AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bandh: ಬಂದ್​ನಿಂದ ಬೆಂಗಳೂರಿಗರಿಗೆ ಎದುರಾಗಲಿದೆ ಟ್ರಾಫಿಕ್ ಕಿರಿಕಿರಿ, ಪೊಲೀಸರಿಂದ ಹೈಅಲರ್ಟ್‌

ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಯ ವಿರುದ್ಧ ಭಾರತ್ ಬಂದ್ಗೆ ಕರೆ ನೀಡಿದ್ದಾರೆ. ಯಾರಿಗೂ ತೊಂದ್ರೆ ಮಾಡದೆ ಪ್ರತಿಭಟನೆ ನಡೆಸಿ ಅಂತಾ ರಾಜ್ಯ ಸರ್ಕಾರ ಖಡಕ್ ವಾರ್ನಿಂಗ್ ಕೊಟ್ಟಿದೆ. ಇಷ್ಟಾದ್ರು ಇವತ್ತು ಹೆದ್ದಾರಿ ತಡೆ, ಱಲಿಯಿಂದಾಗಿ ಟ್ರಾಫಿಕ್ ಕಿರಿಕಿರಿ ಎದುರಾಗಲಿದೆ.

Bharat Bandh: ಬಂದ್​ನಿಂದ ಬೆಂಗಳೂರಿಗರಿಗೆ ಎದುರಾಗಲಿದೆ ಟ್ರಾಫಿಕ್ ಕಿರಿಕಿರಿ, ಪೊಲೀಸರಿಂದ ಹೈಅಲರ್ಟ್‌
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 27, 2021 | 7:37 AM

Share

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಬಂದ್ಗೆ ಮುಂದಾಗಿದ್ದು ಸಿಲಿಕಾನ್ ಸಿಟಿಯ 4 ಭಾಗಗಳಿಂದ ಇಂದು ಪ್ರತಿಭಟನಾ ಱಲಿ ಆರಂಭವಾಗಿದೆ. ಹೀಗಾಗಿ ಬೆಂಗಳೂರಿಗರಿಗೆ ಟ್ರಾಫಿಕ್ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಆದ್ರೆ ಬೆಂಗಳೂರಿನಲ್ಲಿ ಬಸ್ಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಹಾಗೂ ಮಾರುಕಟ್ಟೆ, ಹೋಟೆಲ್, ಅಂಗಡಿಗಳು ಓಪನ್ ಆಗಿವೆ.

ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಯ ವಿರುದ್ಧ ಭಾರತ್ ಬಂದ್ಗೆ ಕರೆ ನೀಡಿದ್ದಾರೆ. ಯಾರಿಗೂ ತೊಂದ್ರೆ ಮಾಡದೆ ಪ್ರತಿಭಟನೆ ನಡೆಸಿ ಅಂತಾ ರಾಜ್ಯ ಸರ್ಕಾರ ಖಡಕ್ ವಾರ್ನಿಂಗ್ ಕೊಟ್ಟಿದೆ. ಇಷ್ಟಾದ್ರು ಇವತ್ತು ಹೆದ್ದಾರಿ ತಡೆ, ಱಲಿಯಿಂದಾಗಿ ಟ್ರಾಫಿಕ್ ಕಿರಿಕಿರಿ ಎದುರಾಗಲಿದೆ. ಸಾಮಾನ್ಯ ದಿನಗಳಲ್ಲೇ ಟ್ರಾಫಿಕ್ನಲ್ಲಿ ಸಿಲುಕಿ ಒದ್ದಾಡುವ ಬೆಂಗಳೂರಿಗರಿಗೆ ವಾರದ ಆರಂಭದಲ್ಲೇ ಕಿರಿಕಿರಿ ಎದುರಾಗಲಿದೆ.

