Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲೆ ಜೀವಾ ಆತ್ಮಹತ್ಯೆ ಕೇಸ್​​: ಹೈಕೋರ್ಟ್​​ಗೆ ವರದಿ ಸಲ್ಲಿಸಿದ ಎಸ್ಐಟಿ, ಸ್ಫೋಟಕ ಸತ್ಯ ಬಯಲು

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಅವ್ಯವಹಾರದಲ್ಲಿ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿ ಎಸ್ಐಟಿ ಇಂದು ಹೈಕೋರ್ಟ್​​ಗೆ ವರದಿ ಸಲ್ಲಿಸಿದೆ. ಎಸ್ಐಟಿ ಹೈಕೋರ್ಟ್‌ಗೆ ಸಲ್ಲಿಸಿರುವ 2300 ಪುಟಗಳ ವರದಿಯಲ್ಲಿ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಡಿವೈಎಸ್ಪಿ ಕನಕಲಕ್ಷ್ಮೀ ಅವರ ಕಿರುಕುಳ ಸಾಬೀತಾಗಿದೆ.

ವಕೀಲೆ ಜೀವಾ ಆತ್ಮಹತ್ಯೆ ಕೇಸ್​​: ಹೈಕೋರ್ಟ್​​ಗೆ ವರದಿ ಸಲ್ಲಿಸಿದ ಎಸ್ಐಟಿ, ಸ್ಫೋಟಕ ಸತ್ಯ ಬಯಲು
ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 13, 2025 | 11:47 AM

ಬೆಂಗಳೂರು, ಏಪ್ರಿಲ್​ 13: ಭೋವಿ ನಿಗಮ ಹಗರಣ (Bhovi Corporation Scam) ಸಂಬಂಧ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ (SIT) ಅಧಿಕಾರಿಗಳು ಇದೀಗ ಒಟ್ಟು 2,300 ಪುಟಗಳ ಅಂತಿಮ ವರದಿಯನ್ನು ಸಿದ್ಧಪಡಿಸಿ ಹೈಕೋರ್ಟ್​​ಗೆ ಸಲ್ಲಿಸಿದ್ದಾರೆ. ಐಪಿಎಸ್​ ಅಧಿಕಾರಿಗಳಾದ ವಿನಾಯಕ್ ವರ್ಮಾ, ಅಕ್ಷಯ್ ಮಚೀಂದ್ರ, ನಿಶಾ ಜೇಮ್ಸ್ ನೇತೃತ್ವದ ವಿಶೇಷ ತನಿಖಾ ತಂಡದಿಂದ ವರದಿ ಸಲ್ಲಿಕೆ ಮಾಡಲಾಗಿದೆ. ಸಾಕ್ಷಿದಾರರ ಹೇಳಿಕೆ, ವಿಡಿಯೋ ಸಾಕ್ಷ್ಯಗಳ ಸಮೇತ ವರದಿ ನೀಡಿದ್ದು, ಜೀವಾಗೆ ಡಿವೈಎಸ್​ಪಿ ಕನಕಲಕ್ಷ್ಮೀ ಕಿರುಕುಳ, ಹಿಂಸೆ ನೀಡಿರೋದು ಸಾಬೀತಾಗಿದೆ.

ಡಿಸೆಂಬರ್​​ನಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಸೂಚಿಸಿತ್ತು. ಸದ್ಯ ಹೈಕೋರ್ಟ್​ ಸೂಚನೆಯಂತೆ ಎಸ್ಐಟಿಯಿಂದ ವರದಿ ಸಲ್ಲಿಕೆಯಾಗಿದ್ದು, ತನಿಖಾ ತಂಡದ ವರದಿಗೆ ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿದೆ.

ಎಸ್ಐಟಿ ಸಲ್ಲಿಸಿದ ವರದಿಯಲ್ಲಿ ಏನಿದೆ?

ಜೀವಾ ವಿಚಾರಣೆ ವೇಳೆ ಚಿತ್ರೀಕರಿಸಲಾಗಿದ್ದ ಕೆಲವು ವಿಡಿಯೋ ಡಿಲೀಟ್ ಆಗಿದ್ದವು. ಜೀವಾರನ್ನು ವಿವಸ್ತ್ರಗೊಳಿಸಿರುವುದು, ಇತರೆ ಕೆಲ ವಿಡಿಯೋಗಳು ಇರಲಿಲ್ಲ. ಎಫ್​ಎಸ್​ಎಲ್​ ಮೂಲಕ ಮರು ಸಂಗ್ರಹಿಸಿದಾಗ ಆ ವಿಡಿಯೋಗಳು ಪತ್ತೆಯಾದವು. ಡೆತ್​ನೋಟ್​ನಲ್ಲಿ ಜೀವಾ ಮಾಡಿದ್ದ ಬಹುತೇಕ ಆರೋಪಗಳು ಸಾಬೀತಾಗಿದೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಅಗ್ನಿ ಅವಘಡ: 20ಕ್ಕೂ ಹೆಚ್ಚು ಶೆಡ್​ಗಳು ಬೆಂಕಿಗಾಹುತಿ
Image
ಬೆಂಗಳೂರು ಕರಗ ಶಕ್ತ್ಯೋತ್ಸವ ವೇಳೆ ಗಲಾಟೆ: ಯುವಕರಿಗೆ ಥಳಿತ​
Image
ಭೋವಿ ನಿಗಮ ಬಹುಕೋಟಿ ಹಗರಣ​: ಅಕ್ರಮ ಹಣ ವರ್ಗಾವಣೆ ಪತ್ತೆ ಮಾಡಿದ ED
Image
ಅವ್ಯವಹಾರ ಆರೋಪ; ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ CID ಅಧಿಕಾರಿಗಳ ದಾಳಿ

