AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿ ಭಾಷಾ ಪ್ರೇಮ ಮೆರೆದ ಚಂದ್ರ ಆರ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಎಂದು ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಭಾಗ್ಯವತಿ ಅಮರೇಶ್

ಕೆನಡ ದೇಶದ ಸಂಸದ ಚಂದ್ರಕಾಂತ್ ಆರ್ಯರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅರಣ್ಯ ಅಭಿವೃದ್ದಿ ನಿಗಮದ ನಿರ್ದೇಶಕರಾದ ಭಾಗ್ಯವತಿ ಅಮರೇಶ್ ಮನವಿ ಪತ್ರ ಸಲ್ಲಿಸಿದ್ದಾರೆ.

ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿ ಭಾಷಾ ಪ್ರೇಮ ಮೆರೆದ ಚಂದ್ರ ಆರ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಎಂದು ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಭಾಗ್ಯವತಿ ಅಮರೇಶ್
ಭಾಗ್ಯವತಿ ಅಮರೇಶ್, ಚಂದ್ರ ಆರ್ಯ
TV9 Web
| Updated By: ಆಯೇಷಾ ಬಾನು|

Updated on:May 20, 2022 | 10:43 PM

Share

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪುತ್ರ ಕೆನಡಾದ ಸಂಸದ ಚಂದ್ರ ಆರ್ಯ(Chandra Arya) ಅವರು ಕೆನಡಾದ ಪಾರ್ಲಿಮೆಂಟ್ ಭವನದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸುವಾಗ ಕನ್ನಡದಲ್ಲಿ ಮಾತನಾಡಿ ಭಾಷಾ ಪ್ರೇಮ ಮೆರೆದಿದ್ದಾರೆ. ಅವರು ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ವಿಡಿಯೋ ರಾಜ್ಯದಲ್ಲಿ ಫುಲ್ ವೈರಲ್ ಆಗಿತ್ತು. ಕನ್ನಡಿಗರೆಲ್ಲರೂ ಅವರ ಭಾಷಾ ಪ್ರೇಮವನ್ನು ಕೊಂಡಾಡಿದರು. ಸದ್ಯ ಈಗ ಕೆನಡ ದೇಶದ ಸಂಸದ ಚಂದ್ರ ಆರ್ಯರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ(Kannada Rajyotsava Award) ನೀಡಿ ಗೌರವಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ(Basavaraj Bommai) ಅರಣ್ಯ ಅಭಿವೃದ್ದಿ ನಿಗಮದ ನಿರ್ದೇಶಕರಾದ ಭಾಗ್ಯವತಿ ಅಮರೇಶ್(Bhagyawati Amaresh) ಮನವಿ ಪತ್ರ ಸಲ್ಲಿಸಿದ್ದಾರೆ.

ಕರ್ನಾಟಕದ ಹೆಮ್ಮೆಯ ಪುತ್ರ ಕೆನಡ ದೇಶದ ಸಂಸದ ಚಂದ್ರ ಆರ್ಯ ರವರು ಕೆನಡ ಪಾರ್ಲಿಮೆಂಟ್ ಭವನದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸುವಾಗ ಕನ್ನಡ ಭಾಷೆಯನ್ನು ಬಳಸುವ ಮುಖಾಂತರ ಇಡೀ ಕರ್ನಾಟಕ ಮತ್ತು ಭಾರತದ ಗಮನ ಸೆಳೆದ್ದಿದ್ದಾರೆ. ಶ್ರೀಮಾನ್ ಚಂದ್ರ ಆರ್ಯ ರವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಅವರ ಮುಖದಲ್ಲಿದ್ದ ಆನಂದ ವರ್ಣಿಸಲು ಅಸಾಧ್ಯ. ಹೃದಯ ಪೂರ್ವಕವಾಗಿ ತನ್ನ ಮಾತೃ ಭಾಷೆಯನ್ನು ತಾನು ಹುಟ್ಟಿದ ರಾಜ್ಯ, ಜಿಲ್ಲೆ ಮತ್ತು ಊರನ್ನು ಹೇಳುತ್ತಾ ಜೊತೆಗೆ ರಾಷ್ಟ್ರಕವಿ ಕುವೆಂಪು ರವರನ್ನು ಮತ್ತು ವರನಟ ಡಾ. ರಾಜಕುಮಾರ್ ರವರನ್ನು ನೆನೆಸಿಕೊಂಡು ಪ್ರಮಾಣ ವಚನ ಸ್ವೀಕರಿಸಿ ಕನ್ನಡ ಭಾಷೆ ಮತ್ತು ಕರ್ನಾಟಕದ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ. ಇದನ್ನೂ ಓದಿ: ರವಿಶಂಕರ್ ಮಗ ಹಾಗೂ ನನ್ನ ಮಗ ಇಬ್ಬರೂ ಚಿತ್ರರಂಗಕ್ಕೆ ಬರ್ತಿದಾರೆ ಎಂದ ಸಾಯಿಕುಮಾರ್

ಇವರನ್ನು ನವಂಬರ್ ಒಂದನೇ ತಾರೀಖಿನಂದು ರಾಜ್ಯಕ್ಕೆ ವಿಶೇಷ ಆಹ್ವಾನಿತರಾಗಿ ಕರೆಸಿಕೊಂಡು ಕರ್ನಾಟಕ ರಾಜ್ಯ ಸರ್ಕಾರದಿಂದ ವಿತರಿಸುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಟ್ಟು ಗೌರವಿಸಬೇಕೆಂದು ನನ್ನ ಪ್ರಾರ್ಥನೆ. ನನ್ನ ಮನವಿಯನ್ನು ತಾವು ಜಾರಿಗೆ ತರುತ್ತೀರೆಂದು ನಂಬಿರುತ್ತೇನೆ ಎಂದು ಭಾಗ್ಯವತಿ ಅಮರೇಶ್ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. chandra arya

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಯಾರು ಈ ಚಂದ್ರ ಆರ್ಯ? ಚಂದ್ರ ಆರ್ಯ 1963ರಲ್ಲಿ ತುಮಕೂರು ಜಿಲ್ಲೆ, ಶಿರಾ ತಾಲೂಕಿನ ದ್ವಾರಾಳು ಗ್ರಾಮದಲ್ಲಿ ಜನಿಸಿದವರು. ಇವರು ಪ್ರಸ್ತುತ ಕೆನಡಾದಲ್ಲಿ ನೆಪೆನ್‌ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. 2015ರ ಫೆಡರಲ್‌ ಚುನಾವಣೆ ಮತ್ತು 2019ರಲ್ಲಿ ನಡೆದ ಚುನಾವಣೆಗಳಲ್ಲಿ ಪುನಾರಾಯ್ಕೆಯಾಗಿದ್ದಾರೆ. ಪ್ರಸ್ತುತ ಕೆನಡಾದ ಅಂತಾರಾಷ್ಟ್ರಿಯ ವ್ಯಾಪಾರ ಸಮಿತಿ ಸದಸ್ಯರು ಆಗಿದ್ದಾರೆ. 58 ವರ್ಷದ ಚಂದ್ರ ಆರ್ಯ ಅವರು ಸದ್ಯ ಕೆನಡಾದ ಓಂಟಾರಿಯೋದಲ್ಲಿ ನೆಲೆಸಿದ್ದಾರೆ.

Published On - 10:42 pm, Fri, 20 May 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