ಭೋವಿ ನಿಗಮ ಅಕ್ರಮ ಕೇಸ್​; ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ ತನಿಖಾಧಿಕಾರಿ ಅಮಾನತು

ಭೋವಿ ನಿಗಮದಲ್ಲಿ ಕೋಟ್ಯಂತರ ರೂ. ಅಕ್ರಮ ಆರೋಪ ಕೇಸ್​ಗೆ ಸಂಬಂಧಿಸಿ ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ ತನಿಖಾಧಿಕಾರಿ ಎ.ಡಿ.ನಾಗರಾಜ್ ಅವರನ್ನು ಅಮಾನತು ಮಾಡಿ ಸಿಐಡಿ ಡಿಜಿ ಸಲೀಂ ಅವರು ಆದೇಶ ಹೊರಡಿಸಿದ್ದಾರೆ. ಸಿಐಡಿ ತನಿಖೆ ಮುಂದುವರೆಸಿದೆ.

ಭೋವಿ ನಿಗಮ ಅಕ್ರಮ ಕೇಸ್​; ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ ತನಿಖಾಧಿಕಾರಿ ಅಮಾನತು
ತನಿಖಾಧಿಕಾರಿ ಎ.ಡಿ.ನಾಗರಾಜ್
Follow us
| Updated By: ಆಯೇಷಾ ಬಾನು

Updated on: Sep 26, 2024 | 12:46 PM

ಬೆಂಗಳೂರು, ಸೆ.26: ಭೋವಿ ನಿಗಮದಲ್ಲಿ (Bhovi Development Corporation) ಕೋಟ್ಯಂತರ ರೂ. ಅಕ್ರಮ ಆರೋಪ ಕೇಸ್​ಗೆ ಸಂಬಂಧಿಸಿ ತನಿಖಾಧಿಕಾರಿ ಎ.ಡಿ.ನಾಗರಾಜ್ ಅವರನ್ನು ಅಮಾನತು ಮಾಡಿ ಸಿಐಡಿ ಡಿಜಿ ಸಲೀಂ ಅವರು ಆದೇಶ ಹೊರಡಿಸಿದ್ದಾರೆ. ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ ಅಮಾನತು (Suspend) ಮಾಡಲಾಗಿದೆ.

ಭೋವಿ ನಿಗಮದಲ್ಲಿ ಕೋಟ್ಯಂತರ ಹಣ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸರ್ಕಾರ ಸಿಐಡಿ ತನಿಖೆಗೆ ಆದೇಶ ಮಾಡಿತ್ತು. ಈ ವೇಳೆ ಎ.ಡಿ. ನಾಗರಾಜಪ್ಪ ಹಾಗೂ ಲೀಲಾವತಿ ಸೇರಿ ಹಲವರನ್ನು ಬಂಧಿಸಲಾಗಿತ್ತು. ಆರೋಪಿಗಳನ್ನ ಬಂಧಿಸಿ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ತನಿಖೆ ವೇಳೆ ತನಿಖಾಧಿಕಾರಿ ನಾಗರಾಜಪ್ಪ ಅವರು ಆರೋಪಿಗಳಿಂದ ಹಣ ಪಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಭ್ರಷ್ಟಾಚಾರ ಹಿನ್ನೆಲೆ ತನಿಖಾಧಿಕಾರಿಯಾಗಿದ್ದ ಎ.ಡಿ.ನಾಗರಾಜ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ನೂರಾರು ಕತ್ತೆ ಸೇಲ್‌ ಮಾಡಿ ಮೋಸ: ಪ್ರಕರಣ ಸಿಐಡಿ ಕೈಗೆ, ಆರೋಪಿಗಳ​ ಪತ್ತೆಗೆ ವಿಶೇಷ ತಂಡ ರಚನೆ

2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿದೆ. ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಸುಬ್ಬಪ್ಪ, ‘ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾ., ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧೀಕ್ಷಕ ಸುಬ್ಬಪ್ಪನನ್ನ ಬಂಧಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!