ಇದನ್ನೂ ಓದಿ: ಭೋವಿ ನಿಗಮ ಬಹುಕೋಟಿ ಹಗರಣ​: ಅಕ್ರಮ ಹಣ ವರ್ಗಾವಣೆ ಪತ್ತೆ, ಮಹತ್ವದ ದಾಖಲೆ ಕಲೆಹಾಕಿದ ED

ನ.22ರಂದು ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ವಕೀಲೆ ಜೀವಾ ಆತ್ಮಹತ್ಯೆ ನಡೆದಿತ್ತು. DySP ಕನಕಲಕ್ಷ್ಮೀ ಕಿರುಕುಳದ ಬಗ್ಗೆ 13 ಪುಟಗಳ ಡೆತ್​ನೋಟ್​​ನಲ್ಲಿ ಜೀವಾ ಬರೆದಿದ್ದರು. ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತುದ್ದಂತೆ ಬನಶಂಕರಿ ಠಾಣೆಯಿಂದ ಪ್ರಕರಣ ಎಸ್ಐಟಿಗೆ ವರ್ಗಾವಣೆಯಾಗಿತ್ತು. ಬಳಿಕ ಹೈಕೋರ್ಟ್​ ಸಿಬಿಐ ಅಧಿಕಾರಿಗಳನ್ನೂ ಒಳಗೊಂಡಂತೆ SIT ರಚಿಸಿತ್ತು.

ಮಾ.11ರಂದು DySP ಕನಕಲಕ್ಷ್ಮೀ ಬಂಧಿಸಿ ವಿಚಾರಣೆ ಮಾಡಿದ್ದ SIT, ಸದ್ಯ ತನಿಖೆ ಪೂರ್ಣಗೊಳಿಸಿ ಎಸ್ಐಟಿಯಿಂದ ಅಂತಿಮ ವರದಿ ಸಲ್ಲಿಸಲಾಗಿದೆ. ಆದರೆ ವಿಚಾರಣಾಧೀನ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸೋದು ಬಾಕಿ ಇದೆ. ಏಕೆಂದರೆ ಕನಕಲಕ್ಷ್ಮೀ ಸರ್ಕಾರಿ ಅಧಿಕಾರಿ ಆಗಿರುವುದರಿಂದ ಪ್ರಕರಣದ ಚಾರ್ಜ್​​ಶೀಟ್ ಸಲ್ಲಿಸಲು ಪ್ರಾಸಿಕ್ಯೂಷನ್ ಅನುಮತಿ ಬೇಕು. ಸದ್ಯ ಪ್ರಾಸಿಕ್ಯೂಷನ್ ಅನುಮತಿಗಾಗಿ SIT ಅಧಿಕಾರಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ: ಕೋಟ್ಯಂತರ ರೂ. ಅವ್ಯವಹಾರ ಆರೋಪ; ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳ ದಾಳಿ

ಇನ್ನು ಇದೇ ಪ್ರಕರಣದಲ್ಲಿ ಇತ್ತೀಚೆಗೆ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿಕೆ‌ ನಾಗರಾಜಪ್ಪರನ್ನು ಬಂಧಿಸಲಾಗಿತ್ತು. 14 ದಿನಗಳ ಕಾಲ ಇಡಿ ಕಸ್ಟಡಿಗೆ ಪಡೆದುಕೊಂಡಿತ್ತು. ಇಡಿ ತನಿಖೆ ವೇಳೆ ಭೋವಿ ಸಮುದಾಯದ ಏಜೆಂಟರ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿರುವ ಮಹತ್ವದ ದಾಲೆಗಳನ್ನು ಪತ್ತೆ ಹಚ್ಚಿದ್ದರು.

ವರದಿ: ಪ್ರದೀಪ್​ ಚಿಕ್ಕಾಟೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:42 am, Sun, 13 April 25

ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ನಾಯಿ ಬಂಟಿಗೆ ಸಿಗುತ್ತಿದ್ದ ರಾಯಲ್ ಟ್ರೀಟ್​ಮೆಂಟ್ ಬಗ್ಗೆ ರಾಕೇಶ್ ಮಾತು
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
‘ಈ ಸಲ ಕಪ್ ನಮ್ದೇ ಅಂತ ಮಾತ್ರ ಹೇಳಬೇಡಿ’; ಅನಿಲ್ ಕುಂಬ್ಳೆ ಮಾತು
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಯುವತಿಗೆ ಪ್ರೊಪೋಸ್​ ಮಾಡಲು ರಿಂಗ್ ಹಿಡಿದು ಫಾಲ್ಸ್ ಬಳಿ ಹೋದ ವ್ಯಕ್ತಿ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ
ಕಾಂಗ್ರೆಸ್ ಮುಖಂಡರು ಎದುರಾದಾಗ ಮಾತಾಡದೆ ವಾಪಸ್ಸಾದ ವಿಜಯೇಂದ್ರ