ಬೆಂಗಳೂರಿನಾದ್ಯಂತ ಪೊಲೀಸರಿಂದ ಹೈಅಲರ್ಟ್‌ ಇನ್ನು ಬಂದ್ ಹಿನ್ನೆಲೆ ಬೆಂಗಳೂರಿನಾದ್ಯಂತ ಪೊಲೀಸರು ಹೈಅಲರ್ಟ್‌ ಆಗಿದ್ದಾರೆ. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 12 ಡಿಸಿಪಿ, ಎಲ್ಲಾ ಎಸಿಪಿಗಳು, 120ಕ್ಕೂ ಹೆಚ್ಚು ಇನ್ಸ್‌ಪೆಕ್ಟರ್‌ಗಳು, 150ಕ್ಕೂ ಹೆಚ್ಚು ಸಬ್‌ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಭದ್ರತೆಗಾಗಿ ಇಂದು 5 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ಮುಂಜಾನೆ 5 ಗಂಟೆಯಿಂದಲೇ ಪೊಲೀಸರು ತಮ್ಮ ಕರ್ತವ್ಯದಲ್ಲಿ ತೊಡಗಿದ್ದಾರೆ. ಪ್ರತಿ ವಿಭಾಗದಲ್ಲಿ ಡಿಸಿಪಿಗಳ ನೇತೃತ್ವದಲ್ಲಿ ಬಂದೋಬಸ್ತ್‌ ಮಾಡಲಾಗಿದೆ. ನಗರದ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಫ್ರೀಡಂಪಾರ್ಕ್‌, ಟೌನ್‌ಹಾಲ್‌ನಲ್ಲಿ ಹೆಚ್ಚುವರಿ ಭದ್ರತೆ ಮಾಡಲಾಗಿದ್ದು ಹೆಚ್ಚುವರಿಯಾಗಿ KSRP, CAR ತುಕಡಿ ನಿಯೋಜನೆ ಮಾಡಲಾಗಿದೆ.

ಸಾರ್ವಜನಿಕರ ದೈನಂದಿನ ಕೆಲಸಕ್ಕೆ ಅಡ್ಡಿಪಡಿಸುವಂತಿಲ್ಲ. ಇಂದು ಯಾವುದೇ ರಸ್ತೆ ತಡೆಗೆ ಅನುಮತಿ ನೀಡಿಲ್ಲ. ಈವರೆಗೂ ಯಾರೂ ಮೆರವಣಿಗೆಗೆ ಅನುಮತಿ ಕೇಳಿಲ್ಲ. ಪ್ರತಿಭಟನೆ ಹೆಸರಿನಲ್ಲಿ ನಿಯಮ ಉಲ್ಲಂಘಿಸುವಂತಿಲ್ಲ. ದುಷ್ಕೃತ್ಯಗಳಲ್ಲಿ ಭಾಗಿಯಾದ್ರೆ ಪೊಲೀಸರಿಂದ ಕಠಿಣಕ್ರಮ ಕೈಗೊಳ್ಳಲಾಗುತ್ತೆ.

ಪ್ರತಿಭಟನಾ ಱಲಿ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದ್ದು ಮೈಸೂರು ರಸ್ತೆ, ಕೆ.ಆರ್.ಪುರಂ, ಮಾಗಡಿ ರಸ್ತೆ, ಹೊಸೂರು ರಸ್ತೆ ಮಾರ್ಗದಲ್ಲಿ ಬರಲಿವೆ. ಬೆಂಗಳೂರಿನ ಹಲವೆಡೆ ಕಾಮಗಾರಿಗಳು ನಡೆಯುತ್ತಿವೆ. ಕಾಮಗಾರಿಗಳ ಜತೆಗೆ ಱಲಿ ಹಿನ್ನೆಲೆ ಟ್ರಾಫಿಕ್ ಜಾಮ್? ಸಮಸ್ಯೆ ಎದುರಾಗಲಿದೆ. ಹೀಗಾಗಿ ಬೇರೆ ಭಾಗಗಳಿಂದ ಬೆಂಗಳೂರಿಗೆ ಬರುವವರು ಎಚ್ಚರ ವಹಿಸಬೇಕು.

ಇದನ್ನೂ ಓದಿ: Petrol Price Today: ಇಂದು ಡೀಸೆಲ್​ ಬೆಲೆ ಸ್ಥಿರ; ಸತತ 3 ವಾರಗಳಿಂದ ಪೆಟ್ರೋಲ್​ ದರದಲ್ಲಿಯೂ ಬದಲಾವಣೆಗಳಿಲ್ಲ!

Published On - 7:36 am, Mon, 27 September 21

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