AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಭುವನೇಶ್ವರ – ಯಶವಂತಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಭುವನೇಶ್ವರ–ಯಶವಂತಪುರ ವೀಕ್ಲಿ ಎಕ್ಸ್‌ಪ್ರೆಸ್ ವಿಶೇಷ ರೈಲುಗಳ ಸಂಚಾರ ಅವಧಿಯನ್ನು ವಿಸ್ತರಿಸಲಾಗಿದೆ. ರೈಲು ಸಂಖ್ಯೆ 02811 ಸೆಪ್ಟೆಂಬರ್ 5ರಿಂದ ನವೆಂಬರ್ 28ರವರೆಗೆ ಹಾಗೂ 02812 ಸೆಪ್ಟೆಂಬರ್ 7ರಿಂದ ನವೆಂಬರ್ 30ರವರೆಗೆ ಸಂಚರಿಸಲಿದೆ. ಪ್ರತಿ ದಿಕ್ಕಿನಲ್ಲಿ 13 ಹೆಚ್ಚುವರಿ ಟ್ರಿಪ್‌ಗಳು ಇರಲಿವೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಭುವನೇಶ್ವರ – ಯಶವಂತಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
ಸಾಂದರ್ಭಿಕ ಚಿತ್ರImage Credit source: PTI
ಗಣಪತಿ ಶರ್ಮಾ
|

Updated on: Aug 26, 2026 | 9:22 AM

Share

ಮುಖ್ಯಾಂಶಗಳು

  • ಭುವನೇಶ್ವರ-ಯಶವಂತಪುರ ವಿಶೇಷ ರೈಲು ಸಂಚಾರ ವಿಸ್ತರಣೆ
  • ಸೆಪ್ಟೆಂಬರ್‌ನಿಂದ ನವೆಂಬರ್‌ವರೆಗೆ ರೈಲು ಸೇವೆ
  • ಪ್ರತಿ ದಿಕ್ಕಿನಲ್ಲಿ 13 ಹೆಚ್ಚುವರಿ ಟ್ರಿಪ್

ಬೆಂಗಳೂರು, ಆಗಸ್ಟ್ 26: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಭುವನೇಶ್ವರ–ಯಶವಂತಪುರ–ಭುವನೇಶ್ವರ ವೀಕ್ಲಿ ಎಕ್ಸ್‌ಪ್ರೆಸ್ ವಿಶೇಷ ರೈಲುಗಳ (Special Train) ಸಂಚಾರ ಅವಧಿಯನ್ನು ವಿಸ್ತರಿಸಲಾಗಿದೆ. ನೈಋತ್ಯ ರೈಲ್ವೆ (South Western Railway) ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ರೈಲು ಸಂಖ್ಯೆ 02811/02812ಗಳ ಸಂಚಾರವನ್ನು ಮತ್ತಷ್ಟು ದಿನಗಳವರೆಗೆ ಮುಂದುವರಿಸಲು ನಿರ್ಧರಿಸಿದೆ.

ಸೆಪ್ಟೆಂಬರ್‌ನಿಂದ ನವೆಂಬರ್‌ವರೆಗೆ ರೈಲು ಸಂಚಾರ

ರೈಲು ಸಂಖ್ಯೆ 02811 ಭುವನೇಶ್ವರ–ಯಶವಂತಪುರ ವೀಕ್ಲಿ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲು ಈ ಹಿಂದೆ ಆಗಸ್ಟ್ 29, 2026ರವರೆಗೆ ಸಂಚರಿಸಲು ನಿಗದಿಯಾಗಿತ್ತು. ಇದೀಗ ಇದರ ಸಂಚಾರವನ್ನು ಸೆಪ್ಟೆಂಬರ್ 5ರಿಂದ ನವೆಂಬರ್ 28, 2026ರವರೆಗೆ ವಿಸ್ತರಿಸಲಾಗಿದೆ.

ಅದೇ ರೀತಿ, ರೈಲು ಸಂಖ್ಯೆ 02812 ಯಶವಂತಪುರ–ಭುವನೇಶ್ವರ ವೀಕ್ಲಿ ಎಕ್ಸ್‌ಪ್ರೆಸ್ ಸ್ಪೆಷಲ್ ರೈಲಿನ ಸಂಚಾರ ಅವಧಿಯನ್ನೂ ವಿಸ್ತರಿಸಲಾಗಿದೆ. ಈ ರೈಲು ಈ ಹಿಂದೆ ಆಗಸ್ಟ್ 31ರವರೆಗೆ ಸಂಚರಿಸಲು ನಿಗದಿಯಾಗಿತ್ತು. ಇದೀಗ ಸೆಪ್ಟೆಂಬರ್ 7ರಿಂದ ನವೆಂಬರ್ 30, 2026ರವರೆಗೆ ಸಂಚಾರ ನಡೆಸಲಿದೆ.

ನೈಋತ್ಯ ರೈಲ್ವೆ ಎಕ್ಸ್ ಸಂದೇಶ

ಪ್ರತಿ ದಿಕ್ಕಿನಲ್ಲಿ 13 ಹೆಚ್ಚುವರಿ ಟ್ರಿಪ್

ವಿಸ್ತರಿತ ಅವಧಿಯಲ್ಲಿ ಎರಡೂ ರೈಲುಗಳು ಪ್ರತಿ ದಿಕ್ಕಿನಲ್ಲಿ 13 ಹೆಚ್ಚುವರಿ ಟ್ರಿಪ್‌ಗಳನ್ನು ನಡೆಸಲಿವೆ. ರೈಲುಗಳ ವೇಳಾಪಟ್ಟಿ, ನಿಲುಗಡೆಗಳು ಹಾಗೂ ಕೋಚ್‌ಗಳ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಈ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಿಸಲಾಗಿದ್ದು, ಭುವನೇಶ್ವರ–ಯಶವಂತಪುರ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಇದರಿಂದ ಅನುಕೂಲವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us