, ಶಿರಾ ತಾಲೂಕಿನ ದ್ವಾರಾಳು ಗ್ರಾಮದಲ್ಲಿ ಜನಿಸಿದವರು. ಇವರು ಪ್ರಸ್ತುತ ಕೆನಡಾದಲ್ಲಿ ನೆಪೆನ್‌ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. 2015ರ ಫೆಡರಲ್‌ ಚುನಾವಣೆ ಮತ್ತು 2019ರಲ್ಲಿ ನಡೆದ ಚುನಾವಣೆಗಳಲ್ಲಿ ಪುನಾರಾಯ್ಕೆಯಾಗಿದ್ದಾರೆ. ಪ್ರಸ್ತುತ ಕೆನಡಾದ ಅಂತಾರಾಷ್ಟ್ರಿಯ ವ್ಯಾಪಾರ ಸಮಿತಿ ಸದಸ್ಯರು ಆಗಿದ್ದಾರೆ. 58 ವರ್ಷದ ಚಂದ್ರ ಆರ್ಯ ಅವರು ಸದ್ಯ ಕೆನಡಾದ ಓಂಟಾರಿಯೋದಲ್ಲಿ ನೆಲೆಸಿದ್ದಾರೆ.

Published On - 10:42 pm, Fri, 20 May 22

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​